AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದನಾಯಕ ಚಿತ್ರದ ನಟಿ ಸಮೀರಾ ರೆಡ್ಡಿಯ ಇಡೀ ಕುಟುಂಬಕ್ಕೆ ಕೊರೊನಾ ಪಾಸಿಟಿವ್

ಚಿಕಿತ್ಸೆ ಪಡೆಯಲು ಆರಂಭಿಸಿದ್ದೇವೆ. ಹಬೆ ತೆಗೆದುಕೊಳ್ಳುತ್ತಿದ್ದೇವೆ. ಉಪ್ಪು ನೀರನ್ನು ಮುಕ್ಕಳಿಸುತ್ತಿದ್ದೇವೆ, ಪ್ರಾಣಾಯಾಮ ಮಾಡುತ್ತಿದ್ದೇವೆ. ಇದೆಲ್ಲದರ ಜೊತೆಗೆ ವೈದ್ಯರ ಸಲಹೆಯನ್ನು ಪಾಲಿಸುತ್ತಿದ್ದೇವೆ ಎಂದು ಸಮೀರಾ ರೆಡ್ಡಿ ಹೇಳಿದ್ದಾರೆ.

ವರದನಾಯಕ ಚಿತ್ರದ ನಟಿ ಸಮೀರಾ ರೆಡ್ಡಿಯ ಇಡೀ ಕುಟುಂಬಕ್ಕೆ ಕೊರೊನಾ ಪಾಸಿಟಿವ್
ಸಮೀರಾ ರೆಡ್ಡಿ ಮತ್ತು ಪತಿ ಅಕ್ಷಯ್​
ಮದನ್​ ಕುಮಾರ್​
| Edited By: |

Updated on: Apr 19, 2021 | 5:08 PM

Share

ಮಹಾಮಾರಿ ಕೊರೊನಾ ಕಾಟಕ್ಕೆ ಎಲ್ಲರ ಜೀವನ ಅಸ್ತವ್ಯಸ್ತ ಆಗುತ್ತಿದೆ. ಸೆಲೆಬ್ರಿಟಿಗಳಿಂದ ಹಿಡಿದು ಜನಸಾಮಾನ್ಯರವರೆಗೆ ಎಲ್ಲರಿಗೂ ಕೊವಿಡ್​ ತೊಂದರೆ ಕೊಡುತ್ತಿದೆ. ಇತ್ತೀಚೆಗಂತೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅನೇಕ ಸೆಲೆಬ್ರಿಟಿಗಳಿಗೆ ಕೊರೊನಾ ವೈರಸ್​ ತಗುಲುತ್ತಿದೆ. ಪವನ್​ ಕಲ್ಯಾಣ್​, ಅಕ್ಷಯ್​ ಕುಮಾರ್​, ಸೋನು ಸೂದ್​ ಸೇರಿದಂತೆ ಅನೇಕರಿಗೆ ಪಾಸಿಟಿವ್​ ವರದಿ ಬಂದಿದೆ. ಆ ಸಾಲಿಗೆ ನಟಿ ಸಮೀರಾ ರೆಡ್ಡಿ ಕೂಡ ಸೇರ್ಪಡೆ ಆಗಿದ್ದಾರೆ.

ಕನ್ನಡದ ವರದನಾಯಕ ಸಿನಿಮಾದಲ್ಲಿ ಸುದೀಪ್​ ಜೋಡಿಯಾಗಿ ಸಮೀರಾ ರೆಡ್ಡಿ ನಟಿಸಿದ್ದರು. ಆ ಮೂಲಕ ಅವರು ಕನ್ನಡದ ಸಿನಿಪ್ರಿಯರಿಗೆ ಪರಿಚಿತರಾದರು. ಸದ್ಯ ಸಿನಿಮಾಗಳಿಂದ ದೂರ ಉಳಿದುಕೊಂಡಿರುವ ಅವರು ಸೋಶಿಯಲ್​ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇದ್ದಾರೆ. ಈಗ ತಮಗೆ ಕೊರೊನಾ ವೈರಸ್​ ತಗುಲಿದೆ ಎಂಬುದನ್ನು ಖಚಿತ ಪಡಿಸಿದ್ದಾರೆ.

ಸಮೀರಾ ರೆಡ್ಡಿ ಪತಿ ಅಕ್ಷಯ್​, ಮಕ್ಕಳಾದ ಹನ್ಸ್​ ಮತ್ತು ನೈರಾಗೂ ಕೊರೊನಾ ಪಾಸಿಟಿವ್​ ಆಗಿದೆ. ‘ಕಳೆದ ವಾರ ಹನ್ಸ್​ಗೆ ಹೆಚ್ಚು ಜ್ವರ ಇತ್ತು. 4 ದಿನಗಳ ಕಾಲ ಮುಂದುವರಿಯಿತು. ಅದು ಸಹಜ ಎಂದು ಅನಿಸಲಿಲ್ಲ. ಹಾಗಾಗಿ ಟೆಸ್ಟ್​ ಮಾಡಿಸಿದೆವು. ಆಗ ಕೊವಿಡ್​-19 ಪಾಸಿಟಿವ್​ ಎಂಬುದು ಗೊತ್ತಾಯಿತು. ನಂತರ ನನಗೆ ತುಂಬ ಆತಂಕ ಆಯಿತು. ಇದನ್ನು ಎದುರಿಸಲು ನೀವು ಎಷ್ಟೇ ತಯಾರಾಗಿದ್ದೀರಿ ಎಂದುಕೊಂಡರೂ ಇಂಥ ಪರಿಸ್ಥಿತಿಯಲ್ಲಿ ಅದು ನಿಜವಾಗಿರುವುದಿಲ್ಲ’ ಎಂದು ಸಮೀರಾ ಹೇಳಿದ್ದಾರೆ.

‘ನಂತರ ಮಗಳು ನೈರಾಗೂ ರೋಗ ಲಕ್ಷಣಗಳು ಕಾಣಿಸಿಕೊಂಡವು. ಜ್ವರ ಇರಲಿಲ್ಲ. ಕೊರೊನಾ ಎರಡನೇ ಅಲೆ ಬಗ್ಗೆ ನಾವು ಗಮನ ಹರಿಸಬೇಕಾದ್ದು ಏನೆಂದರೆ ಇದು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ರೋಗ ಲಕ್ಷಣಗಳು ಇಲ್ಲದಿದ್ದರೂ ಕೂಡ ಬೇರೆಯವರಿಂದ ನೀವು ನಿಮ್ಮ ಮಕ್ಕಳನ್ನು ಐಸೊಲೇಟ್​ ಮಾಡಬೇಕು’ ಎಂದು ಸಮೀರಾ ಹೇಳಿದ್ದಾರೆ.

‘ಅದೃಷ್ಟವಶಾತ್​ ನನ್ನ ಅತ್ತೆಗೆ ಸೋಂಕು ತಗುಲಿಲ್ಲ. ಅವರಿಗೆ ನೆಗೆಟಿವ್​ ವರದಿ ಬಂದಿದೆ. ನನಗೆ ಮತ್ತು ಅಕ್ಷಯ್​ಗೆ ಪಾಸಿಟಿವ್​ ಆದ ಬಳಿಕ ಮಕ್ಕಳಿಗೂ ಬಂತು. ಚಿಕಿತ್ಸೆ ಪಡೆಯಲು ಆರಂಭಿಸಿದ್ದೇವೆ. ಹಬೆ ತೆಗೆದುಕೊಳ್ಳುತ್ತಿದ್ದೇವೆ. ಉಪ್ಪು ನೀರನ್ನು ಮುಕ್ಕಳಿಸುತ್ತಿದ್ದೇವೆ, ಪ್ರಾಣಾಯಾಮ ಮಾಡುತ್ತಿದ್ದೇವೆ. ಇದೆಲ್ಲದರ ಜೊತೆಗೆ ವೈದ್ಯರ ಸಲಹೆಯನ್ನು ಪಾಲಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ನಾವು ಬುದ್ಧಿವಂತಿಕೆಯಿಂದ ಇರಬೇಕು. ಭಯ, ನೆಗೆಟಿವ್​ ಯೋಚನೆ ಬೇಡ. ಎಚ್ಚರಿಕೆಯಿಂದಿರಿ’ ಎಂದು ಸಮೀರಾ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಬಗ್ಗೆ ಟಿವಿಯಲ್ಲಿ ತೋರಿಸೋದು ಸುಳ್ಳು ಅಂದುಕೊಳ್ಳಬೇಡಿ: ಸಾಧುಕೋಕಿಲ ಎಚ್ಚರಿಕೆ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ