AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೂರನೇ ಕೃಷ್ಣಪ್ಪ’ ಟ್ರೇಲರ್​ನಲ್ಲಿ ರಂಗಾಯಣ ರಘು, ಸಂಪತ್​, ಯೋಗಿ ಕಮಾಲ್​

ಲೂಸ್​ ಮಾದ ಯೋಗಿ ಅವರ ಹಿನ್ನೆಲೆ ಧ್ವನಿಯಲ್ಲಿ ‘ಮೂರನೇ ಕೃಷ್ಣಪ್ಪಲ’ ಟ್ರೇಲರ್​ನ ಮೆರುಗು ಹೆಚ್ಚಿದೆ. ಈ ಸಿನಿಮಾದಲ್ಲಿ ರಂಗಾಯಣ ರಘು, ಸಂಪತ್​ ಮೈತ್ರೇಯ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಮೇ 24ಕ್ಕೆ ಈ ಸಿನಿಮಾ ರಿಲೀಸ್​ ಆಗಲಿದ್ದು, ಈಗ ಟ್ರೇಲರ್​ ಮೂಲಕ ಗಮನ ಸೆಳೆಯಲಾಗಿದೆ.

‘ಮೂರನೇ ಕೃಷ್ಣಪ್ಪ’ ಟ್ರೇಲರ್​ನಲ್ಲಿ ರಂಗಾಯಣ ರಘು, ಸಂಪತ್​, ಯೋಗಿ ಕಮಾಲ್​
ರಂಗಾಯಣ ರಘು, ಸಂಪತ್​ ಮೈತ್ರೇಯ
ಮದನ್​ ಕುಮಾರ್​
|

Updated on: May 12, 2024 | 7:34 PM

Share

ನಟ ರಂಗಾಯಣ ರಘು (Rangayana Raghu), ಸಂಪತ್ ಮೈತ್ರೇಯ ಅವರು ಡಿಫರೆಂಟ್​ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಅವರಿಬ್ಬರು ನಟಿಸಿರುವ ‘ಮೂರನೇ ಕೃಷ್ಣಪ್ಪ’ (Sampath Maitreya) ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ವಿಭಿನ್ನ ಕಥಾನಕ ಈ ಸಿನಿಮಾದಲ್ಲಿ ಇರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಆ ಮೂಲಕ ಪ್ರೇಕ್ಷಕರನ್ನು ಸೆಳೆಯಲು ಪ್ರಯತ್ನಿಸಲಾಗಿದೆ. ‘ಮೂರನೇ ಕೃಷ್ಣಪ್ಪ’ ಸಿನಿಮಾ ಟ್ರೇಲರ್​ (Moorane Krishnappa Trailer) ಬಿಡುಗಡೆ ಮಾಡಲಾಗಿದೆ. ಆನಂದ್ ರಾಜವಿಕ್ರಮ್ ಅವರು ಸಂಗೀತ ನೀಡಿದ್ದಾರೆ. ಶ್ರೀಕಾಂತ್ ಅವರು ಸಂಕಲನ ಮಾಡಿದ್ದಾರೆ. ಯೋಗಿ ಅವರ ಛಾಯಾಗ್ರಹಣ ಇರುವ ಈ ಸಿನಿಮಾ ಮೇ 24ರಂದು ಬಿಡುಗಡೆ ಆಗಲಿದೆ.

ವಿಶೇಷ ಏನೆಂದರೆ, ‘ಮೂರನೇ ಕೃಷ್ಣಪ್ಪ’ ಟ್ರೇಲರ್​ನಲ್ಲಿ ಲೂಸ್ ಮಾದ ಯೋಗಿ ಅವರ ಧ್ವನಿ ಹೈಲೈಟ್​ ಆಗಿದೆ. ಅವರ ಸಂಭಾಷಣೆಯಿಂದಲೇ ಆರಂಭ ಆಗುವ ಟ್ರೇಲರ್‌ನಲ್ಲಿ ಕೋಲಾರ‌ ಕನ್ನಡ‌ ಗಮನ ಸೆಳೆದಿದೆ. ರಂಗಾಯಣ ರಘು, ಸಂಪತ್ ಮೈತ್ರಿಯಾ ಅವರಂತಹ ಪ್ರತಿಭಾವಂತ ಕಲಾವಿದರ ಅಭಿನಯದಿಂದ ಟ್ರೇಲರ್​ ಆಕರ್ಷಕವಾಗಿದೆ. ಹಳ್ಳಿ ಸೊಗಡಿನ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತಿದೆ.

ಇದನ್ನೂ ಓದಿ: Shakhahaari Review: ‘ಶಾಖಾಹಾರಿ’ ಸಿನಿಮಾದಲ್ಲಿ ಹಲವು ಟ್ವಿಸ್ಟ್​; ರಂಗಾಯಣ ರಘು ಬೆಸ್ಟ್​

ಈ ಸಿನಿಮಾದಲ್ಲಿ ಪ್ರೇಕ್ಷಕರಿಗೆ ಮನರಂಜನೆಯ ಜೊತೆ ಸಂದೇಶ ಕೂಡ ಇರಲಿದೆಯಂತೆ. ‘ಮೂರನೇ ಕೃಷ್ಣಪ್ಪ’ ಚಿತ್ರಕ್ಕೆ ನವೀನ್ ರೆಡ್ಡಿ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ವಿಭಿನ್ನ ಟೈಟಲ್​ನೊಂದಿಗೆ ನಿರ್ದೇಶಕ ನವೀನ್ ಅವರು ಆರಂಭದಲ್ಲೇ ಕೌತುಕ ಮೂಡಿಸಿದ್ದಾರೆ. ‘ರೆಡ್ ಡ್ರ್ಯಾಗನ್ ಫಿಲ್ಮ್ಸ್​’ ಸಂಸ್ಥೆಯು ಈ ಸಿನಿಮಾವನ್ನು ನಿರ್ಮಿಸಿದೆ. ಮೋಹನ್ ರೆಡ್ಡಿ ಜಿ, ರವಿಶಂಕರ್ ಅವರು ಬಂಡವಾಳ ಹೂಡಿದ್ದಾರೆ.

ಆನೇಕಲ್ ಭಾಗದ ಭಾಷೆಯ ಸೊಗಡನ್ನು ಇಟ್ಟುಕೊಂಡು ‘ಮೂರನೇ ಕೃಷ್ಣಪ್ಪ’ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ. ಸಂಪತ್ ಮೈತ್ರೀಯಾ ಅವರು ಈ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ. ಮತ್ತೊಂದು ಮುಖ್ಯ ಪಾತ್ರದಲ್ಲಿ ರಂಗಾಯಣ ರಘು ಅಭಿನಯಿಸಿದ್ದಾರೆ. ಶ್ರೀಪ್ರಿಯಾ ಅವರು ಈ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ತುಕಾಲಿ ಸಂತೋಷ್, ಉಗ್ರಂ ಮಂಜು ಮುಂತಾದವರು ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ