ರಾಜ್​ಕುಮಾರ್ ನಟನೆಯ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ ಸಲ್ಮಾನ್ ಖಾನ್ ತಂದೆ

ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಅವರಿಗೆ ಇಂದು (ನವೆಂಬರ್ 24) ಜನ್ಮದಿನ. ತಂದೆ ಜನ್ಮದಿನಕ್ಕೆ ಸಲ್ಲು ವಿಶ್ ಮಾಡಿದ್ದಾರೆ. ಸಲೀಮ್ ಖಾನ್ ಅವರು ಖ್ಯಾತ ಕಥೆಗಾರರು ಹಾಗೂ ಚಿತ್ರಕಥೆ ಬರಹಗಾರರು. ಅವರು ಹಾಗೂ ಜಾವೇದ್ ಅಖ್ತರ್ ಅವರದ್ದು ಹಿಟ್ ಕಾಂಬಿನೇಷನ್. ಇಬ್ಬರೂ ಸೇರಿ ಅನೇಕ ಸೂಪರ್ ಹಿಟ್ ಕಥೆಗಳನ್ನು ನೀಡಿದ್ದರು

ರಾಜ್​ಕುಮಾರ್ ನಟನೆಯ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ ಸಲ್ಮಾನ್ ಖಾನ್ ತಂದೆ
ರಾಜ್​ಕುಮಾರ್ ನಟನೆಯ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ ಸಲ್ಮಾನ್ ಖಾನ್ ತಂದೆ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Nov 24, 2024 | 6:30 AM

ರಾಜ್​ಕುಮಾರ್ ನಟಿಸಿದ ಬಹುತೇಕ ಸಿನಿಮಾಗಳು ಯಶಸ್ಸು ಕಂಡಿವೆ. ಅದಕ್ಕೆ ಕಾರಣ ಆಗಿದ್ದು ಅವರು ಆಯ್ಕೆ ಮಾಡುತ್ತಿದ್ದ ಕಥೆಗಳು. ಹಲವು ವರ್ಷಗಳ ಕಾಲ ಚಿತ್ರರಂಗವನ್ನು ಆಳಿದ್ದ ಅವರು ಸಿನಿಮಾ ಆಯ್ಕೆಯಲ್ಲಿ ಎಂದಿಗೂ ಎಡವಿಲ್ಲ. ಚಿತ್ರಗಳಲ್ಲಿ ಅವರು ಅದ್ಭುತವಾಗಿ ನಟಿಸುತ್ತಿದ್ದರು. ರಾಜ್​ಕುಮಾರ್ ಅವರು ಆಯ್ಕೆ ಮಾಡಿಕೊಳ್ಳುತ್ತಿದ್ದ ಕಥೆಗಳು ಆ ರೀತಿಯಲ್ಲಿ ಇರುತ್ತಿದ್ದವು. ಇವರ ಸಿನಿಮಾಗೆ ಸಲ್ಮಾನ್ ಖಾನ್ ತಂದೆ ಕೂಡ ಕಥೆ ಬರೆದಿದ್ದರು ಎಂಬ ವಿಚಾರ ಗೊತ್ತೇ?

ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಅವರಿಗೆ ಇಂದು (ನವೆಂಬರ್ 24) ಜನ್ಮದಿನ. ತಂದೆ ಜನ್ಮದಿನಕ್ಕೆ ಸಲ್ಲು ವಿಶ್ ಮಾಡಿದ್ದಾರೆ. ಸಲೀಮ್ ಖಾನ್ ಅವರು ಖ್ಯಾತ ಕಥೆಗಾರರು ಹಾಗೂ ಚಿತ್ರಕಥೆ ಬರಹಗಾರರು. ಅವರು ಹಾಗೂ ಜಾವೇದ್ ಅಖ್ತರ್ ಅವರದ್ದು ಹಿಟ್ ಕಾಂಬಿನೇಷನ್. ಇಬ್ಬರೂ ಸೇರಿ ಅನೇಕ ಸೂಪರ್ ಹಿಟ್ ಕಥೆಗಳನ್ನು ನೀಡಿದ್ದರು. ಅದೇ ರೀತಿ ಕನ್ನಡದಲ್ಲೂ ಅವರು ಕಥೆ ಬರೆದಿದ್ದರು. ಅವರು ಕನ್ನಡದಲ್ಲಿ ಕೆಲಸ ಮಾಡಿದ ಎರಡು ಸಿನಿಮಾಗಳು ಇವು.

1975ರಲ್ಲಿ ಅಮಿತಾಭ್ ಬಚ್ಚನ್ ನಟನೆಯ ‘ಶೋಲೆ’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರಕ್ಕೆ ಸಲೀಮ್ ಹಾಗೂ ಜಾವೇದ್ ಕಥೆ ಬರೆದಿದ್ದರು. ಆ ಬಳಿಕ ಅವರಿಗೆ ಪರಭಾಷೆಗಳಿಂದಲೂ ಬೇಡಿಕೆ ಸೃಷ್ಟಿ ಆಯಿತು. ‘ಶೋಲೆ’ ಯಶಸ್ಸಿನ ಬಳಿಕ ಅವರು ನೇರವಾಗಿ ಕನ್ನಡಕ್ಕೆ ಕಾಲಿಟ್ಟಿದ್ದರು. ಅವರು ಕನ್ನಡದಲ್ಲಿ ಸಿನಿಮಾ ಮಾಡಿದ್ದರು. 1976ರಲ್ಲಿ ‘ಪ್ರೇಮದ ಕಾಣಿಕೆ’ ಸಿನಿಮಾ ರಿಲೀಸ್ ಆಯಿತು. ಇದು ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ವಿ. ಸೋಮಶೇಖರ್ ನಿರ್ದೇಶನ ಮಾಡಿದರೆ ರಾಜ್​ಕುಮಾರ್​ಗ ಆರತಿ ಜೊತೆಯಾಗಿದ್ದರು.

ಇದನ್ನೂ ಓದಿ: ಜೂಹಿ ಮನೆಗೆ ಹೋಗಿ ಹೆಣ್ಣು ಕೇಳಿದ್ದ ಸಲ್ಮಾನ್ ಖಾನ್; ವಿರೋಧಿಸಿದ್ದು ಯಾರು?

ಆ ಬಳಿಕ ‘ರಾಜ ನನ್ನ ರಾಜ’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರವೂ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೂ ರಾಜ್​ಕುಮಾರ್ ಹೀರೋ. ಈ ಸಿನಿಮಾಗೆ ಸಲೀಮ್ ಹಾಗೂ ಜಾವೇದ್ ಕಥೆ ಬರೆದಿದ್ದರು. ಆ ಬಳಿಕ ಜಾವೇದ್ ಹಾಗೂ ಸಲೀಮ್ ಕನ್ನಡದತ್ತ ಮುಖ ಮಾಡಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!