AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಗ’ಕ್ಕೆ ಬಲ ನೀಡಲಿರುವ ಪುನೀತ್​ ರಾಜ್​ಕುಮಾರ್​; ಪ್ರೀ-ರಿಲೀಸ್​ ಇವೆಂಟ್​ಗೆ ಅಪ್ಪು ಅತಿಥಿ

ದುನಿಯಾ ವಿಜಯ್​ ನಟನೆಯ ‘ಸಲಗ’ ಸಿನಿಮಾ ಹಲವು ಕಾರಣಗಳಿಂದಾಗಿ ಹೈಪ್​ ಸೃಷ್ಟಿ ಮಾಡಿದೆ. ಈಗ ಈ ಚಿತ್ರದ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಬರಲು ಒಪ್ಪಿಕೊಳ್ಳುವ ಮೂಲಕ ‘ಪವರ್​​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಅವರು ಸಾಥ್​ ನೀಡಿದ್ದಾರೆ.

‘ಸಲಗ’ಕ್ಕೆ ಬಲ ನೀಡಲಿರುವ ಪುನೀತ್​ ರಾಜ್​ಕುಮಾರ್​; ಪ್ರೀ-ರಿಲೀಸ್​ ಇವೆಂಟ್​ಗೆ ಅಪ್ಪು ಅತಿಥಿ
ಪುನೀತ್​ ರಾಜ್​ಕುಮಾರ್​, ಕೆಪಿ ಶ್ರೀಕಾಂತ್​, ದುನಿಯಾ ವಿಜಯ್​
TV9 Web
| Updated By: ಮದನ್​ ಕುಮಾರ್​|

Updated on:Oct 07, 2021 | 10:07 AM

Share

ಸ್ಯಾಂಡಲ್​ವುಡ್​ನಲ್ಲಿ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಸಲಗ’ ಚಿತ್ರ ಅ.14ರಂದು ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ದುನಿಯಾ ವಿಜಯ್​ ಮೊದಲ ಬಾರಿಗೆ ನಿರ್ದೇಶನ ಮಾಡಿರುವುದರಿಂದ ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ರಿಲೀಸ್​ಗೂ ಮುನ್ನವೇ ಸಖತ್​ ಹೈಪ್​ ಸೃಷ್ಟಿ ಮಾಡಿರುವ ‘ಸಲಗ’ ಚಿತ್ರತಂಡಕ್ಕೆ ಈಗ ಪುನೀತ್​ ರಾಜ್​ಕುಮಾರ್​ ಸಾಥ್​ ನೀಡುತ್ತಿದ್ದಾರೆ. ಶೀಘ್ರದಲ್ಲೇ ನಡೆಯಲಿರುವ ಪ್ರೀ-ರಿಲೀಸ್​ ಇವೆಂಟ್​ಗೆ ‘ಪವರ್​ ಸ್ಟಾರ್​’ ಅತಿಥಿಯಾಗಿ ಆಗಮಿಸಲಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ.

‘ಸಲಗ’ ಚಿತ್ರದ ನಿರ್ಮಾಪಕ ಕೆಪಿ ಶ್ರೀಕಾಂತ್​ ಅವರು ಈಗಾಗಲೇ ಪುನೀತ್​ ರಾಜ್​ಕುಮಾರ್​ ಅವರನ್ನು ಭೇಟಿಯಾಗಿ, ಚಿತ್ರದ ಪ್ರೀ-ರಿಲೀಸ್​ ಇವೆಂಟ್​ಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಅದಕ್ಕೆ ಪುನೀತ್​ ಕಡೆಯಿಂದ ಒಪ್ಪಿಗೆ ಕೂಡ ಸಿಕ್ಕಿದೆ. ಆ ಖುಷಿಯನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ‘ಮೊದಲ ದಿನದಿಂದಲೂ ನಮ್ಮ ತಂಡಕ್ಕೆ ಬೆಂಬಲ ನೀಡುತ್ತಿರುವ ಪುನೀತ್ ರಾಜ್​ಕುಮಾರ್ ಅವರು ಪ್ರೀ-ರಿಲೀಸ್​ ಇವೆಂಟ್​ಗೆ ಬರಲಿದ್ದಾರೆ’ ಎಂದು ಶ್ರೀಕಾಂತ್​ ಹೇಳಿದ್ದಾರೆ.

ಈ ಸಿನಿಮಾದಲ್ಲಿ ದುನಿಯಾ ವಿಜಯ್​ಗೆ ಜೋಡಿಯಾಗಿ ಸಂಜನಾ ಆನಂದ್​ ನಟಿಸಿದ್ದಾರೆ. ಡಾಲಿ ಧನಂಜಯ ಅವರು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಚರಣ್​ ರಾಜ್​ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಹಾಡುಗಳು ಸೂಪರ್​ ಹಿಟ್​ ಆಗಿವೆ. ಈ ಎಲ್ಲ ಕಾರಣಗಳಿಂದಾಗಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ. ಈಗ ಪುನೀತ್​ ಕೂಡ ಸಾಥ್​ ನೀಡುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇತ್ತೀಚೆಗಷ್ಟೇ ‘ಸಲಗ’ ಚಿತ್ರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಕೋರಿದ್ದರು. ‘ಅಕ್ಟೋಬರ್ 14ರಂದು ತೆರೆ ಕಾಣಲಿರುವ ಸಲಗ ಚಿತ್ರದ ತಂಡದವರು ನಾಯಕ ನಟ ದುನಿಯಾ ವಿಜಯ್ ಅವರ ನೇತೃತ್ವದಲ್ಲಿ ಇಂದು ನನ್ನನ್ನು ಭೇಟಿ ಮಾಡಿದರು. ಶಾಸಕರಾದ ಬೈರತಿ ಸುರೇಶ್ ಅವರು ಈ ವೇಳೆ ಹಾಜರಿದ್ದರು. ದುನಿಯಾ ವಿಜಯ್ ಒಬ್ಬ ಪ್ರತಿಭಾನ್ವಿತ ನಟ, ಹೆಚ್ಚಿನ ಶ್ರಮವಹಿಸಿ ಸಿನಿಮಾ ಮಾಡಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ’ ಎಂದು ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದರು.

ಪ್ರಿ-ರಿಲೀಸ್​ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಸೇರಿದಂತೆ ಇನ್ನೂ ಅನೇಕ ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ.

ಇದನ್ನೂ ಓದಿ:

ಒಂದೇ ದಿನ ‘ಸಲಗ’ ಮತ್ತು ‘ಕೋಟಿಗೊಬ್ಬ 3’; ಖಚಿತಪಡಿಸಿದ ನಿರ್ಮಾಪಕ

ತೆಲುಗಿನ ‘ಭೀಮ್ಲಾ ನಾಯಕ್’​ ಸಿನಿಮಾಗೆ ಪುನೀತ್​ ರಾಜ್​ಕುಮಾರ್​ ಬೆಂಬಲ; ಧನ್ಯವಾದ ಹೇಳಿದ ಪವನ್ ​ಕಲ್ಯಾಣ್​ ಫ್ಯಾನ್ಸ್

Published On - 9:41 am, Thu, 7 October 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ