AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ‘ವಿಕ್ರಾಂತ್ ರೋಣ’ಗೆ ಸಿಕ್ತು ಸಲ್ಮಾನ್ ಖಾನ್ ಹೊಗಳಿಕೆ; ಇದು ಕಿಚ್ಚನ ಫ್ಯಾನ್ಸ್ ಖುಷಿಪಡುವ ವಿಚಾರ

ಸೆಪ್ಟೆಂಬರ್​ 2 ಕಿಚ್ಚ ಸುದೀಪ್​ ಬರ್ತ್​ಡೇ. ಈ ವಿಶೇಷ ದಿನದಂದು ‘ವಿಕ್ರಾಂತ್​ ರೋಣ’ ಸಿನಿಮಾದ ಫಸ್ಟ್​ ಗ್ಲಿಂಪಸ್​ ರಿಲೀಸ್​ ಆಗಿತ್ತು. ಇದಕ್ಕೆ ‘ಡೆಡ್​ ಮ್ಯಾನ್ಸ್​ ಆ್ಯಂಥಮ್​’ ಎಂದು ಹೆಸರಿಡಲಾಗಿದೆ. ಇದನ್ನು ಸಲ್ಮಾನ್ ಖಾನ್​ ವೀಕ್ಷಣೆ ಮಾಡಿದ್ದಾರೆ.

ಸುದೀಪ್ ‘ವಿಕ್ರಾಂತ್ ರೋಣ’ಗೆ ಸಿಕ್ತು ಸಲ್ಮಾನ್ ಖಾನ್ ಹೊಗಳಿಕೆ; ಇದು ಕಿಚ್ಚನ ಫ್ಯಾನ್ಸ್ ಖುಷಿಪಡುವ ವಿಚಾರ
TV9 Web
| Edited By: |

Updated on:Sep 04, 2021 | 10:39 PM

Share

ಕಿಚ್ಚ ಸುದೀಪ್​ ಹಾಗೂ ಸಲ್ಮಾನ್​ ಖಾನ್​ ಗೆಳೆತನದ ಬಗ್ಗೆ ಮತ್ತೆ ಹೊಸದಾಗಿ ಹೇಳಬೇಕಿಲ್ಲ. ‘ದಬಾಂಗ್​ 3’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು. ಈ ವೇಳೆ ಇಬ್ಬರ ನಡುವೆ ಒಳ್ಳೆಯ ಗೆಳೆತನ ಬೆಳೆದಿದೆ. ಅದು ಈಗಲೂ ಮುಂದುವರಿದುಕೊಂಡು ಬಂದಿದೆ. ಈಗ ಸುದೀಪ್​ ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಸಲ್ಮಾನ್​ ಖಾನ್​ ಮೆಚ್ಚುಗೆಯ ಮಾತನಾಡಿದ್ದಾರೆ.

ಸೆಪ್ಟೆಂಬರ್​ 2 ಕಿಚ್ಚ ಸುದೀಪ್​ ಬರ್ತ್​ಡೇ. ಈ ವಿಶೇಷ ದಿನದಂದು ‘ವಿಕ್ರಾಂತ್​ ರೋಣ’ ಸಿನಿಮಾದ ಫಸ್ಟ್​ ಗ್ಲಿಂಪಸ್​ ರಿಲೀಸ್​ ಆಗಿತ್ತು. ಇದಕ್ಕೆ ‘ಡೆಡ್​ ಮ್ಯಾನ್ಸ್​ ಆ್ಯಂಥಮ್​’ ಎಂದು ಹೆಸರಿಡಲಾಗಿದೆ. ಇದನ್ನು ಸಲ್ಮಾನ್ ಖಾನ್​ ವೀಕ್ಷಣೆ ಮಾಡಿದ್ದಾರೆ. ಇದನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿರುವ ಅವರು​ ‘ಸುದೀಪ್​ ಬೆಸ್ಟ್​ ವಿಶಸ್​’ ಎಂದು ಬರೆದುಕೊಂಡಿದ್ದಾರೆ. ಜತೆಗೆ ಫಸ್ಟ್​ ಗ್ಲಿಂಪಸ್​ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಈ ಟ್ವೀಟ್​ ಅನ್ನು ಸುದೀಪ್​ ರೀಟ್ವೀಟ್​ ಮಾಡಿಕೊಂಡು ಧನ್ಯವಾದ ಹೇಳಿದ್ದಾರೆ.

‘ವಿಕ್ರಾಂತ್​ ರೋಣ’ ಹಿಂದಿಯಲ್ಲೂ ತೆರೆಗೆ ಬರುತ್ತಿದೆ. ಈಗ ಸಲ್ಮಾನ್​ ಖಾನ್​ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವುದು ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಲಿದೆ. ಸಲ್ಮಾನ್​ ಖಾನ್ ನೀಡುತ್ತಿರುವ ಬೆಂಬಲದಿಂದ ಸಿನಿಮಾ ಮತ್ತಷ್ಟು ಜನರಿಗೆ ತಲುಪಲು ಸಹಕಾರಿಯಾಗಲಿದೆ.

ಕಿಚ್ಚ ಸುದೀಪ್​ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಹಿಂದಿ, ತೆಲುಗು ಸಿನಿಮಾಗಳಲ್ಲಿ ನಟಿಸಿ ಹೆಸರು ಮಾಡಿರುವ ಅವರು ಪರಭಾಷೆಯಲ್ಲೂ ಅಭಿಮಾನಿ ಬಳಗ ಹೊಂದಿದ್ದಾರೆ. ಬಾಲಿವುಡ್​ನ ಖ್ಯಾತ ನಟ ಸಲ್ಮಾನ್​ ಖಾನ್ ಜತೆ​​ಗೂ ಸುದೀಪ್​ಗೂ ಉತ್ತಮ ಫ್ರೆಂಡ್​ಶಿಪ್​ ಇದೆ. ‘ದಬಾಂಗ್​ 3’ ರಿಲೀಸ್​ ಆದ ನಂತರದಲ್ಲಿ ಸುದೀಪ್​ಗೆ ಸಲ್ಮಾನ್​ ಖಾನ್​ ಬಿಎಂಡಬ್ಲ್ಯು ಕಾರ್​ಅನ್ನು ಉಡುಗರೆಯಾಗಿ ನೀಡಿದ್ದರು.

ಇದನ್ನೂ ಓದಿ:ಸುದೀಪ್​ಗೆ ನೀರಜ್​ ಚೋಪ್ರಾ ಕಡೆಯಿಂದ ಹುಟ್ಟುಹಬ್ಬದ ಶುಭಾಶಯ; ‘ವಿಕ್ರಾಂತ್ ರೋಣ’ಗೂ ವಿಶೇಷ ವಿಶ್ 

ಅಕ್ರಮ ಹಣ ವರ್ಗಾವಣೆ ಪ್ರಕರಣ; ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ವಿಚಾರಣೆ

Published On - 10:25 pm, Sat, 4 September 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ