AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು

Vikrant Rona pre-release event: ‘ಸುದೀಪ್​ ಅವರ ಕೆಲಸವನ್ನು ನಾನು ನೋಡಿದ್ದೇನೆ. ಅವರು ಅದ್ಭುತ ನಟ’ ಎಂದು ಸಲ್ಮಾನ್​ ಖಾನ್​ ಹೊಗಳಿದ್ದಾರೆ. ‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಅವರು ಮಾತನಾಡಿದ್ದಾರೆ.

Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು
ಸಲ್ಮಾನ್ ಖಾನ್, ಕಿಚ್ಚ ಸುದೀಪ್
TV9 Web
| Edited By: |

Updated on: Jul 26, 2022 | 9:44 AM

Share

ನಟ ಸುದೀಪ್ (Kichcha Sudeep) ಅವರು ‘ವಿಕ್ರಾಂತ್​ ರೋಣ’ ಸಿನಿಮಾದ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ. ಹಗಲಿರುಳು ಎನ್ನದೇ ಅವರು ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಜುಲೈ 28ರಂದು ಅದ್ದೂರಿಯಾಗಿ ‘ವಿಕ್ರಾಂತ್​ ರೋಣ’ (Vikrant Rona) ತೆರೆಕಾಣಲಿದೆ. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ಮಲಯಾಳಂ, ತೆಲುಗು ಮುಂತಾದ ಭಾಷೆಗಳಲ್ಲೂ ಈ ಚಿತ್ರ ಬಿಡುಗಡೆ ಆಗುತ್ತಿದೆ. ಜುಲೈ 25ರಂದು ಮುಂಬೈನಲ್ಲಿ ಈ ಚಿತ್ರದ ಪ್ರೀ ರಿಲೀಸ್​ ಇವೆಂಟ್​ ನಡೆದಿದೆ. ಅದರಲ್ಲಿ ಬಾಲಿವುಡ್​ನ ಅನೇಕ ಸ್ಟಾರ್​ ಕಲಾವಿದರು ಭಾಗವಹಿಸಿದ್ದು ವಿಶೇಷ. ಅದರಲ್ಲೂ ಕಿಚ್ಚ ಸುದೀಪ್​ ಅವರ ಆಪ್ತ ಸ್ನೇಹಿತ ಸಲ್ಮಾನ್​ ಖಾನ್ (Salman Khan)​ ಅವರು ಈ ಕಾರ್ಯಕ್ರಮಕ್ಕೆ ಬಂದು ಸ್ಟಾರ್​ ಮೆರುಗು ಹೆಚ್ಚಿಸಿದರು. ಈ ವೇಳೆ ಸುದೀಪ್​ ಜೊತೆಗಿನ ಸ್ನೇಹದ ಬಗ್ಗೆ ಸಲ್ಲು ಮಾತನಾಡಿದರು.

ಕಿಚ್ಚ ಸುದೀಪ್​ ಮತ್ತು ಸಲ್ಮಾನ್​ ಖಾನ್​ ನಡುವೆ ಒಂದಷ್ಟು ವರ್ಷಗಳಿಂದ ಸ್ನೇಹ ಮನೆ ಮಾಡಿದೆ. ಅನೇಕ ಸಂದರ್ಭಗಳಲ್ಲಿ ಅವರು ಜೊತೆಯಾಗಿ ಕಾಣಿಸಿಕೊಂಡಿದ್ದಿದೆ. ಪರಸ್ಪರ ಪರಿಚಯ ಬೆಳೆಯುವುದಕ್ಕಿಂತ ಮನ್ನವೇ ಅವರಿಬ್ಬರ ನಡುವೆ ಕೆಲಸ ಸಾಮ್ಯತೆಗಳು ಕಾಣಿಸಿದ್ದವು ಎಂಬುದನ್ನು ಸಲ್ಲು ಹೇಳಿದ್ದಾರೆ. ‘ಸುದೀಪ್​ ಅವರ ‘ಹುಚ್ಚ’ ಚಿತ್ರ ಮಾಡಿದರು. ನಾನು ‘ತೇರೆ ನಾಮ್​’ ಮಾಡಿದೆ. (ಈ ಎರಡೂ ಸಿನಿಮಾಗಳು ತಮಿಳಿನ ‘ಸೇತು’ ಚಿತ್ರದ ರಿಮೇಕ್​). ನಾವಿಬ್ಬರೂ ಬಿಗ್​ ಬಾಸ್​ ನಿರೂಪಣೆ ಮಾಡಿದ್ದೇವೆ’ ಎಂದು ಸಲ್ಲು ಹೇಳಿದ್ದಾರೆ.

2019ರಲ್ಲಿ ಬಂದ ‘ದಬಂಗ್​ 3’ ಚಿತ್ರದಲ್ಲಿ ಸುದೀಪ್​ ಮತ್ತು ಸಲ್ಮಾನ್​ ಖಾನ್​ ಅವರು ತೆರೆಹಂಚಿಕೊಂಡರು. ಅದನ್ನು ಕೂಡ ವೇದಿಕೆಯಲ್ಲಿ ಸಲ್ಲು ನೆನಪು ಮಾಡಿಕೊಂಡರು. ‘ನಾನು ಸುದೀಪ್​ ಅವರ ಕೆಲಸಗಳನ್ನು ನೋಡಿದ್ದೇನೆ. ಅವರು ಅದ್ಭುತ ನಟ. ನಾನು ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಸಹಾಯ ಮಾಡುತ್ತೇನೆ ಎಂಬುದಲ್ಲ. ಅವರು ಅತ್ಯುತ್ತಮ ಸಿನಿಮಾ ಮಾಡಿದಾಗ ಮಾತ್ರ ನಾನು ಬೆಂಬಲ ನೀಡಲು ಸಾಧ್ಯ. ನಾನು ಅವರಿಗೆ ಸಪೋರ್ಟ್​ ಮಾಡ್ತೀನಿ ಅಂತ ಅವರು ತಿಳಿದುಕೊಂಡಿದ್ದಾರೆ. ಅದರೆ ಅದು ನಿಜವಲ್ಲ. ಅವರೇ ನನಗೆ ಸಪೋರ್ಟ್​ ಮಾಡುತ್ತಿದ್ದಾರೆ’ ಎಂಬುದು ಸಲ್ಮಾನ್​ ಖಾನ್​ ಮಾತು.

ಇದನ್ನೂ ಓದಿ
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Vikrant Rona: ಟಿ-ಶರ್ಟ್​, ಜಾಕೆಟ್​, ಕಾಫಿ ಮಗ್​.. ಎಲ್ಲೆಲ್ಲೂ ಕಿಚ್ಚ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಹವಾ
Image
‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​
Image
Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

‘ವಿಕ್ರಾಂತ್​ ರೋಣ’ ಚಿತ್ರವನ್ನು ಸಲ್ಮಾನ್​ ಖಾನ್​ ಅವರು ಹಿಂದಿಯಲ್ಲಿ ವಿತರಣೆ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಕೂಡ ನಟಿಸಿದ್ದಾರೆ. ರಿತೇಶ್​ ದೇಶಮುಖ್​, ಜೆನಿಲಿಯಾ ಡಿಸೋಜಾ ಮುಂತಾದವರು ಕೂಡ ಪ್ರೀ-ರಿಲೀಸ್​ ಇವೆಂಟ್​ಗೆ ಆಗಮಿಸಿ ಸುದೀಪ್​ಗೆ ಶುಭ ಹಾರೈಸಿದ್ದಾರೆ.

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ