AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಗ’ಕ್ಕೆ ಬಲ ನೀಡಲಿರುವ ಪುನೀತ್​ ರಾಜ್​ಕುಮಾರ್​; ಪ್ರೀ-ರಿಲೀಸ್​ ಇವೆಂಟ್​ಗೆ ಅಪ್ಪು ಅತಿಥಿ

ದುನಿಯಾ ವಿಜಯ್​ ನಟನೆಯ ‘ಸಲಗ’ ಸಿನಿಮಾ ಹಲವು ಕಾರಣಗಳಿಂದಾಗಿ ಹೈಪ್​ ಸೃಷ್ಟಿ ಮಾಡಿದೆ. ಈಗ ಈ ಚಿತ್ರದ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಬರಲು ಒಪ್ಪಿಕೊಳ್ಳುವ ಮೂಲಕ ‘ಪವರ್​​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಅವರು ಸಾಥ್​ ನೀಡಿದ್ದಾರೆ.

‘ಸಲಗ’ಕ್ಕೆ ಬಲ ನೀಡಲಿರುವ ಪುನೀತ್​ ರಾಜ್​ಕುಮಾರ್​; ಪ್ರೀ-ರಿಲೀಸ್​ ಇವೆಂಟ್​ಗೆ ಅಪ್ಪು ಅತಿಥಿ
ಪುನೀತ್​ ರಾಜ್​ಕುಮಾರ್​, ಕೆಪಿ ಶ್ರೀಕಾಂತ್​, ದುನಿಯಾ ವಿಜಯ್​
TV9 Web
| Edited By: |

Updated on:Oct 07, 2021 | 10:07 AM

Share

ಸ್ಯಾಂಡಲ್​ವುಡ್​ನಲ್ಲಿ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಸಲಗ’ ಚಿತ್ರ ಅ.14ರಂದು ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ದುನಿಯಾ ವಿಜಯ್​ ಮೊದಲ ಬಾರಿಗೆ ನಿರ್ದೇಶನ ಮಾಡಿರುವುದರಿಂದ ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ರಿಲೀಸ್​ಗೂ ಮುನ್ನವೇ ಸಖತ್​ ಹೈಪ್​ ಸೃಷ್ಟಿ ಮಾಡಿರುವ ‘ಸಲಗ’ ಚಿತ್ರತಂಡಕ್ಕೆ ಈಗ ಪುನೀತ್​ ರಾಜ್​ಕುಮಾರ್​ ಸಾಥ್​ ನೀಡುತ್ತಿದ್ದಾರೆ. ಶೀಘ್ರದಲ್ಲೇ ನಡೆಯಲಿರುವ ಪ್ರೀ-ರಿಲೀಸ್​ ಇವೆಂಟ್​ಗೆ ‘ಪವರ್​ ಸ್ಟಾರ್​’ ಅತಿಥಿಯಾಗಿ ಆಗಮಿಸಲಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ.

‘ಸಲಗ’ ಚಿತ್ರದ ನಿರ್ಮಾಪಕ ಕೆಪಿ ಶ್ರೀಕಾಂತ್​ ಅವರು ಈಗಾಗಲೇ ಪುನೀತ್​ ರಾಜ್​ಕುಮಾರ್​ ಅವರನ್ನು ಭೇಟಿಯಾಗಿ, ಚಿತ್ರದ ಪ್ರೀ-ರಿಲೀಸ್​ ಇವೆಂಟ್​ಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಅದಕ್ಕೆ ಪುನೀತ್​ ಕಡೆಯಿಂದ ಒಪ್ಪಿಗೆ ಕೂಡ ಸಿಕ್ಕಿದೆ. ಆ ಖುಷಿಯನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ‘ಮೊದಲ ದಿನದಿಂದಲೂ ನಮ್ಮ ತಂಡಕ್ಕೆ ಬೆಂಬಲ ನೀಡುತ್ತಿರುವ ಪುನೀತ್ ರಾಜ್​ಕುಮಾರ್ ಅವರು ಪ್ರೀ-ರಿಲೀಸ್​ ಇವೆಂಟ್​ಗೆ ಬರಲಿದ್ದಾರೆ’ ಎಂದು ಶ್ರೀಕಾಂತ್​ ಹೇಳಿದ್ದಾರೆ.

ಈ ಸಿನಿಮಾದಲ್ಲಿ ದುನಿಯಾ ವಿಜಯ್​ಗೆ ಜೋಡಿಯಾಗಿ ಸಂಜನಾ ಆನಂದ್​ ನಟಿಸಿದ್ದಾರೆ. ಡಾಲಿ ಧನಂಜಯ ಅವರು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಚರಣ್​ ರಾಜ್​ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಹಾಡುಗಳು ಸೂಪರ್​ ಹಿಟ್​ ಆಗಿವೆ. ಈ ಎಲ್ಲ ಕಾರಣಗಳಿಂದಾಗಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ. ಈಗ ಪುನೀತ್​ ಕೂಡ ಸಾಥ್​ ನೀಡುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇತ್ತೀಚೆಗಷ್ಟೇ ‘ಸಲಗ’ ಚಿತ್ರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಕೋರಿದ್ದರು. ‘ಅಕ್ಟೋಬರ್ 14ರಂದು ತೆರೆ ಕಾಣಲಿರುವ ಸಲಗ ಚಿತ್ರದ ತಂಡದವರು ನಾಯಕ ನಟ ದುನಿಯಾ ವಿಜಯ್ ಅವರ ನೇತೃತ್ವದಲ್ಲಿ ಇಂದು ನನ್ನನ್ನು ಭೇಟಿ ಮಾಡಿದರು. ಶಾಸಕರಾದ ಬೈರತಿ ಸುರೇಶ್ ಅವರು ಈ ವೇಳೆ ಹಾಜರಿದ್ದರು. ದುನಿಯಾ ವಿಜಯ್ ಒಬ್ಬ ಪ್ರತಿಭಾನ್ವಿತ ನಟ, ಹೆಚ್ಚಿನ ಶ್ರಮವಹಿಸಿ ಸಿನಿಮಾ ಮಾಡಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ’ ಎಂದು ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದರು.

ಪ್ರಿ-ರಿಲೀಸ್​ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಸೇರಿದಂತೆ ಇನ್ನೂ ಅನೇಕ ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ.

ಇದನ್ನೂ ಓದಿ:

ಒಂದೇ ದಿನ ‘ಸಲಗ’ ಮತ್ತು ‘ಕೋಟಿಗೊಬ್ಬ 3’; ಖಚಿತಪಡಿಸಿದ ನಿರ್ಮಾಪಕ

ತೆಲುಗಿನ ‘ಭೀಮ್ಲಾ ನಾಯಕ್’​ ಸಿನಿಮಾಗೆ ಪುನೀತ್​ ರಾಜ್​ಕುಮಾರ್​ ಬೆಂಬಲ; ಧನ್ಯವಾದ ಹೇಳಿದ ಪವನ್ ​ಕಲ್ಯಾಣ್​ ಫ್ಯಾನ್ಸ್

Published On - 9:41 am, Thu, 7 October 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ