AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಕ್ಕೆ ಹೋಗುತ್ತಾ ‘ಕೋಟಿಗೊಬ್ಬ 3’ ರಿಲೀಸ್ ಡೇಟ್? ನಾಳೆ ಸುದೀಪ್ ಜತೆ ‘ಸಲಗ’ ನಿರ್ಮಾಪಕರ ಭೇಟಿ

ದು ಹೀರೋಗಳಿಗೆ ಸಂಬಂಧಿಸಿದ ವಿಷಯವಲ್ಲ. ನಿರ್ಮಾಪಕರೇ ಚರ್ಚಿಸಿ ದಿನಾಂಕ ಫಿಕ್ಸ್ ಮಾಡ್ತಾರೆ. ಇಂಡಸ್ಟ್ರಿಯಲ್ಲಿ ನಾವು ಎಲ್ಲರೂ ಚೆನ್ನಾಗಿಯೇ ಇದ್ದೇವೆ’ ಎಂದು ಸ್ಪಷ್ಟನೆ ನೀಡಿದ್ದಾರೆ ದುನಿಯಾ ವಿಜಯ್.

ಮುಂದಕ್ಕೆ ಹೋಗುತ್ತಾ ‘ಕೋಟಿಗೊಬ್ಬ 3’ ರಿಲೀಸ್ ಡೇಟ್? ನಾಳೆ ಸುದೀಪ್ ಜತೆ ‘ಸಲಗ’ ನಿರ್ಮಾಪಕರ ಭೇಟಿ
ಮುಂದೂಡಲ್ಪಡಲಿದೆ ಕೋಟಿಗೊಬ್ಬ 3 ರಿಲೀಸ್​ ಡೇಟ್​? ನಾಳೆ ಸುದೀಪ್​ ಭೇಟಿ ಮಾಡ್ತೀನಿ ಎಂದ ಸಲಗ ನಿರ್ಮಾಪಕ
TV9 Web
| Edited By: |

Updated on: Sep 26, 2021 | 4:18 PM

Share

ಚಿತ್ರಮಂದಿರಗಳಲ್ಲಿ ಶೇ.100 ಭರ್ತಿಗೆ ಅವಕಾಶ ನೀಡಿದ ನಂತರದಲ್ಲಿ ಸ್ಟಾರ್​ ಸಿನಿಮಾ ನಿರ್ಮಾಪಕರು ತಮ್ಮ ರಿಲೀಸ್​ ಡೇಟ್​ ಅನೌನ್ಸ್​ ಮಾಡುತ್ತಿವೆ.  ಅಕ್ಟೋಬರ್​ 14ರಂದು ದುನಿಯಾ ವಿಜಯ್​ ನಟನೆಯ ‘ಸಲಗ’ ಹಾಗೂ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಒಟ್ಟಿಗೆ ರಿಲೀಸ್​ ಆಗಲಿದೆ ಎನ್ನಲಾಗುತ್ತಿದೆ. ಈ ವಿಚಾರ ಸಾಕಷ್ಟು ಅಚ್ಚರಿ ಮೂಡಿಸಿದೆ. ಸ್ಯಾಂಡಲ್​ವುಡ್​ನಲ್ಲಿ ಈ ರೀತಿ ಸ್ಟಾರ್​ ಸಿನಿಮಾಗಳು ಕ್ಲ್ಯಾಶ್​ ಆಗಿದ್ದು ತುಂಬಾನೇ ಅಪರೂಪ. ಈಗ ಎರಡು ಸಿನಿಮಾಗಳಲ್ಲಿ ಒಂದು ಸಿನಿಮಾದ ದಿನಾಂಕ ಮೂಂದೂಡಲ್ಪಡುವ ಸಾಧ್ಯತೆ ಇದೆ.

ಈ ಬಗ್ಗೆ ಸಲಗ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಮಾತನಾಡಿದ್ದಾರೆ. ‘ಇಂದು ದುನಿಯಾ ವಿಜಯ್ ಮನೆಯಲ್ಲಿ ಸಭೆ ಸೇರಿ ಸಿನಿಮಾ ರಿಲೀಸ್ ದಿನಾಂಕ ಫಿಕ್ಸ್ ಮಾಡಿದ್ದೇವೆ. ಕೊರೊನಾ ಹಿನ್ನೆಲೆಯಲ್ಲಿ ಸಿನಿಮಾ ರಿಲೀಸ್​  ಒಂದೂವರೆ ವರ್ಷದಿಂದ ವಿಳಂಬ ಆಗುತ್ತಲೇ ಇದೆ. ಸಲಗ ಮುಹೂರ್ತ ಕಾರ್ಯಕ್ರಮಕ್ಕೆ ಸುದೀಪ್ ಬಂದಿದ್ದರು. ಇದರಲ್ಲಿ ಯಾವುದೇ ಸ್ಟಾರ್ ವಾರ್ ಇಲ್ಲ. ನಾಳೆ ಸುದೀಪ್‌ರನ್ನು ಭೇಟಿಯಾಗುವೆ ಎಂದಿದ್ದಾರೆ’ ಕೆ.ಪಿ.ಶ್ರೀಕಾಂತ್. ಈ ವೇಳೆ ಅವರು ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವಂತೆ ಕೋರುವ ಸಾಧ್ಯತೆ ಇದೆ.

ಟಿವಿ9ಗೆ ನಟ ದುನಿಯಾ ವಿಜಯ್ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ‘ಇದು ಹೀರೋಗಳಿಗೆ ಸಂಬಂಧಿಸಿದ ವಿಷಯವಲ್ಲ. ನಿರ್ಮಾಪಕರೇ ಚರ್ಚಿಸಿ ದಿನಾಂಕ ಫಿಕ್ಸ್ ಮಾಡ್ತಾರೆ. ಇಂಡಸ್ಟ್ರಿಯಲ್ಲಿ ನಾವು ಎಲ್ಲರೂ ಚೆನ್ನಾಗಿಯೇ ಇದ್ದೇವೆ’ ಎಂದು ಸ್ಪಷ್ಟನೆ ನೀಡಿದ್ದಾರೆ ಅವರು. ಈ ಮಧ್ಯೆ ಕಿಚ್ಚ ಸುದೀಪ್​ ಕೂಡ ಟ್ವೀಟ್​ ಮಾಡಿ ಕೆ.ಪಿ.ಶ್ರೀಕಾಂತ್​ ಹಾಗೂ ದುನಿಯಾ ವಿಜಯ್​ಗೆ ಶುಭ ಕೋರಿದ್ದಾರೆ.

ಇದನ್ನೂ ಓದಿ:ಸ್ಯಾಂಡಲ್​ವುಡ್​ ಸಿನಿ ಹಬ್ಬ; ಬಹು ನಿರೀಕ್ಷಿತ ಸ್ಟಾರ್​ ಸಿನಿಮಾಗಳ ರಿಲೀಸ್​ ಡೇಟ್​ ಅನೌನ್ಸ್​ 

‘ಪವರ್​ ಇಲ್ಲದವರಿಗೆ ಪವರ್​ ಸ್ಟಾರ್​ ಅಂತ ಯಾಕೆ ಕರೆಯುತ್ತೀರಿ’? ಪವನ್​ ಕಲ್ಯಾಣ್​ ಟಾಂಗ್​ ಕೊಟ್ಟಿದ್ದು ಯಾರಿಗೆ?

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ