AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ಸೆಲ್ಫಿ ಗೆದುಕೊಳ್ಳಲು ಬಂದ ಅಭಿಮಾನಿ ಬಗ್ಗೆ ಸಿಟ್ಟಾದ ಸಲ್ಮಾನ್​ ಖಾನ್ ಮಾಡಿದ್ದೇನು ನೋಡಿ

ಸಲ್ಲು ನಟನೆಯ ‘ಅಂತಿಮ್​-ದಿ ಫೈನಲ್​ ಟ್ರುತ್​’​ ಸಿನಿಮಾ ಶೀಘ್ರವೇ ತೆರೆಗೆ ಬರುತ್ತಿದೆ. ಈ ಸಿನಿಮಾದ ಪ್ರಮೋಷನ್​ನಲ್ಲಿ ಅವರು ಬ್ಯುಸಿಯಾಗಿದ್ದಾರೆ. ಇದಕ್ಕಾಗಿ ಅವರು ಮುಂಬೈನಲ್ಲಿ ಸುತ್ತಾಡುತ್ತಿದ್ದಾರೆ.

Salman Khan: ಸೆಲ್ಫಿ ಗೆದುಕೊಳ್ಳಲು ಬಂದ ಅಭಿಮಾನಿ ಬಗ್ಗೆ ಸಿಟ್ಟಾದ ಸಲ್ಮಾನ್​ ಖಾನ್ ಮಾಡಿದ್ದೇನು ನೋಡಿ
ಸಲ್ಮಾನ್​ ಖಾನ್​
TV9 Web
| Edited By: |

Updated on:Nov 08, 2021 | 2:49 PM

Share

ಸೆಲೆಬ್ರಿಟಿಗಳು ಅಭಿಮಾನಿಗಳ ಜತೆ ತುಂಬಾನೇ ನಾಜೂಕಾಗಿ ನಡೆದುಕೊಳ್ಳುತ್ತಾರೆ. ಎಲ್ಲೇ ಅವರು ಎದುರಾದರೂ ಪ್ರೀತಿಯಿಂದ ಮಾತನಾಡಿಸುತ್ತಾರೆ. ಆದರೆ, ಸೆಲೆಬ್ರಿಟಿಗಳ ಮೂಡ್​ ಎಲ್ಲಾ ಸಮಯದಲ್ಲೂ ಒಂದೇ ರೀತಿ ಇರುವುದಿಲ್ಲ. ಅದರಲ್ಲೂ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಅಭಿಮಾನಿಗಳ ಬಗ್ಗೆ ಸಿಟ್ಟಾದ ಸಾಕಷ್ಟು ಉದಾಹರಣೆ ಇದೆ. ಅಭಿಮಾನಿಗಳು ಸೆಲ್ಫಿಗೆ ಮುಗಿಬೀಳೋದು ಎಂದರೆ ಅವರಿಗೆ ಇಷ್ಟವಾಗುವುದಿಲ್ಲ. ಸಲ್ಲು ಅಭಿಮಾನಿಯ ಮೊಬೈಲ್​ ಕಸಿದುಕೊಂಡು ಹೋದ ಉದಾಹರಣೆಯೂ ಇದೆ. ಇದೇ ರೀತಿಯ ಘಟನೆ ಈಗ ಮತ್ತೆ ಪುನರಾವರ್ತನೆ ಆಗಿದೆ. ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಗೆ ಅವರು ಬೈದಿದ್ದಾರೆ.

ಸಲ್ಲು ನಟನೆಯ ‘ಅಂತಿಮ್​-ದಿ ಫೈನಲ್​ ಟ್ರುತ್​’​ ಸಿನಿಮಾ ಶೀಘ್ರವೇ ತೆರೆಗೆ ಬರುತ್ತಿದೆ. ಈ ಸಿನಿಮಾದ ಪ್ರಮೋಷನ್​ನಲ್ಲಿ ಅವರು ಬ್ಯುಸಿಯಾಗಿದ್ದಾರೆ. ಇದಕ್ಕಾಗಿ ಅವರು ಮುಂಬೈನಲ್ಲಿ ಸುತ್ತಾಡುತ್ತಿದ್ದಾರೆ. ಭಾನುವಾರ (ನವೆಂಬರ್​ 8) ಸಲ್ಲು ಒಂದು ಕಡೆಗೆ ತೆರಳಿದ್ದರು. ಈ ವೇಳೆ ಫ್ಯಾನ್ಸ್​ ಸೆಲ್ಫಿ ತೆಗೆದುಕೊಳ್ಳೋಕೆ ಮುಗಿಬಿದ್ದಿದ್ದಾರೆ. ಇದು ಸಲ್ಲುಗೆ ಇಷ್ಟವಾಗಿಲ್ಲ.

‘ಪಾಪರಾಜಿಗಳು ಫೋಟೋ ತೆಗೆದುಕೊಳ್ಳುತ್ತಿದ್ದಾರೆ. ದಯವಿಟ್ಟು ಸರಿದುಕೊಳ್ಳಿ’ ಎಂದು ಸಲ್ಲು ಮೊದಲು ಮನವಿ ರೂಪದಲ್ಲೇ ಅಭಿಮಾನಿಗೆ ಹೇಳಿದ್ದಾರೆ. ಆದರೆ, ಆ ಫ್ಯಾನ್​ ಈ ಮನವಿಯನ್ನು ಪುರಸ್ಕರಿಸಿಲ್ಲ. ಮತ್ತೆ ಸೆಲ್ಫಿ ತೆಗೆದುಕೊಳ್ಳುವುದಲ್ಲಿ ಅಭಿಮಾನಿ  ಬ್ಯುಸಿಯಾಗಿದ್ದ. ಇದರಿಂದ ಸಿಟ್ಟಾದ ಅವರು, ‘ನೃತ್ಯ ಮಾಡುವುದನ್ನು ನಿಲ್ಲಿಸಿ’ ಎಂದು ಸಿಟ್ಟಲ್ಲೇ ಹೇಳಿದ್ದಾರೆ.  ನಂತರದಲ್ಲಿ ಅಭಿಮಾನಿ ಅಲ್ಲಿಂದ ತೆರಳಿದ್ದಾರೆ.

ಸಲ್ಮಾನ್​ ಖಾನ್​ ನಟನೆಯ ಸಿನಿಮಾ ಎಂದರೆ ಅಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರುತ್ತವೆ. ಇದು ‘ಅಂತಿಮ್​-ದಿ ಫೈನಲ್​ ಟ್ರುತ್​’ ಸಿನಿಮಾದಲ್ಲೂ ಮುಂದುವರಿದಿದೆ ಎಂಬುದಕ್ಕೆ ಇತ್ತೀಚೆಗೆ ಬಿಡುಗಡೆಯಾಗಿದ್ದ ಟ್ರೇಲರ್​ ಸಾಕ್ಷ್ಯ ನೀಡಿತ್ತು. ನವೆಂಬರ್​ 26ರಂದು ಸಿನಿಮಾ ತೆರೆಗೆ ಬರುತ್ತಿದೆ. ಆಯುಶ್​ ಶರ್ಮಾ ಗ್ಯಾಂಗ್​ಸ್ಟರ್​ ಆಗಿ ಕಾಣಿಸಿಕೊಂಡರೆ, ಸಲ್ಲು ಸಿಖ್​ ಪೊಲೀಸ್​ ಆಗಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಪ್ರೇಕ್ಷಕರು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜಾನ್​ ಅಬ್ರಾಹಂ ನಟನೆಯ ‘ಸತ್ಯಮೇವ ಜಯತೆ’ ಸಿನಿಮಾ ಹಿಟ್​ ಆಗಿತ್ತು. ಅದರ ಸೀಕ್ವೆಲ್​ ಆಗಿ ‘ಸತ್ಯಮೇವ ಜಯತೆ 2’ ತೆರೆಗೆ ಬರುತ್ತಿದೆ. ಈ ಚಿತ್ರವೂ ನವೆಂಬರ್​ 26ರಂದು ರಿಲೀಸ್​ ಆಗುತ್ತಿದೆ. ಈಗ ಅದೇ ದಿನ ಸಲ್ಲು ಸಿನಿಮಾ ಕೂಡ ರಿಲೀಸ್​ ಆಗುತ್ತಿದೆ. ಹೀಗಾಗಿ, ಬಾಕ್ಸ್​ ಆಫೀಸ್​ನಲ್ಲಿ ಎರಡು ದೊಡ್ಡ ಬಜೆಟ್​ ಸಿನಿಮಾಗಳು ಮುಖಾಮುಖಿ ಆಗುತ್ತಿವೆ. ‘ಅಂತಿಮ್​-ದಿ ಫೈನಲ್​ ಟ್ರುತ್​’ ಸಿನಿಮಾ ದೀಪಾವಳಿಗೆ ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾದ ಕೆಲ ದೃಶ್ಯಗಳನ್ನು ರೀಶೂಟ್​ ಮಾಡಲಾಗಿದೆ. ಇದರ ಎಡಿಟಿಂಗ್​ಗೆ ಹೆಚ್ಚು ಸಮಯ ಹಿಡಿದಿದೆ. ಹೀಗಾಗಿ, ನವೆಂಬರ್ 26ಕ್ಕೆ ಸಿನಿಮಾ ರಿಲೀಸ್​ ಆಗುತ್ತಿದೆ.

ಇದನ್ನೂ ಓದಿ: Antim Movie Trailer: ‘ಅಂತಿಮ್’​ ಟ್ರೇಲರ್​ನಲ್ಲಿ ಪೊಲೀಸ್​ ಆಗಿ ಮಿಂಚಿದ ಸಲ್ಮಾನ್​ ಖಾನ್​; ಸಲ್ಲು ಲುಕ್​ಗೆ ಫ್ಯಾನ್ಸ್​ ಫಿದಾ

Kiran Gosavi: ಆರ್ಯನ್​ ಸಿಕ್ಕಿಬಿದ್ದಾಗ ಸೆಲ್ಫಿ ಕ್ಲಿಕ್ಕಿಸಿ ಖುಷಿಪಟ್ಟಿದ್ದ ಕಿರಣ್​ ಗೋಸಾವಿ ಅರೆಸ್ಟ್​;​ ಈ ವ್ಯಕ್ತಿ ಮೇಲಿನ ಆರೋಪ ಒಂದೆರಡಲ್ಲ

Published On - 2:46 pm, Mon, 8 November 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ