AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ‘ವಿಕ್ರಾಂತ್ ರೋಣ’ಗೆ ಸಿಕ್ತು ಸಲ್ಮಾನ್ ಖಾನ್ ಹೊಗಳಿಕೆ; ಇದು ಕಿಚ್ಚನ ಫ್ಯಾನ್ಸ್ ಖುಷಿಪಡುವ ವಿಚಾರ

ಸೆಪ್ಟೆಂಬರ್​ 2 ಕಿಚ್ಚ ಸುದೀಪ್​ ಬರ್ತ್​ಡೇ. ಈ ವಿಶೇಷ ದಿನದಂದು ‘ವಿಕ್ರಾಂತ್​ ರೋಣ’ ಸಿನಿಮಾದ ಫಸ್ಟ್​ ಗ್ಲಿಂಪಸ್​ ರಿಲೀಸ್​ ಆಗಿತ್ತು. ಇದಕ್ಕೆ ‘ಡೆಡ್​ ಮ್ಯಾನ್ಸ್​ ಆ್ಯಂಥಮ್​’ ಎಂದು ಹೆಸರಿಡಲಾಗಿದೆ. ಇದನ್ನು ಸಲ್ಮಾನ್ ಖಾನ್​ ವೀಕ್ಷಣೆ ಮಾಡಿದ್ದಾರೆ.

ಸುದೀಪ್ ‘ವಿಕ್ರಾಂತ್ ರೋಣ’ಗೆ ಸಿಕ್ತು ಸಲ್ಮಾನ್ ಖಾನ್ ಹೊಗಳಿಕೆ; ಇದು ಕಿಚ್ಚನ ಫ್ಯಾನ್ಸ್ ಖುಷಿಪಡುವ ವಿಚಾರ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Sep 04, 2021 | 10:39 PM

Share

ಕಿಚ್ಚ ಸುದೀಪ್​ ಹಾಗೂ ಸಲ್ಮಾನ್​ ಖಾನ್​ ಗೆಳೆತನದ ಬಗ್ಗೆ ಮತ್ತೆ ಹೊಸದಾಗಿ ಹೇಳಬೇಕಿಲ್ಲ. ‘ದಬಾಂಗ್​ 3’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು. ಈ ವೇಳೆ ಇಬ್ಬರ ನಡುವೆ ಒಳ್ಳೆಯ ಗೆಳೆತನ ಬೆಳೆದಿದೆ. ಅದು ಈಗಲೂ ಮುಂದುವರಿದುಕೊಂಡು ಬಂದಿದೆ. ಈಗ ಸುದೀಪ್​ ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಸಲ್ಮಾನ್​ ಖಾನ್​ ಮೆಚ್ಚುಗೆಯ ಮಾತನಾಡಿದ್ದಾರೆ.

ಸೆಪ್ಟೆಂಬರ್​ 2 ಕಿಚ್ಚ ಸುದೀಪ್​ ಬರ್ತ್​ಡೇ. ಈ ವಿಶೇಷ ದಿನದಂದು ‘ವಿಕ್ರಾಂತ್​ ರೋಣ’ ಸಿನಿಮಾದ ಫಸ್ಟ್​ ಗ್ಲಿಂಪಸ್​ ರಿಲೀಸ್​ ಆಗಿತ್ತು. ಇದಕ್ಕೆ ‘ಡೆಡ್​ ಮ್ಯಾನ್ಸ್​ ಆ್ಯಂಥಮ್​’ ಎಂದು ಹೆಸರಿಡಲಾಗಿದೆ. ಇದನ್ನು ಸಲ್ಮಾನ್ ಖಾನ್​ ವೀಕ್ಷಣೆ ಮಾಡಿದ್ದಾರೆ. ಇದನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿರುವ ಅವರು​ ‘ಸುದೀಪ್​ ಬೆಸ್ಟ್​ ವಿಶಸ್​’ ಎಂದು ಬರೆದುಕೊಂಡಿದ್ದಾರೆ. ಜತೆಗೆ ಫಸ್ಟ್​ ಗ್ಲಿಂಪಸ್​ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಈ ಟ್ವೀಟ್​ ಅನ್ನು ಸುದೀಪ್​ ರೀಟ್ವೀಟ್​ ಮಾಡಿಕೊಂಡು ಧನ್ಯವಾದ ಹೇಳಿದ್ದಾರೆ.

‘ವಿಕ್ರಾಂತ್​ ರೋಣ’ ಹಿಂದಿಯಲ್ಲೂ ತೆರೆಗೆ ಬರುತ್ತಿದೆ. ಈಗ ಸಲ್ಮಾನ್​ ಖಾನ್​ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವುದು ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಲಿದೆ. ಸಲ್ಮಾನ್​ ಖಾನ್ ನೀಡುತ್ತಿರುವ ಬೆಂಬಲದಿಂದ ಸಿನಿಮಾ ಮತ್ತಷ್ಟು ಜನರಿಗೆ ತಲುಪಲು ಸಹಕಾರಿಯಾಗಲಿದೆ.

ಕಿಚ್ಚ ಸುದೀಪ್​ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಹಿಂದಿ, ತೆಲುಗು ಸಿನಿಮಾಗಳಲ್ಲಿ ನಟಿಸಿ ಹೆಸರು ಮಾಡಿರುವ ಅವರು ಪರಭಾಷೆಯಲ್ಲೂ ಅಭಿಮಾನಿ ಬಳಗ ಹೊಂದಿದ್ದಾರೆ. ಬಾಲಿವುಡ್​ನ ಖ್ಯಾತ ನಟ ಸಲ್ಮಾನ್​ ಖಾನ್ ಜತೆ​​ಗೂ ಸುದೀಪ್​ಗೂ ಉತ್ತಮ ಫ್ರೆಂಡ್​ಶಿಪ್​ ಇದೆ. ‘ದಬಾಂಗ್​ 3’ ರಿಲೀಸ್​ ಆದ ನಂತರದಲ್ಲಿ ಸುದೀಪ್​ಗೆ ಸಲ್ಮಾನ್​ ಖಾನ್​ ಬಿಎಂಡಬ್ಲ್ಯು ಕಾರ್​ಅನ್ನು ಉಡುಗರೆಯಾಗಿ ನೀಡಿದ್ದರು.

ಇದನ್ನೂ ಓದಿ:ಸುದೀಪ್​ಗೆ ನೀರಜ್​ ಚೋಪ್ರಾ ಕಡೆಯಿಂದ ಹುಟ್ಟುಹಬ್ಬದ ಶುಭಾಶಯ; ‘ವಿಕ್ರಾಂತ್ ರೋಣ’ಗೂ ವಿಶೇಷ ವಿಶ್ 

ಅಕ್ರಮ ಹಣ ವರ್ಗಾವಣೆ ಪ್ರಕರಣ; ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ವಿಚಾರಣೆ

Published On - 10:25 pm, Sat, 4 September 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!