AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ‘ವಿಕ್ರಾಂತ್ ರೋಣ’ಗೆ ಸಿಕ್ತು ಸಲ್ಮಾನ್ ಖಾನ್ ಹೊಗಳಿಕೆ; ಇದು ಕಿಚ್ಚನ ಫ್ಯಾನ್ಸ್ ಖುಷಿಪಡುವ ವಿಚಾರ

ಸೆಪ್ಟೆಂಬರ್​ 2 ಕಿಚ್ಚ ಸುದೀಪ್​ ಬರ್ತ್​ಡೇ. ಈ ವಿಶೇಷ ದಿನದಂದು ‘ವಿಕ್ರಾಂತ್​ ರೋಣ’ ಸಿನಿಮಾದ ಫಸ್ಟ್​ ಗ್ಲಿಂಪಸ್​ ರಿಲೀಸ್​ ಆಗಿತ್ತು. ಇದಕ್ಕೆ ‘ಡೆಡ್​ ಮ್ಯಾನ್ಸ್​ ಆ್ಯಂಥಮ್​’ ಎಂದು ಹೆಸರಿಡಲಾಗಿದೆ. ಇದನ್ನು ಸಲ್ಮಾನ್ ಖಾನ್​ ವೀಕ್ಷಣೆ ಮಾಡಿದ್ದಾರೆ.

ಸುದೀಪ್ ‘ವಿಕ್ರಾಂತ್ ರೋಣ’ಗೆ ಸಿಕ್ತು ಸಲ್ಮಾನ್ ಖಾನ್ ಹೊಗಳಿಕೆ; ಇದು ಕಿಚ್ಚನ ಫ್ಯಾನ್ಸ್ ಖುಷಿಪಡುವ ವಿಚಾರ
TV9 Web
| Edited By: |

Updated on:Sep 04, 2021 | 10:39 PM

Share

ಕಿಚ್ಚ ಸುದೀಪ್​ ಹಾಗೂ ಸಲ್ಮಾನ್​ ಖಾನ್​ ಗೆಳೆತನದ ಬಗ್ಗೆ ಮತ್ತೆ ಹೊಸದಾಗಿ ಹೇಳಬೇಕಿಲ್ಲ. ‘ದಬಾಂಗ್​ 3’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು. ಈ ವೇಳೆ ಇಬ್ಬರ ನಡುವೆ ಒಳ್ಳೆಯ ಗೆಳೆತನ ಬೆಳೆದಿದೆ. ಅದು ಈಗಲೂ ಮುಂದುವರಿದುಕೊಂಡು ಬಂದಿದೆ. ಈಗ ಸುದೀಪ್​ ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಸಲ್ಮಾನ್​ ಖಾನ್​ ಮೆಚ್ಚುಗೆಯ ಮಾತನಾಡಿದ್ದಾರೆ.

ಸೆಪ್ಟೆಂಬರ್​ 2 ಕಿಚ್ಚ ಸುದೀಪ್​ ಬರ್ತ್​ಡೇ. ಈ ವಿಶೇಷ ದಿನದಂದು ‘ವಿಕ್ರಾಂತ್​ ರೋಣ’ ಸಿನಿಮಾದ ಫಸ್ಟ್​ ಗ್ಲಿಂಪಸ್​ ರಿಲೀಸ್​ ಆಗಿತ್ತು. ಇದಕ್ಕೆ ‘ಡೆಡ್​ ಮ್ಯಾನ್ಸ್​ ಆ್ಯಂಥಮ್​’ ಎಂದು ಹೆಸರಿಡಲಾಗಿದೆ. ಇದನ್ನು ಸಲ್ಮಾನ್ ಖಾನ್​ ವೀಕ್ಷಣೆ ಮಾಡಿದ್ದಾರೆ. ಇದನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿರುವ ಅವರು​ ‘ಸುದೀಪ್​ ಬೆಸ್ಟ್​ ವಿಶಸ್​’ ಎಂದು ಬರೆದುಕೊಂಡಿದ್ದಾರೆ. ಜತೆಗೆ ಫಸ್ಟ್​ ಗ್ಲಿಂಪಸ್​ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಈ ಟ್ವೀಟ್​ ಅನ್ನು ಸುದೀಪ್​ ರೀಟ್ವೀಟ್​ ಮಾಡಿಕೊಂಡು ಧನ್ಯವಾದ ಹೇಳಿದ್ದಾರೆ.

‘ವಿಕ್ರಾಂತ್​ ರೋಣ’ ಹಿಂದಿಯಲ್ಲೂ ತೆರೆಗೆ ಬರುತ್ತಿದೆ. ಈಗ ಸಲ್ಮಾನ್​ ಖಾನ್​ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವುದು ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಲಿದೆ. ಸಲ್ಮಾನ್​ ಖಾನ್ ನೀಡುತ್ತಿರುವ ಬೆಂಬಲದಿಂದ ಸಿನಿಮಾ ಮತ್ತಷ್ಟು ಜನರಿಗೆ ತಲುಪಲು ಸಹಕಾರಿಯಾಗಲಿದೆ.

ಕಿಚ್ಚ ಸುದೀಪ್​ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಹಿಂದಿ, ತೆಲುಗು ಸಿನಿಮಾಗಳಲ್ಲಿ ನಟಿಸಿ ಹೆಸರು ಮಾಡಿರುವ ಅವರು ಪರಭಾಷೆಯಲ್ಲೂ ಅಭಿಮಾನಿ ಬಳಗ ಹೊಂದಿದ್ದಾರೆ. ಬಾಲಿವುಡ್​ನ ಖ್ಯಾತ ನಟ ಸಲ್ಮಾನ್​ ಖಾನ್ ಜತೆ​​ಗೂ ಸುದೀಪ್​ಗೂ ಉತ್ತಮ ಫ್ರೆಂಡ್​ಶಿಪ್​ ಇದೆ. ‘ದಬಾಂಗ್​ 3’ ರಿಲೀಸ್​ ಆದ ನಂತರದಲ್ಲಿ ಸುದೀಪ್​ಗೆ ಸಲ್ಮಾನ್​ ಖಾನ್​ ಬಿಎಂಡಬ್ಲ್ಯು ಕಾರ್​ಅನ್ನು ಉಡುಗರೆಯಾಗಿ ನೀಡಿದ್ದರು.

ಇದನ್ನೂ ಓದಿ:ಸುದೀಪ್​ಗೆ ನೀರಜ್​ ಚೋಪ್ರಾ ಕಡೆಯಿಂದ ಹುಟ್ಟುಹಬ್ಬದ ಶುಭಾಶಯ; ‘ವಿಕ್ರಾಂತ್ ರೋಣ’ಗೂ ವಿಶೇಷ ವಿಶ್ 

ಅಕ್ರಮ ಹಣ ವರ್ಗಾವಣೆ ಪ್ರಕರಣ; ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ವಿಚಾರಣೆ

Published On - 10:25 pm, Sat, 4 September 21

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ