AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು

Vikrant Rona pre-release event: ‘ಸುದೀಪ್​ ಅವರ ಕೆಲಸವನ್ನು ನಾನು ನೋಡಿದ್ದೇನೆ. ಅವರು ಅದ್ಭುತ ನಟ’ ಎಂದು ಸಲ್ಮಾನ್​ ಖಾನ್​ ಹೊಗಳಿದ್ದಾರೆ. ‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಅವರು ಮಾತನಾಡಿದ್ದಾರೆ.

Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು
ಸಲ್ಮಾನ್ ಖಾನ್, ಕಿಚ್ಚ ಸುದೀಪ್
TV9 Web
| Updated By: ಮದನ್​ ಕುಮಾರ್​|

Updated on: Jul 26, 2022 | 9:44 AM

Share

ನಟ ಸುದೀಪ್ (Kichcha Sudeep) ಅವರು ‘ವಿಕ್ರಾಂತ್​ ರೋಣ’ ಸಿನಿಮಾದ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ. ಹಗಲಿರುಳು ಎನ್ನದೇ ಅವರು ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಜುಲೈ 28ರಂದು ಅದ್ದೂರಿಯಾಗಿ ‘ವಿಕ್ರಾಂತ್​ ರೋಣ’ (Vikrant Rona) ತೆರೆಕಾಣಲಿದೆ. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ಮಲಯಾಳಂ, ತೆಲುಗು ಮುಂತಾದ ಭಾಷೆಗಳಲ್ಲೂ ಈ ಚಿತ್ರ ಬಿಡುಗಡೆ ಆಗುತ್ತಿದೆ. ಜುಲೈ 25ರಂದು ಮುಂಬೈನಲ್ಲಿ ಈ ಚಿತ್ರದ ಪ್ರೀ ರಿಲೀಸ್​ ಇವೆಂಟ್​ ನಡೆದಿದೆ. ಅದರಲ್ಲಿ ಬಾಲಿವುಡ್​ನ ಅನೇಕ ಸ್ಟಾರ್​ ಕಲಾವಿದರು ಭಾಗವಹಿಸಿದ್ದು ವಿಶೇಷ. ಅದರಲ್ಲೂ ಕಿಚ್ಚ ಸುದೀಪ್​ ಅವರ ಆಪ್ತ ಸ್ನೇಹಿತ ಸಲ್ಮಾನ್​ ಖಾನ್ (Salman Khan)​ ಅವರು ಈ ಕಾರ್ಯಕ್ರಮಕ್ಕೆ ಬಂದು ಸ್ಟಾರ್​ ಮೆರುಗು ಹೆಚ್ಚಿಸಿದರು. ಈ ವೇಳೆ ಸುದೀಪ್​ ಜೊತೆಗಿನ ಸ್ನೇಹದ ಬಗ್ಗೆ ಸಲ್ಲು ಮಾತನಾಡಿದರು.

ಕಿಚ್ಚ ಸುದೀಪ್​ ಮತ್ತು ಸಲ್ಮಾನ್​ ಖಾನ್​ ನಡುವೆ ಒಂದಷ್ಟು ವರ್ಷಗಳಿಂದ ಸ್ನೇಹ ಮನೆ ಮಾಡಿದೆ. ಅನೇಕ ಸಂದರ್ಭಗಳಲ್ಲಿ ಅವರು ಜೊತೆಯಾಗಿ ಕಾಣಿಸಿಕೊಂಡಿದ್ದಿದೆ. ಪರಸ್ಪರ ಪರಿಚಯ ಬೆಳೆಯುವುದಕ್ಕಿಂತ ಮನ್ನವೇ ಅವರಿಬ್ಬರ ನಡುವೆ ಕೆಲಸ ಸಾಮ್ಯತೆಗಳು ಕಾಣಿಸಿದ್ದವು ಎಂಬುದನ್ನು ಸಲ್ಲು ಹೇಳಿದ್ದಾರೆ. ‘ಸುದೀಪ್​ ಅವರ ‘ಹುಚ್ಚ’ ಚಿತ್ರ ಮಾಡಿದರು. ನಾನು ‘ತೇರೆ ನಾಮ್​’ ಮಾಡಿದೆ. (ಈ ಎರಡೂ ಸಿನಿಮಾಗಳು ತಮಿಳಿನ ‘ಸೇತು’ ಚಿತ್ರದ ರಿಮೇಕ್​). ನಾವಿಬ್ಬರೂ ಬಿಗ್​ ಬಾಸ್​ ನಿರೂಪಣೆ ಮಾಡಿದ್ದೇವೆ’ ಎಂದು ಸಲ್ಲು ಹೇಳಿದ್ದಾರೆ.

2019ರಲ್ಲಿ ಬಂದ ‘ದಬಂಗ್​ 3’ ಚಿತ್ರದಲ್ಲಿ ಸುದೀಪ್​ ಮತ್ತು ಸಲ್ಮಾನ್​ ಖಾನ್​ ಅವರು ತೆರೆಹಂಚಿಕೊಂಡರು. ಅದನ್ನು ಕೂಡ ವೇದಿಕೆಯಲ್ಲಿ ಸಲ್ಲು ನೆನಪು ಮಾಡಿಕೊಂಡರು. ‘ನಾನು ಸುದೀಪ್​ ಅವರ ಕೆಲಸಗಳನ್ನು ನೋಡಿದ್ದೇನೆ. ಅವರು ಅದ್ಭುತ ನಟ. ನಾನು ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಸಹಾಯ ಮಾಡುತ್ತೇನೆ ಎಂಬುದಲ್ಲ. ಅವರು ಅತ್ಯುತ್ತಮ ಸಿನಿಮಾ ಮಾಡಿದಾಗ ಮಾತ್ರ ನಾನು ಬೆಂಬಲ ನೀಡಲು ಸಾಧ್ಯ. ನಾನು ಅವರಿಗೆ ಸಪೋರ್ಟ್​ ಮಾಡ್ತೀನಿ ಅಂತ ಅವರು ತಿಳಿದುಕೊಂಡಿದ್ದಾರೆ. ಅದರೆ ಅದು ನಿಜವಲ್ಲ. ಅವರೇ ನನಗೆ ಸಪೋರ್ಟ್​ ಮಾಡುತ್ತಿದ್ದಾರೆ’ ಎಂಬುದು ಸಲ್ಮಾನ್​ ಖಾನ್​ ಮಾತು.

ಇದನ್ನೂ ಓದಿ
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Vikrant Rona: ಟಿ-ಶರ್ಟ್​, ಜಾಕೆಟ್​, ಕಾಫಿ ಮಗ್​.. ಎಲ್ಲೆಲ್ಲೂ ಕಿಚ್ಚ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಹವಾ
Image
‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​
Image
Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

‘ವಿಕ್ರಾಂತ್​ ರೋಣ’ ಚಿತ್ರವನ್ನು ಸಲ್ಮಾನ್​ ಖಾನ್​ ಅವರು ಹಿಂದಿಯಲ್ಲಿ ವಿತರಣೆ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಕೂಡ ನಟಿಸಿದ್ದಾರೆ. ರಿತೇಶ್​ ದೇಶಮುಖ್​, ಜೆನಿಲಿಯಾ ಡಿಸೋಜಾ ಮುಂತಾದವರು ಕೂಡ ಪ್ರೀ-ರಿಲೀಸ್​ ಇವೆಂಟ್​ಗೆ ಆಗಮಿಸಿ ಸುದೀಪ್​ಗೆ ಶುಭ ಹಾರೈಸಿದ್ದಾರೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ