AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೂರನೇ ಕೃಷ್ಣಪ್ಪ’ ಟ್ರೇಲರ್​ನಲ್ಲಿ ರಂಗಾಯಣ ರಘು, ಸಂಪತ್​, ಯೋಗಿ ಕಮಾಲ್​

ಲೂಸ್​ ಮಾದ ಯೋಗಿ ಅವರ ಹಿನ್ನೆಲೆ ಧ್ವನಿಯಲ್ಲಿ ‘ಮೂರನೇ ಕೃಷ್ಣಪ್ಪಲ’ ಟ್ರೇಲರ್​ನ ಮೆರುಗು ಹೆಚ್ಚಿದೆ. ಈ ಸಿನಿಮಾದಲ್ಲಿ ರಂಗಾಯಣ ರಘು, ಸಂಪತ್​ ಮೈತ್ರೇಯ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಮೇ 24ಕ್ಕೆ ಈ ಸಿನಿಮಾ ರಿಲೀಸ್​ ಆಗಲಿದ್ದು, ಈಗ ಟ್ರೇಲರ್​ ಮೂಲಕ ಗಮನ ಸೆಳೆಯಲಾಗಿದೆ.

‘ಮೂರನೇ ಕೃಷ್ಣಪ್ಪ’ ಟ್ರೇಲರ್​ನಲ್ಲಿ ರಂಗಾಯಣ ರಘು, ಸಂಪತ್​, ಯೋಗಿ ಕಮಾಲ್​
ರಂಗಾಯಣ ರಘು, ಸಂಪತ್​ ಮೈತ್ರೇಯ
ಮದನ್​ ಕುಮಾರ್​
|

Updated on: May 12, 2024 | 7:34 PM

Share

ನಟ ರಂಗಾಯಣ ರಘು (Rangayana Raghu), ಸಂಪತ್ ಮೈತ್ರೇಯ ಅವರು ಡಿಫರೆಂಟ್​ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಅವರಿಬ್ಬರು ನಟಿಸಿರುವ ‘ಮೂರನೇ ಕೃಷ್ಣಪ್ಪ’ (Sampath Maitreya) ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ವಿಭಿನ್ನ ಕಥಾನಕ ಈ ಸಿನಿಮಾದಲ್ಲಿ ಇರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಆ ಮೂಲಕ ಪ್ರೇಕ್ಷಕರನ್ನು ಸೆಳೆಯಲು ಪ್ರಯತ್ನಿಸಲಾಗಿದೆ. ‘ಮೂರನೇ ಕೃಷ್ಣಪ್ಪ’ ಸಿನಿಮಾ ಟ್ರೇಲರ್​ (Moorane Krishnappa Trailer) ಬಿಡುಗಡೆ ಮಾಡಲಾಗಿದೆ. ಆನಂದ್ ರಾಜವಿಕ್ರಮ್ ಅವರು ಸಂಗೀತ ನೀಡಿದ್ದಾರೆ. ಶ್ರೀಕಾಂತ್ ಅವರು ಸಂಕಲನ ಮಾಡಿದ್ದಾರೆ. ಯೋಗಿ ಅವರ ಛಾಯಾಗ್ರಹಣ ಇರುವ ಈ ಸಿನಿಮಾ ಮೇ 24ರಂದು ಬಿಡುಗಡೆ ಆಗಲಿದೆ.

ವಿಶೇಷ ಏನೆಂದರೆ, ‘ಮೂರನೇ ಕೃಷ್ಣಪ್ಪ’ ಟ್ರೇಲರ್​ನಲ್ಲಿ ಲೂಸ್ ಮಾದ ಯೋಗಿ ಅವರ ಧ್ವನಿ ಹೈಲೈಟ್​ ಆಗಿದೆ. ಅವರ ಸಂಭಾಷಣೆಯಿಂದಲೇ ಆರಂಭ ಆಗುವ ಟ್ರೇಲರ್‌ನಲ್ಲಿ ಕೋಲಾರ‌ ಕನ್ನಡ‌ ಗಮನ ಸೆಳೆದಿದೆ. ರಂಗಾಯಣ ರಘು, ಸಂಪತ್ ಮೈತ್ರಿಯಾ ಅವರಂತಹ ಪ್ರತಿಭಾವಂತ ಕಲಾವಿದರ ಅಭಿನಯದಿಂದ ಟ್ರೇಲರ್​ ಆಕರ್ಷಕವಾಗಿದೆ. ಹಳ್ಳಿ ಸೊಗಡಿನ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತಿದೆ.

ಇದನ್ನೂ ಓದಿ: Shakhahaari Review: ‘ಶಾಖಾಹಾರಿ’ ಸಿನಿಮಾದಲ್ಲಿ ಹಲವು ಟ್ವಿಸ್ಟ್​; ರಂಗಾಯಣ ರಘು ಬೆಸ್ಟ್​

ಈ ಸಿನಿಮಾದಲ್ಲಿ ಪ್ರೇಕ್ಷಕರಿಗೆ ಮನರಂಜನೆಯ ಜೊತೆ ಸಂದೇಶ ಕೂಡ ಇರಲಿದೆಯಂತೆ. ‘ಮೂರನೇ ಕೃಷ್ಣಪ್ಪ’ ಚಿತ್ರಕ್ಕೆ ನವೀನ್ ರೆಡ್ಡಿ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ವಿಭಿನ್ನ ಟೈಟಲ್​ನೊಂದಿಗೆ ನಿರ್ದೇಶಕ ನವೀನ್ ಅವರು ಆರಂಭದಲ್ಲೇ ಕೌತುಕ ಮೂಡಿಸಿದ್ದಾರೆ. ‘ರೆಡ್ ಡ್ರ್ಯಾಗನ್ ಫಿಲ್ಮ್ಸ್​’ ಸಂಸ್ಥೆಯು ಈ ಸಿನಿಮಾವನ್ನು ನಿರ್ಮಿಸಿದೆ. ಮೋಹನ್ ರೆಡ್ಡಿ ಜಿ, ರವಿಶಂಕರ್ ಅವರು ಬಂಡವಾಳ ಹೂಡಿದ್ದಾರೆ.

ಆನೇಕಲ್ ಭಾಗದ ಭಾಷೆಯ ಸೊಗಡನ್ನು ಇಟ್ಟುಕೊಂಡು ‘ಮೂರನೇ ಕೃಷ್ಣಪ್ಪ’ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ. ಸಂಪತ್ ಮೈತ್ರೀಯಾ ಅವರು ಈ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ. ಮತ್ತೊಂದು ಮುಖ್ಯ ಪಾತ್ರದಲ್ಲಿ ರಂಗಾಯಣ ರಘು ಅಭಿನಯಿಸಿದ್ದಾರೆ. ಶ್ರೀಪ್ರಿಯಾ ಅವರು ಈ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ತುಕಾಲಿ ಸಂತೋಷ್, ಉಗ್ರಂ ಮಂಜು ಮುಂತಾದವರು ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ