AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ವಿಜಯ್​ಗೆ ಅಪಘಾತವಾದ ದಿನ ನಿಜಕ್ಕೂ ನಡೆದಿದ್ದೇನು? ಪೊಲೀಸರಿಗೆ ಹೇಳಿಕೆ ನೀಡಿದ ಸ್ನೇಹಿತ ನವೀನ್​

Sanchari Vijay Accident Case: ಜೂ.12ರಂದು ಭೀಕರ ರಸ್ತೆ ಅಪಘಾತ ಸಂಭವಿಸಿದಾಗ ನವೀನ್​ ಬೈಕ್​ ಓಡಿಸುತ್ತಿದ್ದರು. ಹಿಂದೆ ಕುಳಿತಿದ್ದ ಸಂಚಾರಿ ವಿಜಯ್​ಗೆ ಮಾರಣಾಂತಿಕವಾಗಿ ಪೆಟ್ಟಾಗಿತ್ತು.

ಸಂಚಾರಿ ವಿಜಯ್​ಗೆ ಅಪಘಾತವಾದ ದಿನ ನಿಜಕ್ಕೂ ನಡೆದಿದ್ದೇನು? ಪೊಲೀಸರಿಗೆ ಹೇಳಿಕೆ ನೀಡಿದ ಸ್ನೇಹಿತ ನವೀನ್​
ಸಂಚಾರಿ ವಿಜಯ್​
TV9 Web
| Edited By: |

Updated on: Jul 02, 2021 | 11:48 AM

Share

ಖ್ಯಾತ ನಟ ಸಂಚಾರಿ ವಿಜಯ್​ ಅವರು ರಸ್ತೆ ಅಪಘಾತಕ್ಕೆ ಒಳಗಾಗಿ ನಿಧನರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಸ್ನೇಹಿತ ನವೀನ್​ ಅವರು ಪೊಲೀಸರ ಎದುರು ತಮ್ಮ ಹೇಳಿಕೆ ನೀಡಿದ್ದಾರೆ. ಜೂ.12ರಂದು ಭೀಕರ ರಸ್ತೆ ಅಪಘಾತ ಸಂಭವಿಸಿದಾಗ ನವೀನ್​ ಬೈಕ್​ ಓಡಿಸುತ್ತಿದ್ದರು. ಹಿಂದೆ ಕುಳಿತಿದ್ದ ಸಂಚಾರಿ ವಿಜಯ್​ಗೆ ಮಾರಣಾಂತಿಕವಾಗಿ ಪೆಟ್ಟಾಗಿತ್ತು. ಅದು ಅವರ ಪ್ರಾಣಕ್ಕೆ ಕುತ್ತು ತಂದಿತು. ಆ ಬಗ್ಗೆ ಪೊಲೀಸರಿಗೆ ನವೀನ್​ ಮಾಹಿತಿ ನೀಡಿದ್ದಾರೆ.

‘ಜೂನ್ 12ರಂದು ಸ್ನೇಹಿತರ ಮನೆಯಲ್ಲಿ ಸಭೆ ಸೇರಿದ್ದೆವು. ಸಭೆಯಲ್ಲಿ ನಟ ಸಂಚಾರಿ ವಿಜಯ್ ಮತ್ತು ಇತರೆ ಸ್ನೇಹಿತರು ಇದ್ದೆವು. ಕೊರೊನಾ ಕಿಟ್ ಹಂಚಿಕೆ ಸಂಬಂಧ ಚರ್ಚಿಸಲಾಗಿತ್ತು. ಚರ್ಚೆಯ ವೇಳೆ ನನಗೆ ಮನೆಯಿಂದ ಫೋನ್ ಬಂದಿತ್ತು. ಪತ್ನಿಗೆ ಮಾತ್ರೆಯನ್ನು ತರುವುದಕ್ಕೆ ನಾನು ಹೋಗಬೇಕಾಯಿತು. ಬೈಕ್‌ನಲ್ಲಿ ಹತ್ತಿರದ ಮೆಡಿಕಲ್ ಸ್ಟೋರ್‌ಗೆ ಹೋಗ್ತಿದ್ದೆ. ಈ ವೇಳೆ ಸಂಚಾರಿ ವಿಜಯ್ ಸಹ ನನ್ನ ಜತೆ ಬಂದರು’ ಎಂದು ನವೀನ್​ ಹೇಳಿಕೆ ನೀಡಿದ್ದಾರೆ.

‘ಮನೆ ಹತ್ತಿರವೇ ಶಾಪ್ ಇದ್ದ ಕಾರಣ ಹೆಲ್ಮೆಟ್ ಹಾಕಲಿಲ್ಲ. ಮಾತ್ರೆ ಖರೀದಿಸಿ ವಾಪಸ್ ಬರಬೇಕಾದರೆ ಅಪಘಾತ ಆಯಿತು. ಸ್ಕಿಡ್ ಆಗಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿತ್ತು’ ಎಂದು ಆಕ್ಸಿಡೆಂಟ್​ಗೆ ಕಾರಣವನ್ನು ನೀಡಿದ್ದಾರೆ ನವೀನ್​. ಅಪಘಾತದಲ್ಲಿ ನವೀನ್​ಗೂ ಗಾಯಗಳಾಗಿದ್ದವು. ಇಷ್ಟು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ಈಗ ಡಿಸ್ಚಾರ್ಜ್​ ಆಗಿದ್ದಾರೆ. ಡಿಸ್ಚಾರ್ಜ್​ ಆದ ಬಳಿಕ ಜಯನಗರ ಸಂಚಾರಿ ಪೊಲೀಸ್​ ಠಾಣೆಗೆ ಬಂದು ಹೇಳಿಕೆ ನೀಡಿದ್ದಾರೆ. ಠಾಣಾ ಜಾಮೀನಿನ ಮೇಲೆ ಹೇಳಿಕೆ ಪಡೆದು ಅವರನ್ನು ಬಿಡುಗಡೆ ಮಾಡಲಾಗಿದೆ.

ಅಪಘಾತದ ತೀವ್ರತೆಗೆ ಸಂಚಾರಿ ವಿಜಯ್​ ಅವರ ತಲೆ ಮತ್ತು ತೊಡೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಆದ ಪರಿಣಾಮ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. ಕಡೆಗೂ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾದ ಸುದ್ದಿ ಇಡೀ ಕರುನಾಡಿಗೆ ಆಘಾತ ಉಂಟು ಮಾಡಿತ್ತು.

ಇದನ್ನೂ ಓದಿ:

ಅಮೆರಿಕದಲ್ಲಿ ಸಂಚಾರಿ ವಿಜಯ್​ಗೆ ಗೌರವ; ಪ್ರತಿಷ್ಠಿತ ಫ್ರಾಂಕ್ಲಿನ್​ ಥಿಯೇಟರ್​ನಿಂದ ನಮನ

ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ