‘ಘೋಸ್ಟ್​’ನ ಭೇಟಿ ಮಾಡಿದ ‘ಟೈಗರ್’; ಶಿವಣ್ಣ ಜೊತೆ ಪೋಸ್​ ಕೊಟ್ಟ ಸಲ್ಮಾನ್ ಖಾನ್    

‘ಘೋಸ್ಟ್’ ಸಿನಿಮಾ ಇನ್ನು ಕೆಲವೇ ದಿನಗಳಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ಹೀಗಾಗಿ, ಮುಂಬೈಗೆ ತೆರಳಿ ಸಿನಿಮಾ ಪ್ರಚಾರ ಮಾಡಲಾಗುತ್ತಿದೆ. ಈ ವೇಳೆ ಸಲ್ಮಾನ್ ಖಾನ್ ಭೇಟಿ ಆಗಿದೆ.

‘ಘೋಸ್ಟ್​’ನ ಭೇಟಿ ಮಾಡಿದ ‘ಟೈಗರ್’; ಶಿವಣ್ಣ ಜೊತೆ ಪೋಸ್​ ಕೊಟ್ಟ ಸಲ್ಮಾನ್ ಖಾನ್     
ಸಲ್ಮಾನ್-ಶಿವಣ್ಣ
Follow us
|

Updated on: Oct 14, 2023 | 2:42 PM

ಶಿವರಾಜ್​ಕುಮಾರ್ (Shivarajkumar) ಅವರು ಸದ್ಯ ‘ಘೋಸ್ಟ್’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಅಕ್ಟೋಬರ್ 19ರಂದು ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರಕ್ಕಾಗಿ ಶಿವಣ್ಣ ಹಾಗೂ ನಿರ್ದೇಶಕ ಶ್ರೀನಿವಾಸ್ ಅವರು ಮುಂಬೈನಲ್ಲಿದ್ದಾರೆ. ಈ ವೇಳೆ ಅವರು ಹಲವು ಸ್ಟಾರ್ ಹೀರೋಗಳನ್ನು ಭೇಟಿ ಮಾಡುತ್ತಿದ್ದಾರೆ. ಇತ್ತೀಚೆಗೆ ಕಮಲ್ ಹಾಸನ್ ಜೊತೆ ಶಿವಣ್ಣ ಪೋಸ್ ನೀಡಿದ್ದರು. ಈಗ ಶಿವರಾಜ್​ಕುಮಾರ್ ಅವರು ಸಲ್ಮಾನ್ ಖಾನ್ ಅವರನ್ನು ಭೇಟಿ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಶ್ರೀನಿ ಅವರು ಉತ್ತಮ ಸಿನಿಮಾಗಳನ್ನು ಮಾಡಿ ಮೆಚ್ಚುಗೆ ಪಡೆದಿದ್ದಾರೆ. ಅವರು ಶಿವರಾಜ್​ಕುಮಾರ್ ಜೊತೆ ಕೈ ಜೋಡಿಸಿದಾಗ ಸಾಕಷ್ಟು ಕುತೂಹಲ ಮೂಡಿತ್ತು. ಈಗ ‘ಘೋಸ್ಟ್’ ಸಿನಿಮಾ ಸಿದ್ಧಗೊಂಡಿದೆ. ಇನ್ನು ಕೆಲವೇ ದಿನಗಳಲ್ಲಿ ಚಿತ್ರ ರಿಲೀಸ್ ಆಗುತ್ತಿದೆ. ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ಹೀಗಾಗಿ, ಮುಂಬೈಗೆ ತೆರಳಿ ಸಿನಿಮಾ ಪ್ರಚಾರ ಮಾಡಲಾಗುತ್ತಿದೆ. ಈ ವೇಳೆ ಸಲ್ಮಾನ್ ಖಾನ್ ಭೇಟಿ ಆಗಿದೆ.

‘ಘೋಸ್ಟ್​ನ ಟೈಗರ್ ಭೇಟಿ ಮಾಡಿದಾಗ. ಟೈಗರ್ 3 ಚಿತ್ರಕ್ಕೆ ಆಲ್​ ದಿ ಬೆಸ್ಟ್’ ಎಂದು ಶಿವಣ್ಣ ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಅನೇಕರು ಶಿವಣ್ಣನ ಚಿತ್ರಕ್ಕೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ಇಬ್ಬರೂ ಸೇರಿ ಸಿನಿಮಾ ಮಾಡುವಂತೆ ಅನೇಕರು ಕೋರಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಆರೋಗ್ಯದ ಬಗ್ಗೆ ಮೂಡಿದೆ ಅನುಮಾನ; ಆತಂಕ ಹೊರಹಾಕಿದ ಅಭಿಮಾನಿಗಳು

‘ಘೋಸ್ಟ್’ ಚಿತ್ರದಲ್ಲಿ ಅನುಪಮ್ ಖೇರ್, ಜಯರಾಮ್, ಅರ್ಚನಾ ಜೋಯಿಸ್, ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ‘ಒಜಿಎಂ..’ ಹಾಡು ಗಮನ ಸೆಳೆದಿದೆ. ಈ ಚಿತ್ರದ ರಿಲೀಸ್​ಗಾಗಿ ಅಭಿಮಾನಿಗಳು ಕಾದಿದ್ದಾರೆ. ಸಿನಿಮಾದ ಅವಧಿ ಎರಡು ಗಂಟೆ ಏಳು ನಿಮಿಷ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ