AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sameera Reddy: ಕೊರೊನಾ ಸೋಂಕಿತ ‘ವರದನಾಯಕ’ ನಟಿ ಸಮೀರಾ ರೆಡ್ಡಿಗೆ ಕೆಟ್ಟ ಕಮೆಂಟ್​

ಕೆಟ್ಟ ಕಮೆಂಟ್​ ಮಾಡುವವರಿಗೆಲ್ಲ ನಟಿ ಸಮೀರಾ ರೆಟ್ಟಿ ಖಡಕ್​ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಖಾರದ ಮಾತುಗಳನ್ನು ಉಪಯೋಗಿಸದೆಯೂ ಚೆನ್ನಾಗಿ ತಿವಿದಿದ್ದಾರೆ.

Sameera Reddy: ಕೊರೊನಾ ಸೋಂಕಿತ ‘ವರದನಾಯಕ’ ನಟಿ ಸಮೀರಾ ರೆಡ್ಡಿಗೆ ಕೆಟ್ಟ ಕಮೆಂಟ್​
ಮಕ್ಕಳ ಜೊತೆ ನಟಿ ಸಮೀರಾ ರೆಡ್ಡಿ
ಮದನ್​ ಕುಮಾರ್​
| Updated By: Digi Tech Desk|

Updated on:Apr 29, 2021 | 9:14 AM

Share

ಕನ್ನಡ ಸಿನಿಪ್ರಿಯರಿಗೆ ‘ವರದನಾಯಕ’ ಚಿತ್ರದ ಮೂಲಕ ನಟಿ ಸಮೀರಾ ರೆಡ್ಡಿ ಪರಿಚಿತರಾಗಿದ್ದರು. ಆ ಸಿನಿಮಾದಲ್ಲಿ ಅವರು ಕಿಚ್ಚ ಸುದೀಪ್​ಗೆ ಜೋಡಿ ಆಗಿದ್ದರು. ಆ ಬಳಿಕ ಅವರು ಯಾವುದೇ ಸಿನಿಮಾ ಮಾಡಲಿಲ್ಲ. ಸಂಸಾರ, ಮನೆ, ಮಕ್ಕಳು ಅಂತ ಬ್ಯುಸಿ ಆಗಿಬಿಟ್ಟರು. ಕೆಲವೇ ದಿನಗಳ ಹಿಂದೆ ಸಮೀರಾ ರೆಡ್ಡಿ ಮತ್ತು ಅವರ ಇಡೀ ಕುಟುಂಬಕ್ಕೆ ಕೊರೊನಾ ವೈರಸ್​ ಸೋಂಕು ತಗುಲಿತ್ತು. ಈ ಸಂದರ್ಭದಲ್ಲಿಯೂ ಅವರಿಗೆ ನೆಗೆಟಿವ್​​ ಕಮೆಂಟ್​ಗಳ ಕಾಟ ತಪ್ಪಿಲ್ಲ. ಅವುಗಳಿಗೆ ಸಮೀರಾ ಸರಿಯಾಗಿಯೇ ಉತ್ತರ ನೀಡಿದ್ದಾರೆ.

ಚಿತ್ರರಂಗದಿಂದ ದೂರು ಉಳಿದುಕೊಂಡಿರುವ ಸಮೀರಾ ಅವರು ಗ್ಲಾಮರ್​ ಕಡೆಗೆ ಗಮನ ನೀಡುತ್ತಿಲ್ಲ. ಇದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಹಾಗಾಗಿ ಯಾವುದೇ ಮೇಕಪ್​ ಮೊರೆಹೋಗದೇ ಅವರು ಸೋಶಿಯಲ್ ಮೀಡಿಯಾ ವಿಡಿಯೋಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಅದನ್ನು ಕಂಡ ಕೆಲವರು ಕೆಟ್ಟದಾಗಿ ಕಮೆಂಟ್​ ಮಾಡುತ್ತಿದ್ದಾರೆ.

ಸಮೀರಾ ರೆಡ್ಡಿಗೆ ಈಗ 42 ವರ್ಷ ವಯಸ್ಸು. ಸಹಜವಾಗಿಯೇ ಅವರಿಗೆ ಬಿಳಿ ಕೂದಲು ಆಗಿದೆ. ಹಾಗಂತ ಅವುಗಳನ್ನು ಮರೆಮಾಚುವ ಕೆಲಸಕ್ಕೆ ಅವರು ಕೈ ಹಾಕಿಲ್ಲ. ಆದರೆ ಅದನ್ನೇ ಇಟ್ಟುಕೊಂಡು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಕೆಟ್ಟ ಕಮೆಂಟ್​ ಮಾಡುತ್ತಿದ್ದಾರೆ. ಅದು ಸಮೀರಾ ಗಮನಕ್ಕೂ ಬಂದಿದೆ. ಅಂಥವರಿಗೆಲ್ಲ ಅವರು ಖಡಕ್​ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಖಾರದ ಮಾತುಗಳನ್ನು ಉಪಯೋಗಿಸದೇ ಚೆನ್ನಾಗಿ ತಿವಿದಿದ್ದಾರೆ.

ವೈರಲ್​ ಡೈಲಾಗ್​ಗಳಿಗೆ ಸಂಗೀತದ ಸ್ಪರ್ಶ ನೀಡುವ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಯಶ್​ರಾಜ್​ ಮುಖಾಟೆ ಸಿಕ್ಕಾಪಟ್ಟೆ ಫೇಮಸ್​ ಆಗಿದ್ದಾರೆ. ಅವರು ಒಂದು ಲೇಟೆಸ್ಟ್​ ಹಾಡನ್ನು ಬಳಸಿಕೊಂಡು ಸಮೀರಾ ರೆಡ್ಡಿ ಎಲ್ಲ ಹೇಟರ್​ಗಳಿಗೆ ಛಾಟಿ ಬೀಸಿದ್ದಾರೆ. ‘ಕಮೆಂಟ್​ ಮಾಡುವವರೆಲ್ಲ ನೆನಪಿಟ್ಟುಕೊಳ್ಳಿ. ಇದು ನನ್ನ ಜೀವನ. ಹೇಗಾದರೂ ಜೀವಿಸುತ್ತೇನೆ. ನಿಮಗೆ ಏನಾಗಬೇಕು? ನೀವು ನಿಮ್ಮ ಜೀವನ ನೋಡಿಕೊಳ್ಳಿ’ ಎಂದು ರ್ಯಾಪ್​ ಹಾಡಿನ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

‘ಕಮೆಂಟ್​ ಮಾಡುವವರ ಬಗ್ಗೆ ನಾನು ಯಾವತ್ತೂ ತಲೆ ಕೆಡಿಸಿಕೊಂಡಿಲ್ಲ. ನೀವೂ ತಲೆ ಕೆಡಿಸಿಕೊಳ್ಳಬೇಡಿ. ಬಿಳಿ ಕೂದಲಿಗೆ ಡೋಂಟ್​ ಕೇರ್​. ಬೈಯ್ಗುಳ ಇಲ್ಲ, ಬರೀ ಚಪ್ಪಾಳೆ. ಈ ಹಾಡಿನ ಮೂಲಕ ನನ್ನನ್ನು ಹುರಿದುಂಬಿಸುತ್ತಿರುವ ಯಶ್​ರಾಜ್​ ಮುಖಾಟೆ ಅವರಿಗೆ ಧನ್ಯವಾದಗಳು’ ಎಂದು ಆ ವಿಡಿಯೋಗೆ ಸಮೀರಾ ಕ್ಯಾಪ್ಷನ್​ ನೀಡಿದ್ದಾರೆ. ಸದ್ಯ ಇದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಇದನ್ನೂ ಓದಿ: ‘ಅಂದು ಪ್ಯಾಡೆಡ್​ ಬ್ರಾ ಧರಿಸುತ್ತಿದ್ದೆ; ಇಂದು ಹೀಗಾಗಿದ್ದೇನೆ’: ವರದನಾಯಕ ನಟಿ ಸಮೀರಾ ವಿಡಿಯೋ ವೈರಲ್​!

ಬಾಲಿವುಡ್​ನ ‘ಕರಾಳ ಮುಖ’ ಬಿಚ್ಚಿಟ್ಟ ಕೃಷ್ಣ ಸುಂದರಿ ಸಮೀರಾ ರೆಡ್ಡಿ!

Published On - 8:15 am, Thu, 29 April 21

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ