AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ಸೆಲ್ಫಿ ಗೆದುಕೊಳ್ಳಲು ಬಂದ ಅಭಿಮಾನಿ ಬಗ್ಗೆ ಸಿಟ್ಟಾದ ಸಲ್ಮಾನ್​ ಖಾನ್ ಮಾಡಿದ್ದೇನು ನೋಡಿ

ಸಲ್ಲು ನಟನೆಯ ‘ಅಂತಿಮ್​-ದಿ ಫೈನಲ್​ ಟ್ರುತ್​’​ ಸಿನಿಮಾ ಶೀಘ್ರವೇ ತೆರೆಗೆ ಬರುತ್ತಿದೆ. ಈ ಸಿನಿಮಾದ ಪ್ರಮೋಷನ್​ನಲ್ಲಿ ಅವರು ಬ್ಯುಸಿಯಾಗಿದ್ದಾರೆ. ಇದಕ್ಕಾಗಿ ಅವರು ಮುಂಬೈನಲ್ಲಿ ಸುತ್ತಾಡುತ್ತಿದ್ದಾರೆ.

Salman Khan: ಸೆಲ್ಫಿ ಗೆದುಕೊಳ್ಳಲು ಬಂದ ಅಭಿಮಾನಿ ಬಗ್ಗೆ ಸಿಟ್ಟಾದ ಸಲ್ಮಾನ್​ ಖಾನ್ ಮಾಡಿದ್ದೇನು ನೋಡಿ
ಸಲ್ಮಾನ್​ ಖಾನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 08, 2021 | 2:49 PM

ಸೆಲೆಬ್ರಿಟಿಗಳು ಅಭಿಮಾನಿಗಳ ಜತೆ ತುಂಬಾನೇ ನಾಜೂಕಾಗಿ ನಡೆದುಕೊಳ್ಳುತ್ತಾರೆ. ಎಲ್ಲೇ ಅವರು ಎದುರಾದರೂ ಪ್ರೀತಿಯಿಂದ ಮಾತನಾಡಿಸುತ್ತಾರೆ. ಆದರೆ, ಸೆಲೆಬ್ರಿಟಿಗಳ ಮೂಡ್​ ಎಲ್ಲಾ ಸಮಯದಲ್ಲೂ ಒಂದೇ ರೀತಿ ಇರುವುದಿಲ್ಲ. ಅದರಲ್ಲೂ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಅಭಿಮಾನಿಗಳ ಬಗ್ಗೆ ಸಿಟ್ಟಾದ ಸಾಕಷ್ಟು ಉದಾಹರಣೆ ಇದೆ. ಅಭಿಮಾನಿಗಳು ಸೆಲ್ಫಿಗೆ ಮುಗಿಬೀಳೋದು ಎಂದರೆ ಅವರಿಗೆ ಇಷ್ಟವಾಗುವುದಿಲ್ಲ. ಸಲ್ಲು ಅಭಿಮಾನಿಯ ಮೊಬೈಲ್​ ಕಸಿದುಕೊಂಡು ಹೋದ ಉದಾಹರಣೆಯೂ ಇದೆ. ಇದೇ ರೀತಿಯ ಘಟನೆ ಈಗ ಮತ್ತೆ ಪುನರಾವರ್ತನೆ ಆಗಿದೆ. ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಗೆ ಅವರು ಬೈದಿದ್ದಾರೆ.

ಸಲ್ಲು ನಟನೆಯ ‘ಅಂತಿಮ್​-ದಿ ಫೈನಲ್​ ಟ್ರುತ್​’​ ಸಿನಿಮಾ ಶೀಘ್ರವೇ ತೆರೆಗೆ ಬರುತ್ತಿದೆ. ಈ ಸಿನಿಮಾದ ಪ್ರಮೋಷನ್​ನಲ್ಲಿ ಅವರು ಬ್ಯುಸಿಯಾಗಿದ್ದಾರೆ. ಇದಕ್ಕಾಗಿ ಅವರು ಮುಂಬೈನಲ್ಲಿ ಸುತ್ತಾಡುತ್ತಿದ್ದಾರೆ. ಭಾನುವಾರ (ನವೆಂಬರ್​ 8) ಸಲ್ಲು ಒಂದು ಕಡೆಗೆ ತೆರಳಿದ್ದರು. ಈ ವೇಳೆ ಫ್ಯಾನ್ಸ್​ ಸೆಲ್ಫಿ ತೆಗೆದುಕೊಳ್ಳೋಕೆ ಮುಗಿಬಿದ್ದಿದ್ದಾರೆ. ಇದು ಸಲ್ಲುಗೆ ಇಷ್ಟವಾಗಿಲ್ಲ.

‘ಪಾಪರಾಜಿಗಳು ಫೋಟೋ ತೆಗೆದುಕೊಳ್ಳುತ್ತಿದ್ದಾರೆ. ದಯವಿಟ್ಟು ಸರಿದುಕೊಳ್ಳಿ’ ಎಂದು ಸಲ್ಲು ಮೊದಲು ಮನವಿ ರೂಪದಲ್ಲೇ ಅಭಿಮಾನಿಗೆ ಹೇಳಿದ್ದಾರೆ. ಆದರೆ, ಆ ಫ್ಯಾನ್​ ಈ ಮನವಿಯನ್ನು ಪುರಸ್ಕರಿಸಿಲ್ಲ. ಮತ್ತೆ ಸೆಲ್ಫಿ ತೆಗೆದುಕೊಳ್ಳುವುದಲ್ಲಿ ಅಭಿಮಾನಿ  ಬ್ಯುಸಿಯಾಗಿದ್ದ. ಇದರಿಂದ ಸಿಟ್ಟಾದ ಅವರು, ‘ನೃತ್ಯ ಮಾಡುವುದನ್ನು ನಿಲ್ಲಿಸಿ’ ಎಂದು ಸಿಟ್ಟಲ್ಲೇ ಹೇಳಿದ್ದಾರೆ.  ನಂತರದಲ್ಲಿ ಅಭಿಮಾನಿ ಅಲ್ಲಿಂದ ತೆರಳಿದ್ದಾರೆ.

ಸಲ್ಮಾನ್​ ಖಾನ್​ ನಟನೆಯ ಸಿನಿಮಾ ಎಂದರೆ ಅಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರುತ್ತವೆ. ಇದು ‘ಅಂತಿಮ್​-ದಿ ಫೈನಲ್​ ಟ್ರುತ್​’ ಸಿನಿಮಾದಲ್ಲೂ ಮುಂದುವರಿದಿದೆ ಎಂಬುದಕ್ಕೆ ಇತ್ತೀಚೆಗೆ ಬಿಡುಗಡೆಯಾಗಿದ್ದ ಟ್ರೇಲರ್​ ಸಾಕ್ಷ್ಯ ನೀಡಿತ್ತು. ನವೆಂಬರ್​ 26ರಂದು ಸಿನಿಮಾ ತೆರೆಗೆ ಬರುತ್ತಿದೆ. ಆಯುಶ್​ ಶರ್ಮಾ ಗ್ಯಾಂಗ್​ಸ್ಟರ್​ ಆಗಿ ಕಾಣಿಸಿಕೊಂಡರೆ, ಸಲ್ಲು ಸಿಖ್​ ಪೊಲೀಸ್​ ಆಗಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಪ್ರೇಕ್ಷಕರು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜಾನ್​ ಅಬ್ರಾಹಂ ನಟನೆಯ ‘ಸತ್ಯಮೇವ ಜಯತೆ’ ಸಿನಿಮಾ ಹಿಟ್​ ಆಗಿತ್ತು. ಅದರ ಸೀಕ್ವೆಲ್​ ಆಗಿ ‘ಸತ್ಯಮೇವ ಜಯತೆ 2’ ತೆರೆಗೆ ಬರುತ್ತಿದೆ. ಈ ಚಿತ್ರವೂ ನವೆಂಬರ್​ 26ರಂದು ರಿಲೀಸ್​ ಆಗುತ್ತಿದೆ. ಈಗ ಅದೇ ದಿನ ಸಲ್ಲು ಸಿನಿಮಾ ಕೂಡ ರಿಲೀಸ್​ ಆಗುತ್ತಿದೆ. ಹೀಗಾಗಿ, ಬಾಕ್ಸ್​ ಆಫೀಸ್​ನಲ್ಲಿ ಎರಡು ದೊಡ್ಡ ಬಜೆಟ್​ ಸಿನಿಮಾಗಳು ಮುಖಾಮುಖಿ ಆಗುತ್ತಿವೆ. ‘ಅಂತಿಮ್​-ದಿ ಫೈನಲ್​ ಟ್ರುತ್​’ ಸಿನಿಮಾ ದೀಪಾವಳಿಗೆ ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾದ ಕೆಲ ದೃಶ್ಯಗಳನ್ನು ರೀಶೂಟ್​ ಮಾಡಲಾಗಿದೆ. ಇದರ ಎಡಿಟಿಂಗ್​ಗೆ ಹೆಚ್ಚು ಸಮಯ ಹಿಡಿದಿದೆ. ಹೀಗಾಗಿ, ನವೆಂಬರ್ 26ಕ್ಕೆ ಸಿನಿಮಾ ರಿಲೀಸ್​ ಆಗುತ್ತಿದೆ.

ಇದನ್ನೂ ಓದಿ: Antim Movie Trailer: ‘ಅಂತಿಮ್’​ ಟ್ರೇಲರ್​ನಲ್ಲಿ ಪೊಲೀಸ್​ ಆಗಿ ಮಿಂಚಿದ ಸಲ್ಮಾನ್​ ಖಾನ್​; ಸಲ್ಲು ಲುಕ್​ಗೆ ಫ್ಯಾನ್ಸ್​ ಫಿದಾ

Kiran Gosavi: ಆರ್ಯನ್​ ಸಿಕ್ಕಿಬಿದ್ದಾಗ ಸೆಲ್ಫಿ ಕ್ಲಿಕ್ಕಿಸಿ ಖುಷಿಪಟ್ಟಿದ್ದ ಕಿರಣ್​ ಗೋಸಾವಿ ಅರೆಸ್ಟ್​;​ ಈ ವ್ಯಕ್ತಿ ಮೇಲಿನ ಆರೋಪ ಒಂದೆರಡಲ್ಲ

Published On - 2:46 pm, Mon, 8 November 21

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?