AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು

Vikrant Rona pre-release event: ‘ಸುದೀಪ್​ ಅವರ ಕೆಲಸವನ್ನು ನಾನು ನೋಡಿದ್ದೇನೆ. ಅವರು ಅದ್ಭುತ ನಟ’ ಎಂದು ಸಲ್ಮಾನ್​ ಖಾನ್​ ಹೊಗಳಿದ್ದಾರೆ. ‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಅವರು ಮಾತನಾಡಿದ್ದಾರೆ.

Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು
ಸಲ್ಮಾನ್ ಖಾನ್, ಕಿಚ್ಚ ಸುದೀಪ್
TV9 Web
| Edited By: |

Updated on: Jul 26, 2022 | 9:44 AM

Share

ನಟ ಸುದೀಪ್ (Kichcha Sudeep) ಅವರು ‘ವಿಕ್ರಾಂತ್​ ರೋಣ’ ಸಿನಿಮಾದ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ. ಹಗಲಿರುಳು ಎನ್ನದೇ ಅವರು ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಜುಲೈ 28ರಂದು ಅದ್ದೂರಿಯಾಗಿ ‘ವಿಕ್ರಾಂತ್​ ರೋಣ’ (Vikrant Rona) ತೆರೆಕಾಣಲಿದೆ. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ಮಲಯಾಳಂ, ತೆಲುಗು ಮುಂತಾದ ಭಾಷೆಗಳಲ್ಲೂ ಈ ಚಿತ್ರ ಬಿಡುಗಡೆ ಆಗುತ್ತಿದೆ. ಜುಲೈ 25ರಂದು ಮುಂಬೈನಲ್ಲಿ ಈ ಚಿತ್ರದ ಪ್ರೀ ರಿಲೀಸ್​ ಇವೆಂಟ್​ ನಡೆದಿದೆ. ಅದರಲ್ಲಿ ಬಾಲಿವುಡ್​ನ ಅನೇಕ ಸ್ಟಾರ್​ ಕಲಾವಿದರು ಭಾಗವಹಿಸಿದ್ದು ವಿಶೇಷ. ಅದರಲ್ಲೂ ಕಿಚ್ಚ ಸುದೀಪ್​ ಅವರ ಆಪ್ತ ಸ್ನೇಹಿತ ಸಲ್ಮಾನ್​ ಖಾನ್ (Salman Khan)​ ಅವರು ಈ ಕಾರ್ಯಕ್ರಮಕ್ಕೆ ಬಂದು ಸ್ಟಾರ್​ ಮೆರುಗು ಹೆಚ್ಚಿಸಿದರು. ಈ ವೇಳೆ ಸುದೀಪ್​ ಜೊತೆಗಿನ ಸ್ನೇಹದ ಬಗ್ಗೆ ಸಲ್ಲು ಮಾತನಾಡಿದರು.

ಕಿಚ್ಚ ಸುದೀಪ್​ ಮತ್ತು ಸಲ್ಮಾನ್​ ಖಾನ್​ ನಡುವೆ ಒಂದಷ್ಟು ವರ್ಷಗಳಿಂದ ಸ್ನೇಹ ಮನೆ ಮಾಡಿದೆ. ಅನೇಕ ಸಂದರ್ಭಗಳಲ್ಲಿ ಅವರು ಜೊತೆಯಾಗಿ ಕಾಣಿಸಿಕೊಂಡಿದ್ದಿದೆ. ಪರಸ್ಪರ ಪರಿಚಯ ಬೆಳೆಯುವುದಕ್ಕಿಂತ ಮನ್ನವೇ ಅವರಿಬ್ಬರ ನಡುವೆ ಕೆಲಸ ಸಾಮ್ಯತೆಗಳು ಕಾಣಿಸಿದ್ದವು ಎಂಬುದನ್ನು ಸಲ್ಲು ಹೇಳಿದ್ದಾರೆ. ‘ಸುದೀಪ್​ ಅವರ ‘ಹುಚ್ಚ’ ಚಿತ್ರ ಮಾಡಿದರು. ನಾನು ‘ತೇರೆ ನಾಮ್​’ ಮಾಡಿದೆ. (ಈ ಎರಡೂ ಸಿನಿಮಾಗಳು ತಮಿಳಿನ ‘ಸೇತು’ ಚಿತ್ರದ ರಿಮೇಕ್​). ನಾವಿಬ್ಬರೂ ಬಿಗ್​ ಬಾಸ್​ ನಿರೂಪಣೆ ಮಾಡಿದ್ದೇವೆ’ ಎಂದು ಸಲ್ಲು ಹೇಳಿದ್ದಾರೆ.

2019ರಲ್ಲಿ ಬಂದ ‘ದಬಂಗ್​ 3’ ಚಿತ್ರದಲ್ಲಿ ಸುದೀಪ್​ ಮತ್ತು ಸಲ್ಮಾನ್​ ಖಾನ್​ ಅವರು ತೆರೆಹಂಚಿಕೊಂಡರು. ಅದನ್ನು ಕೂಡ ವೇದಿಕೆಯಲ್ಲಿ ಸಲ್ಲು ನೆನಪು ಮಾಡಿಕೊಂಡರು. ‘ನಾನು ಸುದೀಪ್​ ಅವರ ಕೆಲಸಗಳನ್ನು ನೋಡಿದ್ದೇನೆ. ಅವರು ಅದ್ಭುತ ನಟ. ನಾನು ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಸಹಾಯ ಮಾಡುತ್ತೇನೆ ಎಂಬುದಲ್ಲ. ಅವರು ಅತ್ಯುತ್ತಮ ಸಿನಿಮಾ ಮಾಡಿದಾಗ ಮಾತ್ರ ನಾನು ಬೆಂಬಲ ನೀಡಲು ಸಾಧ್ಯ. ನಾನು ಅವರಿಗೆ ಸಪೋರ್ಟ್​ ಮಾಡ್ತೀನಿ ಅಂತ ಅವರು ತಿಳಿದುಕೊಂಡಿದ್ದಾರೆ. ಅದರೆ ಅದು ನಿಜವಲ್ಲ. ಅವರೇ ನನಗೆ ಸಪೋರ್ಟ್​ ಮಾಡುತ್ತಿದ್ದಾರೆ’ ಎಂಬುದು ಸಲ್ಮಾನ್​ ಖಾನ್​ ಮಾತು.

ಇದನ್ನೂ ಓದಿ
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Vikrant Rona: ಟಿ-ಶರ್ಟ್​, ಜಾಕೆಟ್​, ಕಾಫಿ ಮಗ್​.. ಎಲ್ಲೆಲ್ಲೂ ಕಿಚ್ಚ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಹವಾ
Image
‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​
Image
Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

‘ವಿಕ್ರಾಂತ್​ ರೋಣ’ ಚಿತ್ರವನ್ನು ಸಲ್ಮಾನ್​ ಖಾನ್​ ಅವರು ಹಿಂದಿಯಲ್ಲಿ ವಿತರಣೆ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಕೂಡ ನಟಿಸಿದ್ದಾರೆ. ರಿತೇಶ್​ ದೇಶಮುಖ್​, ಜೆನಿಲಿಯಾ ಡಿಸೋಜಾ ಮುಂತಾದವರು ಕೂಡ ಪ್ರೀ-ರಿಲೀಸ್​ ಇವೆಂಟ್​ಗೆ ಆಗಮಿಸಿ ಸುದೀಪ್​ಗೆ ಶುಭ ಹಾರೈಸಿದ್ದಾರೆ.

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ