AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಕ್ಕೆ ಹೋಗುತ್ತಾ ‘ಕೋಟಿಗೊಬ್ಬ 3’ ರಿಲೀಸ್ ಡೇಟ್? ನಾಳೆ ಸುದೀಪ್ ಜತೆ ‘ಸಲಗ’ ನಿರ್ಮಾಪಕರ ಭೇಟಿ

ದು ಹೀರೋಗಳಿಗೆ ಸಂಬಂಧಿಸಿದ ವಿಷಯವಲ್ಲ. ನಿರ್ಮಾಪಕರೇ ಚರ್ಚಿಸಿ ದಿನಾಂಕ ಫಿಕ್ಸ್ ಮಾಡ್ತಾರೆ. ಇಂಡಸ್ಟ್ರಿಯಲ್ಲಿ ನಾವು ಎಲ್ಲರೂ ಚೆನ್ನಾಗಿಯೇ ಇದ್ದೇವೆ’ ಎಂದು ಸ್ಪಷ್ಟನೆ ನೀಡಿದ್ದಾರೆ ದುನಿಯಾ ವಿಜಯ್.

ಮುಂದಕ್ಕೆ ಹೋಗುತ್ತಾ ‘ಕೋಟಿಗೊಬ್ಬ 3’ ರಿಲೀಸ್ ಡೇಟ್? ನಾಳೆ ಸುದೀಪ್ ಜತೆ ‘ಸಲಗ’ ನಿರ್ಮಾಪಕರ ಭೇಟಿ
ಮುಂದೂಡಲ್ಪಡಲಿದೆ ಕೋಟಿಗೊಬ್ಬ 3 ರಿಲೀಸ್​ ಡೇಟ್​? ನಾಳೆ ಸುದೀಪ್​ ಭೇಟಿ ಮಾಡ್ತೀನಿ ಎಂದ ಸಲಗ ನಿರ್ಮಾಪಕ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 26, 2021 | 4:18 PM

Share

ಚಿತ್ರಮಂದಿರಗಳಲ್ಲಿ ಶೇ.100 ಭರ್ತಿಗೆ ಅವಕಾಶ ನೀಡಿದ ನಂತರದಲ್ಲಿ ಸ್ಟಾರ್​ ಸಿನಿಮಾ ನಿರ್ಮಾಪಕರು ತಮ್ಮ ರಿಲೀಸ್​ ಡೇಟ್​ ಅನೌನ್ಸ್​ ಮಾಡುತ್ತಿವೆ.  ಅಕ್ಟೋಬರ್​ 14ರಂದು ದುನಿಯಾ ವಿಜಯ್​ ನಟನೆಯ ‘ಸಲಗ’ ಹಾಗೂ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಒಟ್ಟಿಗೆ ರಿಲೀಸ್​ ಆಗಲಿದೆ ಎನ್ನಲಾಗುತ್ತಿದೆ. ಈ ವಿಚಾರ ಸಾಕಷ್ಟು ಅಚ್ಚರಿ ಮೂಡಿಸಿದೆ. ಸ್ಯಾಂಡಲ್​ವುಡ್​ನಲ್ಲಿ ಈ ರೀತಿ ಸ್ಟಾರ್​ ಸಿನಿಮಾಗಳು ಕ್ಲ್ಯಾಶ್​ ಆಗಿದ್ದು ತುಂಬಾನೇ ಅಪರೂಪ. ಈಗ ಎರಡು ಸಿನಿಮಾಗಳಲ್ಲಿ ಒಂದು ಸಿನಿಮಾದ ದಿನಾಂಕ ಮೂಂದೂಡಲ್ಪಡುವ ಸಾಧ್ಯತೆ ಇದೆ.

ಈ ಬಗ್ಗೆ ಸಲಗ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಮಾತನಾಡಿದ್ದಾರೆ. ‘ಇಂದು ದುನಿಯಾ ವಿಜಯ್ ಮನೆಯಲ್ಲಿ ಸಭೆ ಸೇರಿ ಸಿನಿಮಾ ರಿಲೀಸ್ ದಿನಾಂಕ ಫಿಕ್ಸ್ ಮಾಡಿದ್ದೇವೆ. ಕೊರೊನಾ ಹಿನ್ನೆಲೆಯಲ್ಲಿ ಸಿನಿಮಾ ರಿಲೀಸ್​  ಒಂದೂವರೆ ವರ್ಷದಿಂದ ವಿಳಂಬ ಆಗುತ್ತಲೇ ಇದೆ. ಸಲಗ ಮುಹೂರ್ತ ಕಾರ್ಯಕ್ರಮಕ್ಕೆ ಸುದೀಪ್ ಬಂದಿದ್ದರು. ಇದರಲ್ಲಿ ಯಾವುದೇ ಸ್ಟಾರ್ ವಾರ್ ಇಲ್ಲ. ನಾಳೆ ಸುದೀಪ್‌ರನ್ನು ಭೇಟಿಯಾಗುವೆ ಎಂದಿದ್ದಾರೆ’ ಕೆ.ಪಿ.ಶ್ರೀಕಾಂತ್. ಈ ವೇಳೆ ಅವರು ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವಂತೆ ಕೋರುವ ಸಾಧ್ಯತೆ ಇದೆ.

ಟಿವಿ9ಗೆ ನಟ ದುನಿಯಾ ವಿಜಯ್ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ‘ಇದು ಹೀರೋಗಳಿಗೆ ಸಂಬಂಧಿಸಿದ ವಿಷಯವಲ್ಲ. ನಿರ್ಮಾಪಕರೇ ಚರ್ಚಿಸಿ ದಿನಾಂಕ ಫಿಕ್ಸ್ ಮಾಡ್ತಾರೆ. ಇಂಡಸ್ಟ್ರಿಯಲ್ಲಿ ನಾವು ಎಲ್ಲರೂ ಚೆನ್ನಾಗಿಯೇ ಇದ್ದೇವೆ’ ಎಂದು ಸ್ಪಷ್ಟನೆ ನೀಡಿದ್ದಾರೆ ಅವರು. ಈ ಮಧ್ಯೆ ಕಿಚ್ಚ ಸುದೀಪ್​ ಕೂಡ ಟ್ವೀಟ್​ ಮಾಡಿ ಕೆ.ಪಿ.ಶ್ರೀಕಾಂತ್​ ಹಾಗೂ ದುನಿಯಾ ವಿಜಯ್​ಗೆ ಶುಭ ಕೋರಿದ್ದಾರೆ.

ಇದನ್ನೂ ಓದಿ:ಸ್ಯಾಂಡಲ್​ವುಡ್​ ಸಿನಿ ಹಬ್ಬ; ಬಹು ನಿರೀಕ್ಷಿತ ಸ್ಟಾರ್​ ಸಿನಿಮಾಗಳ ರಿಲೀಸ್​ ಡೇಟ್​ ಅನೌನ್ಸ್​ 

‘ಪವರ್​ ಇಲ್ಲದವರಿಗೆ ಪವರ್​ ಸ್ಟಾರ್​ ಅಂತ ಯಾಕೆ ಕರೆಯುತ್ತೀರಿ’? ಪವನ್​ ಕಲ್ಯಾಣ್​ ಟಾಂಗ್​ ಕೊಟ್ಟಿದ್ದು ಯಾರಿಗೆ?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ