Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಕತ್ರಿನಾ ಜಪ ಮಾಡಿದ ಸಲ್ಮಾನ್​ ಖಾನ್​; ಕಾರಣ ಏನು?

Salman Khan | Katrina Kaif: ‘ವಿಕ್ರಾಂತ್​ ರೋಣ’ ಚಿತ್ರಕ್ಕೂ ಕತ್ರಿನಾ ಕೈಫ್ ಅವರಿಗೂ ಯಾವುದೇ ಸಂಬಂಧ ಇಲ್ಲ. ಹಾಗಿದ್ದರೂ ಕೂಡ ಅವರ ಹೆಸರನ್ನು ಸಲ್ಮಾನ್​ ಖಾನ್​ ಹೇಳಿದ್ದು ಕೇಳಿ ಎಲ್ಲರೂ ನಕ್ಕಿದ್ದಾರೆ.

‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಕತ್ರಿನಾ ಜಪ ಮಾಡಿದ ಸಲ್ಮಾನ್​ ಖಾನ್​; ಕಾರಣ ಏನು?
ಸಲ್ಮಾನ್ ಖಾನ್, ಕಿಚ್ಚ ಸುದೀಪ್, ಕತ್ರಿನಾ ಕೈಫ್
Follow us
TV9 Web
| Updated By: ಮದನ್​ ಕುಮಾರ್​

Updated on:Jul 26, 2022 | 10:58 AM

ಭಾರಿ ಹೈಪ್​ ಸೃಷ್ಟಿ ಮಾಡಿರುವ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾದ ಬಿಡುಗಡೆಗೆ ಈಗ ಕ್ಷಣಗಣನೆ ಶುರುವಾಗಿದೆ. ಜುಲೈ 28ರಂದು ಈ ಚಿತ್ರ ಅದ್ದೂರಿಯಾಗಿ ರಿಲೀಸ್​ ಆಗಲಿದೆ. ಈಗಾಗಲೇ ಅನೇಕ ರಾಜ್ಯಗಳಿಗೆ ತೆರಳಿ ಕಿಚ್ಚ ಸುದೀಪ್​ ಅವರು ಪ್ರಚಾರ ಮಾಡುತ್ತಿದ್ದಾರೆ. ಸೋಮವಾರ (ಜುಲೈ 25) ಮುಂಬೈನಲ್ಲಿ ‘ವಿಕ್ರಾಂತ್​ ರೋಣ’ ಸಿನಿಮಾದ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯಿತು. ಅದರಲ್ಲಿ ಸಲ್ಮಾನ್​ ಖಾನ್​, ರಿತೇಶ್​ ದೇಶಮುಖ್​, ಸಲ್ಮಾನ್​ ಖಾನ್​ (Salman Khan), ಜಾಕ್ವೆಲಿನ್​ ಫರ್ನಾಂಡಿಸ್​, ಕಿಚ್ಚ ಸುದೀಪ್​ ಮುಂತಾದವರು ಭಾಗಿ ಆಗಿದ್ದರು. ಈ ವೇಳೆ ವೇದಿಕೆ ಮೇಲೆ ಸಲ್ಮಾನ್​ ಖಾನ್​ ಅವರು ಕತ್ರಿನಾ ಕೈಫ್​ (Katrina Kaif) ಹೆಸರು ಎತ್ತಿದ್ದಾರೆ. ಅದಕ್ಕೆ ಕಾರಣ ಆಗಿದ್ದು ಅವರ ಡ್ಯಾನ್ಸ್​!

‘ವಿಕ್ರಾಂತ್​ ರೋಣ’ ಚಿತ್ರಕ್ಕೂ ಕತ್ರಿನಾ ಕೈಫ್ ಅವರಿಗೂ ಯಾವುದೇ ಸಂಬಂಧ ಇಲ್ಲ. ಹಾಗಿದ್ದರೂ ಕೂಡ ಅವರ ಹೆಸರನ್ನು ಸಲ್ಮಾನ್​ ಖಾನ್​ ಹೇಳಿದ್ದು ಕೇಳಿ ಎಲ್ಲರೂ ನಕ್ಕಿದ್ದಾರೆ. ಈ ಸಿನಿಮಾದ ‘ರಾ ರಾ ರಕ್ಕಮ್ಮ..’ ಹಾಡಿನಲ್ಲಿ ಜಾಕ್ವೆಲಿನ್​ ಅವರ ಡ್ಯಾನ್ಸ್ ನೋಡಿ ಎಲ್ಲರೂ ಫಿದಾ ಆಗಿದ್ದಾರೆ. ಆದರೆ ಆರಂಭದ ದಿನಗಳಲ್ಲಿ ಅವರಿಗೆ ಇಷ್ಟು ಚೆನ್ನಾಗಿ ಡ್ಯಾನ್ಸ್​ ಮಾಡಲು ಬರುತ್ತಿರಲಿಲ್ಲ. ಆ ಸಂದರ್ಭವನ್ನು ‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ ವೇಳೆ ಜಾಕ್ವೆಲಿನ್​ ಫರ್ನಾಂಡಿಸ್​ ನೆನಪಿಸಿಕೊಂಡರು.

ಜಾಕ್ವೆಲಿನ್​ ಹೇಳಿದ ಮಾತಿಗೆ ರಿತೇಶ್​ ದೇಶಮುಖ್ ಪ್ರತಿಕ್ರಿಯೆ ನೀಡಿದರು. ‘ತುಂಬ ವರ್ಷಗಳ ಹಿಂದೆ ನಾನು ಮತ್ತು ಜಾಕ್ವೆಲಿನ್​ ಜೊತೆಯಾಗಿ ಕೆಲಸ ಮಾಡಿದ್ದೆವು. ಆಗ ಭಾರತೀಯ ಡ್ಯಾನ್ಸ್​ ಪ್ರಕಾರವನ್ನು ಕಲಿಯಲು ಅವರು ತುಂಬ ಕಷ್ಟಪಟ್ಟಿದ್ದರು. ಆದರೆ ಈಗ ಅವರು ಭಾರತದ ಅತ್ಯುತ್ತಮ ಡ್ಯಾನ್ಸರ್​ಗಳಲ್ಲಿ ಒಬ್ಬರಾಗಿದ್ದಾರೆ’ ಎಂದು ರಿತೇಶ್​ ದೇಶಮುಖ್​ ಹೊಗಳಿದರು.

ಇದನ್ನೂ ಓದಿ
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Vikrant Rona: ಟಿ-ಶರ್ಟ್​, ಜಾಕೆಟ್​, ಕಾಫಿ ಮಗ್​.. ಎಲ್ಲೆಲ್ಲೂ ಕಿಚ್ಚ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಹವಾ
Image
‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​
Image
Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

‘ಜಾಕ್ವೆಲಿನ್​ ಫರ್ನಾಂಡಿಸ್​ ಮಾತ್ರವಲ್ಲ.. ಕತ್ರಿನಾ ಕೈಫ್​ ಕೂಡ ತುಂಬ ಕಷ್ಟಪಟ್ಟಿದ್ದಾರೆ’ ಎಂದು ಸಲ್ಮಾನ್​ ಖಾನ್​ ಹೇಳಿದರು. ಈ ಮಾತು ಕೇಳಿ ಎಲ್ಲರೂ ಜೋರಾಗಿ ನಕ್ಕರು. ಕಿಚ್ಚ ಸುದೀಪ್​ ಮತ್ತು ಸಲ್ಮಾನ್​ ಖಾನ್​ ನಡುವೆ ಉತ್ತಮ ಬಾಂಧವ್ಯ ಇದೆ. ಅದಕ್ಕಾಗಿ ಅವರು ‘ವಿಕ್ರಾಂತ್​ ರೋಣ’ ಚಿತ್ರದ ಪ್ರೀ-ರಿಲೀಸ್​ ಇವೆಂಟ್​ಗೆ ಬಂದು ಶುಭ ಹಾರೈಸಿದ್ದಾರೆ.

‘ವಿಕ್ರಾಂತ್​ ರೋಣ’ ಸಿನಿಮಾಗೆ ಜಾಕ್​ ಮಂಜು ಬಂಡವಾಳ ಹೂಡಿದ್ದು, ಅನೂಪ್​ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಸುದೀಪ್​ ಜೊತೆ ನೀತಾ ಅಶೋಕ್​, ನಿರೂಪ್​ ಭಂಡಾರಿ ಮುಂತಾದವರು ಅಭಿನಯಿಸಿದ್ದಾರೆ ಹಾಡುಗಳಿಗೆ ಅಜನೀಶ್​ ಬಿ. ಲೋಕನಾಥ್​ ಸಂಗೀತ ನೀಡಿದ್ದಾರೆ.

Published On - 10:58 am, Tue, 26 July 22

Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!