AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೂರನೇ ಕೃಷ್ಣಪ್ಪ’ ಟ್ರೇಲರ್​ನಲ್ಲಿ ರಂಗಾಯಣ ರಘು, ಸಂಪತ್​, ಯೋಗಿ ಕಮಾಲ್​

ಲೂಸ್​ ಮಾದ ಯೋಗಿ ಅವರ ಹಿನ್ನೆಲೆ ಧ್ವನಿಯಲ್ಲಿ ‘ಮೂರನೇ ಕೃಷ್ಣಪ್ಪಲ’ ಟ್ರೇಲರ್​ನ ಮೆರುಗು ಹೆಚ್ಚಿದೆ. ಈ ಸಿನಿಮಾದಲ್ಲಿ ರಂಗಾಯಣ ರಘು, ಸಂಪತ್​ ಮೈತ್ರೇಯ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಮೇ 24ಕ್ಕೆ ಈ ಸಿನಿಮಾ ರಿಲೀಸ್​ ಆಗಲಿದ್ದು, ಈಗ ಟ್ರೇಲರ್​ ಮೂಲಕ ಗಮನ ಸೆಳೆಯಲಾಗಿದೆ.

‘ಮೂರನೇ ಕೃಷ್ಣಪ್ಪ’ ಟ್ರೇಲರ್​ನಲ್ಲಿ ರಂಗಾಯಣ ರಘು, ಸಂಪತ್​, ಯೋಗಿ ಕಮಾಲ್​
ರಂಗಾಯಣ ರಘು, ಸಂಪತ್​ ಮೈತ್ರೇಯ
ಮದನ್​ ಕುಮಾರ್​
|

Updated on: May 12, 2024 | 7:34 PM

Share

ನಟ ರಂಗಾಯಣ ರಘು (Rangayana Raghu), ಸಂಪತ್ ಮೈತ್ರೇಯ ಅವರು ಡಿಫರೆಂಟ್​ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಅವರಿಬ್ಬರು ನಟಿಸಿರುವ ‘ಮೂರನೇ ಕೃಷ್ಣಪ್ಪ’ (Sampath Maitreya) ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ವಿಭಿನ್ನ ಕಥಾನಕ ಈ ಸಿನಿಮಾದಲ್ಲಿ ಇರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಆ ಮೂಲಕ ಪ್ರೇಕ್ಷಕರನ್ನು ಸೆಳೆಯಲು ಪ್ರಯತ್ನಿಸಲಾಗಿದೆ. ‘ಮೂರನೇ ಕೃಷ್ಣಪ್ಪ’ ಸಿನಿಮಾ ಟ್ರೇಲರ್​ (Moorane Krishnappa Trailer) ಬಿಡುಗಡೆ ಮಾಡಲಾಗಿದೆ. ಆನಂದ್ ರಾಜವಿಕ್ರಮ್ ಅವರು ಸಂಗೀತ ನೀಡಿದ್ದಾರೆ. ಶ್ರೀಕಾಂತ್ ಅವರು ಸಂಕಲನ ಮಾಡಿದ್ದಾರೆ. ಯೋಗಿ ಅವರ ಛಾಯಾಗ್ರಹಣ ಇರುವ ಈ ಸಿನಿಮಾ ಮೇ 24ರಂದು ಬಿಡುಗಡೆ ಆಗಲಿದೆ.

ವಿಶೇಷ ಏನೆಂದರೆ, ‘ಮೂರನೇ ಕೃಷ್ಣಪ್ಪ’ ಟ್ರೇಲರ್​ನಲ್ಲಿ ಲೂಸ್ ಮಾದ ಯೋಗಿ ಅವರ ಧ್ವನಿ ಹೈಲೈಟ್​ ಆಗಿದೆ. ಅವರ ಸಂಭಾಷಣೆಯಿಂದಲೇ ಆರಂಭ ಆಗುವ ಟ್ರೇಲರ್‌ನಲ್ಲಿ ಕೋಲಾರ‌ ಕನ್ನಡ‌ ಗಮನ ಸೆಳೆದಿದೆ. ರಂಗಾಯಣ ರಘು, ಸಂಪತ್ ಮೈತ್ರಿಯಾ ಅವರಂತಹ ಪ್ರತಿಭಾವಂತ ಕಲಾವಿದರ ಅಭಿನಯದಿಂದ ಟ್ರೇಲರ್​ ಆಕರ್ಷಕವಾಗಿದೆ. ಹಳ್ಳಿ ಸೊಗಡಿನ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತಿದೆ.

ಇದನ್ನೂ ಓದಿ: Shakhahaari Review: ‘ಶಾಖಾಹಾರಿ’ ಸಿನಿಮಾದಲ್ಲಿ ಹಲವು ಟ್ವಿಸ್ಟ್​; ರಂಗಾಯಣ ರಘು ಬೆಸ್ಟ್​

ಈ ಸಿನಿಮಾದಲ್ಲಿ ಪ್ರೇಕ್ಷಕರಿಗೆ ಮನರಂಜನೆಯ ಜೊತೆ ಸಂದೇಶ ಕೂಡ ಇರಲಿದೆಯಂತೆ. ‘ಮೂರನೇ ಕೃಷ್ಣಪ್ಪ’ ಚಿತ್ರಕ್ಕೆ ನವೀನ್ ರೆಡ್ಡಿ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ವಿಭಿನ್ನ ಟೈಟಲ್​ನೊಂದಿಗೆ ನಿರ್ದೇಶಕ ನವೀನ್ ಅವರು ಆರಂಭದಲ್ಲೇ ಕೌತುಕ ಮೂಡಿಸಿದ್ದಾರೆ. ‘ರೆಡ್ ಡ್ರ್ಯಾಗನ್ ಫಿಲ್ಮ್ಸ್​’ ಸಂಸ್ಥೆಯು ಈ ಸಿನಿಮಾವನ್ನು ನಿರ್ಮಿಸಿದೆ. ಮೋಹನ್ ರೆಡ್ಡಿ ಜಿ, ರವಿಶಂಕರ್ ಅವರು ಬಂಡವಾಳ ಹೂಡಿದ್ದಾರೆ.

ಆನೇಕಲ್ ಭಾಗದ ಭಾಷೆಯ ಸೊಗಡನ್ನು ಇಟ್ಟುಕೊಂಡು ‘ಮೂರನೇ ಕೃಷ್ಣಪ್ಪ’ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ. ಸಂಪತ್ ಮೈತ್ರೀಯಾ ಅವರು ಈ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ. ಮತ್ತೊಂದು ಮುಖ್ಯ ಪಾತ್ರದಲ್ಲಿ ರಂಗಾಯಣ ರಘು ಅಭಿನಯಿಸಿದ್ದಾರೆ. ಶ್ರೀಪ್ರಿಯಾ ಅವರು ಈ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ತುಕಾಲಿ ಸಂತೋಷ್, ಉಗ್ರಂ ಮಂಜು ಮುಂತಾದವರು ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
1 ಗಂಟೆಯಲ್ಲಿ ಏನೇನೋ ಆಗ್ಬಹುದು: ದಾವಣಗೆರೆಯಲ್ಲಿ ಜಮೀರ್ ಅಚ್ಚರಿ ಮಾತು!
1 ಗಂಟೆಯಲ್ಲಿ ಏನೇನೋ ಆಗ್ಬಹುದು: ದಾವಣಗೆರೆಯಲ್ಲಿ ಜಮೀರ್ ಅಚ್ಚರಿ ಮಾತು!
ಕಿಶನ್ ವಿಕೆಟ್ ಬಿದ್ದ ಕೂಡಲೇ ದೇವರಿಗೆ ಕೈಮುಗಿದ ಲಕ್ನೋ ಮಾಲೀಕ
ಕಿಶನ್ ವಿಕೆಟ್ ಬಿದ್ದ ಕೂಡಲೇ ದೇವರಿಗೆ ಕೈಮುಗಿದ ಲಕ್ನೋ ಮಾಲೀಕ
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ದೆಹಲಿಯಲ್ಲಿ ನಕಲಿ ಔಷಧಿಗಳ ತಯಾರಿಸುವ ದಂಧೆ
ದೆಹಲಿಯಲ್ಲಿ ನಕಲಿ ಔಷಧಿಗಳ ತಯಾರಿಸುವ ದಂಧೆ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಟ್ರಾಫಿಕ್ ಜಾಮ್ ಫುಲ್ ಕ್ಲಿಯರ್
ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಟ್ರಾಫಿಕ್ ಜಾಮ್ ಫುಲ್ ಕ್ಲಿಯರ್
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್