AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು

Vikrant Rona pre-release event: ‘ಸುದೀಪ್​ ಅವರ ಕೆಲಸವನ್ನು ನಾನು ನೋಡಿದ್ದೇನೆ. ಅವರು ಅದ್ಭುತ ನಟ’ ಎಂದು ಸಲ್ಮಾನ್​ ಖಾನ್​ ಹೊಗಳಿದ್ದಾರೆ. ‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಅವರು ಮಾತನಾಡಿದ್ದಾರೆ.

Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು
ಸಲ್ಮಾನ್ ಖಾನ್, ಕಿಚ್ಚ ಸುದೀಪ್
Follow us
TV9 Web
| Updated By: ಮದನ್​ ಕುಮಾರ್​

Updated on: Jul 26, 2022 | 9:44 AM

ನಟ ಸುದೀಪ್ (Kichcha Sudeep) ಅವರು ‘ವಿಕ್ರಾಂತ್​ ರೋಣ’ ಸಿನಿಮಾದ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ. ಹಗಲಿರುಳು ಎನ್ನದೇ ಅವರು ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಜುಲೈ 28ರಂದು ಅದ್ದೂರಿಯಾಗಿ ‘ವಿಕ್ರಾಂತ್​ ರೋಣ’ (Vikrant Rona) ತೆರೆಕಾಣಲಿದೆ. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ಮಲಯಾಳಂ, ತೆಲುಗು ಮುಂತಾದ ಭಾಷೆಗಳಲ್ಲೂ ಈ ಚಿತ್ರ ಬಿಡುಗಡೆ ಆಗುತ್ತಿದೆ. ಜುಲೈ 25ರಂದು ಮುಂಬೈನಲ್ಲಿ ಈ ಚಿತ್ರದ ಪ್ರೀ ರಿಲೀಸ್​ ಇವೆಂಟ್​ ನಡೆದಿದೆ. ಅದರಲ್ಲಿ ಬಾಲಿವುಡ್​ನ ಅನೇಕ ಸ್ಟಾರ್​ ಕಲಾವಿದರು ಭಾಗವಹಿಸಿದ್ದು ವಿಶೇಷ. ಅದರಲ್ಲೂ ಕಿಚ್ಚ ಸುದೀಪ್​ ಅವರ ಆಪ್ತ ಸ್ನೇಹಿತ ಸಲ್ಮಾನ್​ ಖಾನ್ (Salman Khan)​ ಅವರು ಈ ಕಾರ್ಯಕ್ರಮಕ್ಕೆ ಬಂದು ಸ್ಟಾರ್​ ಮೆರುಗು ಹೆಚ್ಚಿಸಿದರು. ಈ ವೇಳೆ ಸುದೀಪ್​ ಜೊತೆಗಿನ ಸ್ನೇಹದ ಬಗ್ಗೆ ಸಲ್ಲು ಮಾತನಾಡಿದರು.

ಕಿಚ್ಚ ಸುದೀಪ್​ ಮತ್ತು ಸಲ್ಮಾನ್​ ಖಾನ್​ ನಡುವೆ ಒಂದಷ್ಟು ವರ್ಷಗಳಿಂದ ಸ್ನೇಹ ಮನೆ ಮಾಡಿದೆ. ಅನೇಕ ಸಂದರ್ಭಗಳಲ್ಲಿ ಅವರು ಜೊತೆಯಾಗಿ ಕಾಣಿಸಿಕೊಂಡಿದ್ದಿದೆ. ಪರಸ್ಪರ ಪರಿಚಯ ಬೆಳೆಯುವುದಕ್ಕಿಂತ ಮನ್ನವೇ ಅವರಿಬ್ಬರ ನಡುವೆ ಕೆಲಸ ಸಾಮ್ಯತೆಗಳು ಕಾಣಿಸಿದ್ದವು ಎಂಬುದನ್ನು ಸಲ್ಲು ಹೇಳಿದ್ದಾರೆ. ‘ಸುದೀಪ್​ ಅವರ ‘ಹುಚ್ಚ’ ಚಿತ್ರ ಮಾಡಿದರು. ನಾನು ‘ತೇರೆ ನಾಮ್​’ ಮಾಡಿದೆ. (ಈ ಎರಡೂ ಸಿನಿಮಾಗಳು ತಮಿಳಿನ ‘ಸೇತು’ ಚಿತ್ರದ ರಿಮೇಕ್​). ನಾವಿಬ್ಬರೂ ಬಿಗ್​ ಬಾಸ್​ ನಿರೂಪಣೆ ಮಾಡಿದ್ದೇವೆ’ ಎಂದು ಸಲ್ಲು ಹೇಳಿದ್ದಾರೆ.

2019ರಲ್ಲಿ ಬಂದ ‘ದಬಂಗ್​ 3’ ಚಿತ್ರದಲ್ಲಿ ಸುದೀಪ್​ ಮತ್ತು ಸಲ್ಮಾನ್​ ಖಾನ್​ ಅವರು ತೆರೆಹಂಚಿಕೊಂಡರು. ಅದನ್ನು ಕೂಡ ವೇದಿಕೆಯಲ್ಲಿ ಸಲ್ಲು ನೆನಪು ಮಾಡಿಕೊಂಡರು. ‘ನಾನು ಸುದೀಪ್​ ಅವರ ಕೆಲಸಗಳನ್ನು ನೋಡಿದ್ದೇನೆ. ಅವರು ಅದ್ಭುತ ನಟ. ನಾನು ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಸಹಾಯ ಮಾಡುತ್ತೇನೆ ಎಂಬುದಲ್ಲ. ಅವರು ಅತ್ಯುತ್ತಮ ಸಿನಿಮಾ ಮಾಡಿದಾಗ ಮಾತ್ರ ನಾನು ಬೆಂಬಲ ನೀಡಲು ಸಾಧ್ಯ. ನಾನು ಅವರಿಗೆ ಸಪೋರ್ಟ್​ ಮಾಡ್ತೀನಿ ಅಂತ ಅವರು ತಿಳಿದುಕೊಂಡಿದ್ದಾರೆ. ಅದರೆ ಅದು ನಿಜವಲ್ಲ. ಅವರೇ ನನಗೆ ಸಪೋರ್ಟ್​ ಮಾಡುತ್ತಿದ್ದಾರೆ’ ಎಂಬುದು ಸಲ್ಮಾನ್​ ಖಾನ್​ ಮಾತು.

ಇದನ್ನೂ ಓದಿ
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Vikrant Rona: ಟಿ-ಶರ್ಟ್​, ಜಾಕೆಟ್​, ಕಾಫಿ ಮಗ್​.. ಎಲ್ಲೆಲ್ಲೂ ಕಿಚ್ಚ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಹವಾ
Image
‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​
Image
Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

‘ವಿಕ್ರಾಂತ್​ ರೋಣ’ ಚಿತ್ರವನ್ನು ಸಲ್ಮಾನ್​ ಖಾನ್​ ಅವರು ಹಿಂದಿಯಲ್ಲಿ ವಿತರಣೆ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಕೂಡ ನಟಿಸಿದ್ದಾರೆ. ರಿತೇಶ್​ ದೇಶಮುಖ್​, ಜೆನಿಲಿಯಾ ಡಿಸೋಜಾ ಮುಂತಾದವರು ಕೂಡ ಪ್ರೀ-ರಿಲೀಸ್​ ಇವೆಂಟ್​ಗೆ ಆಗಮಿಸಿ ಸುದೀಪ್​ಗೆ ಶುಭ ಹಾರೈಸಿದ್ದಾರೆ.

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ