AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದನಾಯಕ ಚಿತ್ರದ ನಟಿ ಸಮೀರಾ ರೆಡ್ಡಿಯ ಇಡೀ ಕುಟುಂಬಕ್ಕೆ ಕೊರೊನಾ ಪಾಸಿಟಿವ್

ಚಿಕಿತ್ಸೆ ಪಡೆಯಲು ಆರಂಭಿಸಿದ್ದೇವೆ. ಹಬೆ ತೆಗೆದುಕೊಳ್ಳುತ್ತಿದ್ದೇವೆ. ಉಪ್ಪು ನೀರನ್ನು ಮುಕ್ಕಳಿಸುತ್ತಿದ್ದೇವೆ, ಪ್ರಾಣಾಯಾಮ ಮಾಡುತ್ತಿದ್ದೇವೆ. ಇದೆಲ್ಲದರ ಜೊತೆಗೆ ವೈದ್ಯರ ಸಲಹೆಯನ್ನು ಪಾಲಿಸುತ್ತಿದ್ದೇವೆ ಎಂದು ಸಮೀರಾ ರೆಡ್ಡಿ ಹೇಳಿದ್ದಾರೆ.

ವರದನಾಯಕ ಚಿತ್ರದ ನಟಿ ಸಮೀರಾ ರೆಡ್ಡಿಯ ಇಡೀ ಕುಟುಂಬಕ್ಕೆ ಕೊರೊನಾ ಪಾಸಿಟಿವ್
ಸಮೀರಾ ರೆಡ್ಡಿ ಮತ್ತು ಪತಿ ಅಕ್ಷಯ್​
ಮದನ್​ ಕುಮಾರ್​
| Edited By: |

Updated on: Apr 19, 2021 | 5:08 PM

Share

ಮಹಾಮಾರಿ ಕೊರೊನಾ ಕಾಟಕ್ಕೆ ಎಲ್ಲರ ಜೀವನ ಅಸ್ತವ್ಯಸ್ತ ಆಗುತ್ತಿದೆ. ಸೆಲೆಬ್ರಿಟಿಗಳಿಂದ ಹಿಡಿದು ಜನಸಾಮಾನ್ಯರವರೆಗೆ ಎಲ್ಲರಿಗೂ ಕೊವಿಡ್​ ತೊಂದರೆ ಕೊಡುತ್ತಿದೆ. ಇತ್ತೀಚೆಗಂತೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅನೇಕ ಸೆಲೆಬ್ರಿಟಿಗಳಿಗೆ ಕೊರೊನಾ ವೈರಸ್​ ತಗುಲುತ್ತಿದೆ. ಪವನ್​ ಕಲ್ಯಾಣ್​, ಅಕ್ಷಯ್​ ಕುಮಾರ್​, ಸೋನು ಸೂದ್​ ಸೇರಿದಂತೆ ಅನೇಕರಿಗೆ ಪಾಸಿಟಿವ್​ ವರದಿ ಬಂದಿದೆ. ಆ ಸಾಲಿಗೆ ನಟಿ ಸಮೀರಾ ರೆಡ್ಡಿ ಕೂಡ ಸೇರ್ಪಡೆ ಆಗಿದ್ದಾರೆ.

ಕನ್ನಡದ ವರದನಾಯಕ ಸಿನಿಮಾದಲ್ಲಿ ಸುದೀಪ್​ ಜೋಡಿಯಾಗಿ ಸಮೀರಾ ರೆಡ್ಡಿ ನಟಿಸಿದ್ದರು. ಆ ಮೂಲಕ ಅವರು ಕನ್ನಡದ ಸಿನಿಪ್ರಿಯರಿಗೆ ಪರಿಚಿತರಾದರು. ಸದ್ಯ ಸಿನಿಮಾಗಳಿಂದ ದೂರ ಉಳಿದುಕೊಂಡಿರುವ ಅವರು ಸೋಶಿಯಲ್​ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇದ್ದಾರೆ. ಈಗ ತಮಗೆ ಕೊರೊನಾ ವೈರಸ್​ ತಗುಲಿದೆ ಎಂಬುದನ್ನು ಖಚಿತ ಪಡಿಸಿದ್ದಾರೆ.

ಸಮೀರಾ ರೆಡ್ಡಿ ಪತಿ ಅಕ್ಷಯ್​, ಮಕ್ಕಳಾದ ಹನ್ಸ್​ ಮತ್ತು ನೈರಾಗೂ ಕೊರೊನಾ ಪಾಸಿಟಿವ್​ ಆಗಿದೆ. ‘ಕಳೆದ ವಾರ ಹನ್ಸ್​ಗೆ ಹೆಚ್ಚು ಜ್ವರ ಇತ್ತು. 4 ದಿನಗಳ ಕಾಲ ಮುಂದುವರಿಯಿತು. ಅದು ಸಹಜ ಎಂದು ಅನಿಸಲಿಲ್ಲ. ಹಾಗಾಗಿ ಟೆಸ್ಟ್​ ಮಾಡಿಸಿದೆವು. ಆಗ ಕೊವಿಡ್​-19 ಪಾಸಿಟಿವ್​ ಎಂಬುದು ಗೊತ್ತಾಯಿತು. ನಂತರ ನನಗೆ ತುಂಬ ಆತಂಕ ಆಯಿತು. ಇದನ್ನು ಎದುರಿಸಲು ನೀವು ಎಷ್ಟೇ ತಯಾರಾಗಿದ್ದೀರಿ ಎಂದುಕೊಂಡರೂ ಇಂಥ ಪರಿಸ್ಥಿತಿಯಲ್ಲಿ ಅದು ನಿಜವಾಗಿರುವುದಿಲ್ಲ’ ಎಂದು ಸಮೀರಾ ಹೇಳಿದ್ದಾರೆ.

‘ನಂತರ ಮಗಳು ನೈರಾಗೂ ರೋಗ ಲಕ್ಷಣಗಳು ಕಾಣಿಸಿಕೊಂಡವು. ಜ್ವರ ಇರಲಿಲ್ಲ. ಕೊರೊನಾ ಎರಡನೇ ಅಲೆ ಬಗ್ಗೆ ನಾವು ಗಮನ ಹರಿಸಬೇಕಾದ್ದು ಏನೆಂದರೆ ಇದು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ರೋಗ ಲಕ್ಷಣಗಳು ಇಲ್ಲದಿದ್ದರೂ ಕೂಡ ಬೇರೆಯವರಿಂದ ನೀವು ನಿಮ್ಮ ಮಕ್ಕಳನ್ನು ಐಸೊಲೇಟ್​ ಮಾಡಬೇಕು’ ಎಂದು ಸಮೀರಾ ಹೇಳಿದ್ದಾರೆ.

‘ಅದೃಷ್ಟವಶಾತ್​ ನನ್ನ ಅತ್ತೆಗೆ ಸೋಂಕು ತಗುಲಿಲ್ಲ. ಅವರಿಗೆ ನೆಗೆಟಿವ್​ ವರದಿ ಬಂದಿದೆ. ನನಗೆ ಮತ್ತು ಅಕ್ಷಯ್​ಗೆ ಪಾಸಿಟಿವ್​ ಆದ ಬಳಿಕ ಮಕ್ಕಳಿಗೂ ಬಂತು. ಚಿಕಿತ್ಸೆ ಪಡೆಯಲು ಆರಂಭಿಸಿದ್ದೇವೆ. ಹಬೆ ತೆಗೆದುಕೊಳ್ಳುತ್ತಿದ್ದೇವೆ. ಉಪ್ಪು ನೀರನ್ನು ಮುಕ್ಕಳಿಸುತ್ತಿದ್ದೇವೆ, ಪ್ರಾಣಾಯಾಮ ಮಾಡುತ್ತಿದ್ದೇವೆ. ಇದೆಲ್ಲದರ ಜೊತೆಗೆ ವೈದ್ಯರ ಸಲಹೆಯನ್ನು ಪಾಲಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ನಾವು ಬುದ್ಧಿವಂತಿಕೆಯಿಂದ ಇರಬೇಕು. ಭಯ, ನೆಗೆಟಿವ್​ ಯೋಚನೆ ಬೇಡ. ಎಚ್ಚರಿಕೆಯಿಂದಿರಿ’ ಎಂದು ಸಮೀರಾ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಬಗ್ಗೆ ಟಿವಿಯಲ್ಲಿ ತೋರಿಸೋದು ಸುಳ್ಳು ಅಂದುಕೊಳ್ಳಬೇಡಿ: ಸಾಧುಕೋಕಿಲ ಎಚ್ಚರಿಕೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?