AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಘೋಸ್ಟ್​’ನ ಭೇಟಿ ಮಾಡಿದ ‘ಟೈಗರ್’; ಶಿವಣ್ಣ ಜೊತೆ ಪೋಸ್​ ಕೊಟ್ಟ ಸಲ್ಮಾನ್ ಖಾನ್    

‘ಘೋಸ್ಟ್’ ಸಿನಿಮಾ ಇನ್ನು ಕೆಲವೇ ದಿನಗಳಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ಹೀಗಾಗಿ, ಮುಂಬೈಗೆ ತೆರಳಿ ಸಿನಿಮಾ ಪ್ರಚಾರ ಮಾಡಲಾಗುತ್ತಿದೆ. ಈ ವೇಳೆ ಸಲ್ಮಾನ್ ಖಾನ್ ಭೇಟಿ ಆಗಿದೆ.

‘ಘೋಸ್ಟ್​’ನ ಭೇಟಿ ಮಾಡಿದ ‘ಟೈಗರ್’; ಶಿವಣ್ಣ ಜೊತೆ ಪೋಸ್​ ಕೊಟ್ಟ ಸಲ್ಮಾನ್ ಖಾನ್     
ಸಲ್ಮಾನ್-ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on: Oct 14, 2023 | 2:42 PM

Share

ಶಿವರಾಜ್​ಕುಮಾರ್ (Shivarajkumar) ಅವರು ಸದ್ಯ ‘ಘೋಸ್ಟ್’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಅಕ್ಟೋಬರ್ 19ರಂದು ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರಕ್ಕಾಗಿ ಶಿವಣ್ಣ ಹಾಗೂ ನಿರ್ದೇಶಕ ಶ್ರೀನಿವಾಸ್ ಅವರು ಮುಂಬೈನಲ್ಲಿದ್ದಾರೆ. ಈ ವೇಳೆ ಅವರು ಹಲವು ಸ್ಟಾರ್ ಹೀರೋಗಳನ್ನು ಭೇಟಿ ಮಾಡುತ್ತಿದ್ದಾರೆ. ಇತ್ತೀಚೆಗೆ ಕಮಲ್ ಹಾಸನ್ ಜೊತೆ ಶಿವಣ್ಣ ಪೋಸ್ ನೀಡಿದ್ದರು. ಈಗ ಶಿವರಾಜ್​ಕುಮಾರ್ ಅವರು ಸಲ್ಮಾನ್ ಖಾನ್ ಅವರನ್ನು ಭೇಟಿ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಶ್ರೀನಿ ಅವರು ಉತ್ತಮ ಸಿನಿಮಾಗಳನ್ನು ಮಾಡಿ ಮೆಚ್ಚುಗೆ ಪಡೆದಿದ್ದಾರೆ. ಅವರು ಶಿವರಾಜ್​ಕುಮಾರ್ ಜೊತೆ ಕೈ ಜೋಡಿಸಿದಾಗ ಸಾಕಷ್ಟು ಕುತೂಹಲ ಮೂಡಿತ್ತು. ಈಗ ‘ಘೋಸ್ಟ್’ ಸಿನಿಮಾ ಸಿದ್ಧಗೊಂಡಿದೆ. ಇನ್ನು ಕೆಲವೇ ದಿನಗಳಲ್ಲಿ ಚಿತ್ರ ರಿಲೀಸ್ ಆಗುತ್ತಿದೆ. ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ಹೀಗಾಗಿ, ಮುಂಬೈಗೆ ತೆರಳಿ ಸಿನಿಮಾ ಪ್ರಚಾರ ಮಾಡಲಾಗುತ್ತಿದೆ. ಈ ವೇಳೆ ಸಲ್ಮಾನ್ ಖಾನ್ ಭೇಟಿ ಆಗಿದೆ.

‘ಘೋಸ್ಟ್​ನ ಟೈಗರ್ ಭೇಟಿ ಮಾಡಿದಾಗ. ಟೈಗರ್ 3 ಚಿತ್ರಕ್ಕೆ ಆಲ್​ ದಿ ಬೆಸ್ಟ್’ ಎಂದು ಶಿವಣ್ಣ ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಅನೇಕರು ಶಿವಣ್ಣನ ಚಿತ್ರಕ್ಕೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ಇಬ್ಬರೂ ಸೇರಿ ಸಿನಿಮಾ ಮಾಡುವಂತೆ ಅನೇಕರು ಕೋರಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಆರೋಗ್ಯದ ಬಗ್ಗೆ ಮೂಡಿದೆ ಅನುಮಾನ; ಆತಂಕ ಹೊರಹಾಕಿದ ಅಭಿಮಾನಿಗಳು

‘ಘೋಸ್ಟ್’ ಚಿತ್ರದಲ್ಲಿ ಅನುಪಮ್ ಖೇರ್, ಜಯರಾಮ್, ಅರ್ಚನಾ ಜೋಯಿಸ್, ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ‘ಒಜಿಎಂ..’ ಹಾಡು ಗಮನ ಸೆಳೆದಿದೆ. ಈ ಚಿತ್ರದ ರಿಲೀಸ್​ಗಾಗಿ ಅಭಿಮಾನಿಗಳು ಕಾದಿದ್ದಾರೆ. ಸಿನಿಮಾದ ಅವಧಿ ಎರಡು ಗಂಟೆ ಏಳು ನಿಮಿಷ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ