ಸುದೀಪ್ ‘ವಿಕ್ರಾಂತ್ ರೋಣ’ಗೆ ಸಿಕ್ತು ಸಲ್ಮಾನ್ ಖಾನ್ ಹೊಗಳಿಕೆ; ಇದು ಕಿಚ್ಚನ ಫ್ಯಾನ್ಸ್ ಖುಷಿಪಡುವ ವಿಚಾರ

ಸೆಪ್ಟೆಂಬರ್​ 2 ಕಿಚ್ಚ ಸುದೀಪ್​ ಬರ್ತ್​ಡೇ. ಈ ವಿಶೇಷ ದಿನದಂದು ‘ವಿಕ್ರಾಂತ್​ ರೋಣ’ ಸಿನಿಮಾದ ಫಸ್ಟ್​ ಗ್ಲಿಂಪಸ್​ ರಿಲೀಸ್​ ಆಗಿತ್ತು. ಇದಕ್ಕೆ ‘ಡೆಡ್​ ಮ್ಯಾನ್ಸ್​ ಆ್ಯಂಥಮ್​’ ಎಂದು ಹೆಸರಿಡಲಾಗಿದೆ. ಇದನ್ನು ಸಲ್ಮಾನ್ ಖಾನ್​ ವೀಕ್ಷಣೆ ಮಾಡಿದ್ದಾರೆ.

ಸುದೀಪ್ ‘ವಿಕ್ರಾಂತ್ ರೋಣ’ಗೆ ಸಿಕ್ತು ಸಲ್ಮಾನ್ ಖಾನ್ ಹೊಗಳಿಕೆ; ಇದು ಕಿಚ್ಚನ ಫ್ಯಾನ್ಸ್ ಖುಷಿಪಡುವ ವಿಚಾರ
Follow us
| Updated By: ರಾಜೇಶ್ ದುಗ್ಗುಮನೆ

Updated on:Sep 04, 2021 | 10:39 PM

ಕಿಚ್ಚ ಸುದೀಪ್​ ಹಾಗೂ ಸಲ್ಮಾನ್​ ಖಾನ್​ ಗೆಳೆತನದ ಬಗ್ಗೆ ಮತ್ತೆ ಹೊಸದಾಗಿ ಹೇಳಬೇಕಿಲ್ಲ. ‘ದಬಾಂಗ್​ 3’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು. ಈ ವೇಳೆ ಇಬ್ಬರ ನಡುವೆ ಒಳ್ಳೆಯ ಗೆಳೆತನ ಬೆಳೆದಿದೆ. ಅದು ಈಗಲೂ ಮುಂದುವರಿದುಕೊಂಡು ಬಂದಿದೆ. ಈಗ ಸುದೀಪ್​ ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಸಲ್ಮಾನ್​ ಖಾನ್​ ಮೆಚ್ಚುಗೆಯ ಮಾತನಾಡಿದ್ದಾರೆ.

ಸೆಪ್ಟೆಂಬರ್​ 2 ಕಿಚ್ಚ ಸುದೀಪ್​ ಬರ್ತ್​ಡೇ. ಈ ವಿಶೇಷ ದಿನದಂದು ‘ವಿಕ್ರಾಂತ್​ ರೋಣ’ ಸಿನಿಮಾದ ಫಸ್ಟ್​ ಗ್ಲಿಂಪಸ್​ ರಿಲೀಸ್​ ಆಗಿತ್ತು. ಇದಕ್ಕೆ ‘ಡೆಡ್​ ಮ್ಯಾನ್ಸ್​ ಆ್ಯಂಥಮ್​’ ಎಂದು ಹೆಸರಿಡಲಾಗಿದೆ. ಇದನ್ನು ಸಲ್ಮಾನ್ ಖಾನ್​ ವೀಕ್ಷಣೆ ಮಾಡಿದ್ದಾರೆ. ಇದನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿರುವ ಅವರು​ ‘ಸುದೀಪ್​ ಬೆಸ್ಟ್​ ವಿಶಸ್​’ ಎಂದು ಬರೆದುಕೊಂಡಿದ್ದಾರೆ. ಜತೆಗೆ ಫಸ್ಟ್​ ಗ್ಲಿಂಪಸ್​ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಈ ಟ್ವೀಟ್​ ಅನ್ನು ಸುದೀಪ್​ ರೀಟ್ವೀಟ್​ ಮಾಡಿಕೊಂಡು ಧನ್ಯವಾದ ಹೇಳಿದ್ದಾರೆ.

‘ವಿಕ್ರಾಂತ್​ ರೋಣ’ ಹಿಂದಿಯಲ್ಲೂ ತೆರೆಗೆ ಬರುತ್ತಿದೆ. ಈಗ ಸಲ್ಮಾನ್​ ಖಾನ್​ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವುದು ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಲಿದೆ. ಸಲ್ಮಾನ್​ ಖಾನ್ ನೀಡುತ್ತಿರುವ ಬೆಂಬಲದಿಂದ ಸಿನಿಮಾ ಮತ್ತಷ್ಟು ಜನರಿಗೆ ತಲುಪಲು ಸಹಕಾರಿಯಾಗಲಿದೆ.

ಕಿಚ್ಚ ಸುದೀಪ್​ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಹಿಂದಿ, ತೆಲುಗು ಸಿನಿಮಾಗಳಲ್ಲಿ ನಟಿಸಿ ಹೆಸರು ಮಾಡಿರುವ ಅವರು ಪರಭಾಷೆಯಲ್ಲೂ ಅಭಿಮಾನಿ ಬಳಗ ಹೊಂದಿದ್ದಾರೆ. ಬಾಲಿವುಡ್​ನ ಖ್ಯಾತ ನಟ ಸಲ್ಮಾನ್​ ಖಾನ್ ಜತೆ​​ಗೂ ಸುದೀಪ್​ಗೂ ಉತ್ತಮ ಫ್ರೆಂಡ್​ಶಿಪ್​ ಇದೆ. ‘ದಬಾಂಗ್​ 3’ ರಿಲೀಸ್​ ಆದ ನಂತರದಲ್ಲಿ ಸುದೀಪ್​ಗೆ ಸಲ್ಮಾನ್​ ಖಾನ್​ ಬಿಎಂಡಬ್ಲ್ಯು ಕಾರ್​ಅನ್ನು ಉಡುಗರೆಯಾಗಿ ನೀಡಿದ್ದರು.

ಇದನ್ನೂ ಓದಿ:ಸುದೀಪ್​ಗೆ ನೀರಜ್​ ಚೋಪ್ರಾ ಕಡೆಯಿಂದ ಹುಟ್ಟುಹಬ್ಬದ ಶುಭಾಶಯ; ‘ವಿಕ್ರಾಂತ್ ರೋಣ’ಗೂ ವಿಶೇಷ ವಿಶ್ 

ಅಕ್ರಮ ಹಣ ವರ್ಗಾವಣೆ ಪ್ರಕರಣ; ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ವಿಚಾರಣೆ

Published On - 10:25 pm, Sat, 4 September 21

ತಾಜಾ ಸುದ್ದಿ
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ