AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ವಿಜಯ್​ಗೆ ಅಪಘಾತವಾದ ದಿನ ನಿಜಕ್ಕೂ ನಡೆದಿದ್ದೇನು? ಪೊಲೀಸರಿಗೆ ಹೇಳಿಕೆ ನೀಡಿದ ಸ್ನೇಹಿತ ನವೀನ್​

Sanchari Vijay Accident Case: ಜೂ.12ರಂದು ಭೀಕರ ರಸ್ತೆ ಅಪಘಾತ ಸಂಭವಿಸಿದಾಗ ನವೀನ್​ ಬೈಕ್​ ಓಡಿಸುತ್ತಿದ್ದರು. ಹಿಂದೆ ಕುಳಿತಿದ್ದ ಸಂಚಾರಿ ವಿಜಯ್​ಗೆ ಮಾರಣಾಂತಿಕವಾಗಿ ಪೆಟ್ಟಾಗಿತ್ತು.

ಸಂಚಾರಿ ವಿಜಯ್​ಗೆ ಅಪಘಾತವಾದ ದಿನ ನಿಜಕ್ಕೂ ನಡೆದಿದ್ದೇನು? ಪೊಲೀಸರಿಗೆ ಹೇಳಿಕೆ ನೀಡಿದ ಸ್ನೇಹಿತ ನವೀನ್​
ಸಂಚಾರಿ ವಿಜಯ್​
TV9 Web
| Edited By: |

Updated on: Jul 02, 2021 | 11:48 AM

Share

ಖ್ಯಾತ ನಟ ಸಂಚಾರಿ ವಿಜಯ್​ ಅವರು ರಸ್ತೆ ಅಪಘಾತಕ್ಕೆ ಒಳಗಾಗಿ ನಿಧನರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಸ್ನೇಹಿತ ನವೀನ್​ ಅವರು ಪೊಲೀಸರ ಎದುರು ತಮ್ಮ ಹೇಳಿಕೆ ನೀಡಿದ್ದಾರೆ. ಜೂ.12ರಂದು ಭೀಕರ ರಸ್ತೆ ಅಪಘಾತ ಸಂಭವಿಸಿದಾಗ ನವೀನ್​ ಬೈಕ್​ ಓಡಿಸುತ್ತಿದ್ದರು. ಹಿಂದೆ ಕುಳಿತಿದ್ದ ಸಂಚಾರಿ ವಿಜಯ್​ಗೆ ಮಾರಣಾಂತಿಕವಾಗಿ ಪೆಟ್ಟಾಗಿತ್ತು. ಅದು ಅವರ ಪ್ರಾಣಕ್ಕೆ ಕುತ್ತು ತಂದಿತು. ಆ ಬಗ್ಗೆ ಪೊಲೀಸರಿಗೆ ನವೀನ್​ ಮಾಹಿತಿ ನೀಡಿದ್ದಾರೆ.

‘ಜೂನ್ 12ರಂದು ಸ್ನೇಹಿತರ ಮನೆಯಲ್ಲಿ ಸಭೆ ಸೇರಿದ್ದೆವು. ಸಭೆಯಲ್ಲಿ ನಟ ಸಂಚಾರಿ ವಿಜಯ್ ಮತ್ತು ಇತರೆ ಸ್ನೇಹಿತರು ಇದ್ದೆವು. ಕೊರೊನಾ ಕಿಟ್ ಹಂಚಿಕೆ ಸಂಬಂಧ ಚರ್ಚಿಸಲಾಗಿತ್ತು. ಚರ್ಚೆಯ ವೇಳೆ ನನಗೆ ಮನೆಯಿಂದ ಫೋನ್ ಬಂದಿತ್ತು. ಪತ್ನಿಗೆ ಮಾತ್ರೆಯನ್ನು ತರುವುದಕ್ಕೆ ನಾನು ಹೋಗಬೇಕಾಯಿತು. ಬೈಕ್‌ನಲ್ಲಿ ಹತ್ತಿರದ ಮೆಡಿಕಲ್ ಸ್ಟೋರ್‌ಗೆ ಹೋಗ್ತಿದ್ದೆ. ಈ ವೇಳೆ ಸಂಚಾರಿ ವಿಜಯ್ ಸಹ ನನ್ನ ಜತೆ ಬಂದರು’ ಎಂದು ನವೀನ್​ ಹೇಳಿಕೆ ನೀಡಿದ್ದಾರೆ.

‘ಮನೆ ಹತ್ತಿರವೇ ಶಾಪ್ ಇದ್ದ ಕಾರಣ ಹೆಲ್ಮೆಟ್ ಹಾಕಲಿಲ್ಲ. ಮಾತ್ರೆ ಖರೀದಿಸಿ ವಾಪಸ್ ಬರಬೇಕಾದರೆ ಅಪಘಾತ ಆಯಿತು. ಸ್ಕಿಡ್ ಆಗಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿತ್ತು’ ಎಂದು ಆಕ್ಸಿಡೆಂಟ್​ಗೆ ಕಾರಣವನ್ನು ನೀಡಿದ್ದಾರೆ ನವೀನ್​. ಅಪಘಾತದಲ್ಲಿ ನವೀನ್​ಗೂ ಗಾಯಗಳಾಗಿದ್ದವು. ಇಷ್ಟು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ಈಗ ಡಿಸ್ಚಾರ್ಜ್​ ಆಗಿದ್ದಾರೆ. ಡಿಸ್ಚಾರ್ಜ್​ ಆದ ಬಳಿಕ ಜಯನಗರ ಸಂಚಾರಿ ಪೊಲೀಸ್​ ಠಾಣೆಗೆ ಬಂದು ಹೇಳಿಕೆ ನೀಡಿದ್ದಾರೆ. ಠಾಣಾ ಜಾಮೀನಿನ ಮೇಲೆ ಹೇಳಿಕೆ ಪಡೆದು ಅವರನ್ನು ಬಿಡುಗಡೆ ಮಾಡಲಾಗಿದೆ.

ಅಪಘಾತದ ತೀವ್ರತೆಗೆ ಸಂಚಾರಿ ವಿಜಯ್​ ಅವರ ತಲೆ ಮತ್ತು ತೊಡೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಆದ ಪರಿಣಾಮ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. ಕಡೆಗೂ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾದ ಸುದ್ದಿ ಇಡೀ ಕರುನಾಡಿಗೆ ಆಘಾತ ಉಂಟು ಮಾಡಿತ್ತು.

ಇದನ್ನೂ ಓದಿ:

ಅಮೆರಿಕದಲ್ಲಿ ಸಂಚಾರಿ ವಿಜಯ್​ಗೆ ಗೌರವ; ಪ್ರತಿಷ್ಠಿತ ಫ್ರಾಂಕ್ಲಿನ್​ ಥಿಯೇಟರ್​ನಿಂದ ನಮನ

ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​