AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samanvi Funeral: ಬೆಂಗಳೂರಿನಲ್ಲಿ ನೆರವೇರಿದ ಬಾಲನಟಿ ಸಮನ್ವಿ ಅಂತ್ಯಕ್ರಿಯೆ; ಮುಗಿಲುಮುಟ್ಟಿದ ಆಕ್ರಂದನ

ಸಮನ್ವಿ ಅಂತ್ಯಕ್ರಿಯೆ: ಸಮನ್ವಿ ನಿಧನಕ್ಕೆ ಕಿರುತೆರೆ ಲೋಕದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಸೃಜನ್​ ಲೋಕೇಶ್​ ಅವರು ಸೋಶಿಯಲ್ ಮೀಡಿಯಾ ಮೂಲಕ ಸಂತಾಪ ಸೂಚಿಸಿದ್ದಾರೆ.

Samanvi Funeral: ಬೆಂಗಳೂರಿನಲ್ಲಿ ನೆರವೇರಿದ ಬಾಲನಟಿ ಸಮನ್ವಿ ಅಂತ್ಯಕ್ರಿಯೆ; ಮುಗಿಲುಮುಟ್ಟಿದ ಆಕ್ರಂದನ
ಸಮನ್ವಿ ಅಂತ್ಯಕ್ರಿಯೆ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jan 14, 2022 | 5:12 PM

Share

ಜನವರಿ 13ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಲನಟಿ, ಅಮೃತಾ ನಾಯ್ಡು ಮಗಳು ಸಮನ್ವಿ ಅಂತ್ಯಕ್ರಿಯೆ ಇಂದು (ಜನವರಿ 14)  ಬನಶಂಕರಿ ಚಿತಾಗಾರದಲ್ಲಿ ನೆರವೇರಿದೆ. ಬಣಜಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದೆ. ತಂದೆ ರೂಪೇಶ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ಮೂಲಕ ಸಮನ್ವಿ ಪಂಚಭೂತಗಳಲ್ಲಿ ಲೀನಳಾಗಿದ್ದಾಳೆ. ರಿಷಿ ಕುಮಾರ ಸ್ವಾಮೀಜಿ ಅವರ ನೇತೃತ್ವದಲ್ಲಿ ಅಂತ್ಯಸಂಸ್ಕಾರ ನೆರವೇರಿದೆ. ಕುಟುಂಬದವರು, ಕಿರುತೆರೆ ಸೆಲೆಬ್ರಿಟಿಗಳು ಇದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಕುಟುಂಬದವರು ಹಾಗೂ ಸೆಲೆಬ್ರಿಟಿಗಳ ಆಕ್ರಂದನ ಮುಗಿಲುಮುಟ್ಟಿದೆ.

ಸಮನ್ವಿ ನಿಧನಕ್ಕೆ ಕಿರುತೆರೆ ಲೋಕದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಸೃಜನ್​ ಲೋಕೇಶ್​ ಅವರು ಸೋಶಿಯಲ್ ಮೀಡಿಯಾ ಮೂಲಕ ಸಂತಾಪ ಸೂಚಿಸಿದ್ದಾರೆ. ‘ದೇವರು ನಿಜವಾಗಿಯೂ ದೇವರಾ? ಅಥವಾ ದೇವರು ಇದ್ದಾನಾ? ಇಲ್ಲ, ದೇವರನ್ನ ನಂಬಲೇಬೇಕಾ? ಈ ಪ್ರಶ್ನೆಗಳು ಆಗಾಗ ಮೂಡಿ ಬರುತ್ತಿವೆ. ಇವತ್ತು ಈ ಘಟನೆಯ ನಂತರ ನಿಜವಾಗಲೂ ದೇವರು ಇದ್ದಾನೋ ಇಲ್ಲವೋ ಅನ್ನೋ ಪ್ರಶ್ನೆ ಮನಸ್ಸಿಗೆ ತುಂಬಾ ಗಾಢವಾಗಿ ಕಾಡುತ್ತಿದೆ. ಪುಟ್ಟ ಕಂದ ಸಮನ್ವಿ ಮಿಸ್ ಯೂ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಸೃಜನ್​ ಲೋಕೇಶ್​ ಹೇಳಿದ್ದಾರೆ. ಅವರು ಕೂಡ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಇತ್ತೀಚೆಗಷ್ಟೇ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋ ಆರಂಭಗೊಂಡಿದೆ. ಈ ಕಾರ್ಯಕ್ರಮಕ್ಕೆ 6 ವರ್ಷದ ಸಮನ್ವಿ ಸ್ಪರ್ಧಿಯಾಗಿ ತೆರಳಿದ್ದಳು. ಆಕೆಗೆ ಅನೇಕ ಮಂದಿ ಅಭಿಮಾನಿಗಳಾಗಿದ್ದರು. ಮನರಂಜನಾ ಲೋಕದಲ್ಲಿ ಎತ್ತರಕ್ಕೆ ಬೆಳೆಯಬೇಕಿದ್ದ ಈ ಪುಟ್ಟ ಬಾಲಕಿ ಈಗ ಸಾವಿನ ಮನೆಯ ಹಾದಿ ಹಿಡಿದಿರುವುದು ತೀವ್ರ ನೋವಿನ ಸಂಗತಿ. ಸಮನ್ವಿ ತಾಯಿ ಅಮೃತಾ ನಾಯ್ಡು ಈಗ ನಾಲ್ಕು ತಿಂಗಳ ಗರ್ಭಿಣಿ ಎಂದು ತಿಳಿದು ಬಂದಿದೆ. ಖುಷಿಯ ದಿನಗಳನ್ನು ಎದುರು ನೋಡಬೇಕಿದ್ದ ಅವರ ಬದುಕಿನಲ್ಲಿ ದುರ್ಘಟನೆ ನಡೆದಿದೆ.

ಅಪಘಾತ ನಡೆದಿದ್ದು ಎಲ್ಲಿ?

ಜ.13ರಂದು ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಸ್ಕೂಟರ್ ಮೇಲೆ ಸಮನ್ವಿ ಹಾಗೂ ಅಮೃತಾ ನಾಯ್ಡು ತೆರಳುತ್ತಿದ್ದರು. ಈ ವೇಳೆ ಸ್ಕೂಟರ್​ಗೆ ಲಾರಿ ಬಂದು ಹೊಡೆಯಿತು. ಸ್ಥಳದಲ್ಲೇ ಸಮನ್ವಿ ಮೃತಪಟ್ಟಳು. ಅಮೃತಾ ಅವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆ.ಎಸ್. ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಸಮನ್ವಿಗೆ ಆ್ಯಕ್ಸಿಡೆಂಟ್​ ಆದ ಸ್ಥಳದಲ್ಲಿ ಏನು ನಡೆಯಿತು? ಪ್ರತ್ಯಕ್ಷದರ್ಶಿಗಳು ತೆರೆದಿಟ್ಟ ಅಸಲಿ ಸತ್ಯ ಇಲ್ಲಿದೆ 

ಸಮನ್ವಿ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ;​ ಯಮಸ್ವರೂಪಿಯಾಗಿ ಬಂತು ಟಿಪ್ಪರ್​ ಲಾರಿ

Published On - 1:47 pm, Fri, 14 January 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ