AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಕ್ಕೆ ಹೋಗುತ್ತಾ ‘ಕೋಟಿಗೊಬ್ಬ 3’ ರಿಲೀಸ್ ಡೇಟ್? ನಾಳೆ ಸುದೀಪ್ ಜತೆ ‘ಸಲಗ’ ನಿರ್ಮಾಪಕರ ಭೇಟಿ

ದು ಹೀರೋಗಳಿಗೆ ಸಂಬಂಧಿಸಿದ ವಿಷಯವಲ್ಲ. ನಿರ್ಮಾಪಕರೇ ಚರ್ಚಿಸಿ ದಿನಾಂಕ ಫಿಕ್ಸ್ ಮಾಡ್ತಾರೆ. ಇಂಡಸ್ಟ್ರಿಯಲ್ಲಿ ನಾವು ಎಲ್ಲರೂ ಚೆನ್ನಾಗಿಯೇ ಇದ್ದೇವೆ’ ಎಂದು ಸ್ಪಷ್ಟನೆ ನೀಡಿದ್ದಾರೆ ದುನಿಯಾ ವಿಜಯ್.

ಮುಂದಕ್ಕೆ ಹೋಗುತ್ತಾ ‘ಕೋಟಿಗೊಬ್ಬ 3’ ರಿಲೀಸ್ ಡೇಟ್? ನಾಳೆ ಸುದೀಪ್ ಜತೆ ‘ಸಲಗ’ ನಿರ್ಮಾಪಕರ ಭೇಟಿ
ಮುಂದೂಡಲ್ಪಡಲಿದೆ ಕೋಟಿಗೊಬ್ಬ 3 ರಿಲೀಸ್​ ಡೇಟ್​? ನಾಳೆ ಸುದೀಪ್​ ಭೇಟಿ ಮಾಡ್ತೀನಿ ಎಂದ ಸಲಗ ನಿರ್ಮಾಪಕ
TV9 Web
| Edited By: |

Updated on: Sep 26, 2021 | 4:18 PM

Share

ಚಿತ್ರಮಂದಿರಗಳಲ್ಲಿ ಶೇ.100 ಭರ್ತಿಗೆ ಅವಕಾಶ ನೀಡಿದ ನಂತರದಲ್ಲಿ ಸ್ಟಾರ್​ ಸಿನಿಮಾ ನಿರ್ಮಾಪಕರು ತಮ್ಮ ರಿಲೀಸ್​ ಡೇಟ್​ ಅನೌನ್ಸ್​ ಮಾಡುತ್ತಿವೆ.  ಅಕ್ಟೋಬರ್​ 14ರಂದು ದುನಿಯಾ ವಿಜಯ್​ ನಟನೆಯ ‘ಸಲಗ’ ಹಾಗೂ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಒಟ್ಟಿಗೆ ರಿಲೀಸ್​ ಆಗಲಿದೆ ಎನ್ನಲಾಗುತ್ತಿದೆ. ಈ ವಿಚಾರ ಸಾಕಷ್ಟು ಅಚ್ಚರಿ ಮೂಡಿಸಿದೆ. ಸ್ಯಾಂಡಲ್​ವುಡ್​ನಲ್ಲಿ ಈ ರೀತಿ ಸ್ಟಾರ್​ ಸಿನಿಮಾಗಳು ಕ್ಲ್ಯಾಶ್​ ಆಗಿದ್ದು ತುಂಬಾನೇ ಅಪರೂಪ. ಈಗ ಎರಡು ಸಿನಿಮಾಗಳಲ್ಲಿ ಒಂದು ಸಿನಿಮಾದ ದಿನಾಂಕ ಮೂಂದೂಡಲ್ಪಡುವ ಸಾಧ್ಯತೆ ಇದೆ.

ಈ ಬಗ್ಗೆ ಸಲಗ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಮಾತನಾಡಿದ್ದಾರೆ. ‘ಇಂದು ದುನಿಯಾ ವಿಜಯ್ ಮನೆಯಲ್ಲಿ ಸಭೆ ಸೇರಿ ಸಿನಿಮಾ ರಿಲೀಸ್ ದಿನಾಂಕ ಫಿಕ್ಸ್ ಮಾಡಿದ್ದೇವೆ. ಕೊರೊನಾ ಹಿನ್ನೆಲೆಯಲ್ಲಿ ಸಿನಿಮಾ ರಿಲೀಸ್​  ಒಂದೂವರೆ ವರ್ಷದಿಂದ ವಿಳಂಬ ಆಗುತ್ತಲೇ ಇದೆ. ಸಲಗ ಮುಹೂರ್ತ ಕಾರ್ಯಕ್ರಮಕ್ಕೆ ಸುದೀಪ್ ಬಂದಿದ್ದರು. ಇದರಲ್ಲಿ ಯಾವುದೇ ಸ್ಟಾರ್ ವಾರ್ ಇಲ್ಲ. ನಾಳೆ ಸುದೀಪ್‌ರನ್ನು ಭೇಟಿಯಾಗುವೆ ಎಂದಿದ್ದಾರೆ’ ಕೆ.ಪಿ.ಶ್ರೀಕಾಂತ್. ಈ ವೇಳೆ ಅವರು ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವಂತೆ ಕೋರುವ ಸಾಧ್ಯತೆ ಇದೆ.

ಟಿವಿ9ಗೆ ನಟ ದುನಿಯಾ ವಿಜಯ್ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ‘ಇದು ಹೀರೋಗಳಿಗೆ ಸಂಬಂಧಿಸಿದ ವಿಷಯವಲ್ಲ. ನಿರ್ಮಾಪಕರೇ ಚರ್ಚಿಸಿ ದಿನಾಂಕ ಫಿಕ್ಸ್ ಮಾಡ್ತಾರೆ. ಇಂಡಸ್ಟ್ರಿಯಲ್ಲಿ ನಾವು ಎಲ್ಲರೂ ಚೆನ್ನಾಗಿಯೇ ಇದ್ದೇವೆ’ ಎಂದು ಸ್ಪಷ್ಟನೆ ನೀಡಿದ್ದಾರೆ ಅವರು. ಈ ಮಧ್ಯೆ ಕಿಚ್ಚ ಸುದೀಪ್​ ಕೂಡ ಟ್ವೀಟ್​ ಮಾಡಿ ಕೆ.ಪಿ.ಶ್ರೀಕಾಂತ್​ ಹಾಗೂ ದುನಿಯಾ ವಿಜಯ್​ಗೆ ಶುಭ ಕೋರಿದ್ದಾರೆ.

ಇದನ್ನೂ ಓದಿ:ಸ್ಯಾಂಡಲ್​ವುಡ್​ ಸಿನಿ ಹಬ್ಬ; ಬಹು ನಿರೀಕ್ಷಿತ ಸ್ಟಾರ್​ ಸಿನಿಮಾಗಳ ರಿಲೀಸ್​ ಡೇಟ್​ ಅನೌನ್ಸ್​ 

‘ಪವರ್​ ಇಲ್ಲದವರಿಗೆ ಪವರ್​ ಸ್ಟಾರ್​ ಅಂತ ಯಾಕೆ ಕರೆಯುತ್ತೀರಿ’? ಪವನ್​ ಕಲ್ಯಾಣ್​ ಟಾಂಗ್​ ಕೊಟ್ಟಿದ್ದು ಯಾರಿಗೆ?

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ