AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ವಿಜಯ್​ ಕೋಮಾದಲ್ಲೇ ಇದ್ದಾರೆ, ಆರೋಗ್ಯ ಸ್ಥಿತಿ ಗಂಭೀರವಾಗಿದೆ: ವೈದ್ಯರ ಮಾಹಿತಿ

Sanchari Vijay Health Update: ಸದ್ಯ ನಟ ಸಂಚಾರಿ ವಿಜಯ್​ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಎಲ್ಲಾ ಜೀವ ರಕ್ಷಕ ವಿಧಾನದ ಮೂಲಕ, ನ್ಯೂರೋ ಐಸಿಯುನಲ್ಲಿ ಇದ್ದಾರೆ. ನಾವು ಅತ್ಯುತ್ತಮ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಅಪೋಲೊ ಆಸ್ಪತ್ರೆಯಿಂದ ಬಿಡುಗಡೆ ಮಾಡಿರುವ ಹೆಲ್ತ್​ ಬುಲೆಟಿನ್​ನಲ್ಲಿ ತಿಳಿಸಲಾಗಿದೆ.

ಸಂಚಾರಿ ವಿಜಯ್​ ಕೋಮಾದಲ್ಲೇ ಇದ್ದಾರೆ, ಆರೋಗ್ಯ ಸ್ಥಿತಿ ಗಂಭೀರವಾಗಿದೆ: ವೈದ್ಯರ ಮಾಹಿತಿ
ನಟ ಸಂಚಾರಿ ವಿಜಯ್
TV9 Web
| Edited By: |

Updated on:Jun 13, 2021 | 11:24 PM

Share

ಬೆಂಗಳೂರು: ಬೈಕ್ ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್​ವುಡ್​ನ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ನಟ ಸಂಚಾರಿ ವಿಜಯ್​ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಐಸಿಯುನಲ್ಲಿ ಸಂಚಾರಿ ವಿಜಯ್​ಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ಬಿಡುಗಡೆಗೊಳಿಸಿರುವ ಹೆಲ್ತ್ ಬುಲೆಟಿನ್​ನಲ್ಲಿ ಮಾಹಿತಿ ನೀಡಿದ್ದಾರೆ.

ಸಂಚಾರಿ ವಿಜಯ್​ ಆರೋಗ್ಯ ಸ್ಥಿತಿ, ಮೆದುಳಿನ ಭಾಗದಲ್ಲಿ ಉಂಟಾದ ರಕ್ತಸ್ರಾವದಿಂದ ಗಂಭೀರವಾಗಿತ್ತು. ಕೂಡಲೇ ಶಸ್ತ್ರಚಿಕಿತ್ಸೆ ಮಾಡಿ ಮೆದುಳಿನಲ್ಲಿನ ರಕ್ತಸ್ರಾವ ತೆಗೆಯಲಾಗಿದೆ. ಸದ್ಯ ನಟ ಸಂಚಾರಿ ವಿಜಯ್​ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಎಲ್ಲಾ ಜೀವ ರಕ್ಷಕ ವಿಧಾನದ ಮೂಲಕ, ನ್ಯೂರೋ ಐಸಿಯುನಲ್ಲಿ ಇದ್ದಾರೆ. ನಾವು ಅತ್ಯುತ್ತಮ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಅಪೋಲೊ ಆಸ್ಪತ್ರೆಯಿಂದ ಬಿಡುಗಡೆ ಮಾಡಿರುವ ಹೆಲ್ತ್​ ಬುಲೆಟಿನ್​ನಲ್ಲಿ ತಿಳಿಸಲಾಗಿದೆ.

ಸ್ಯಾಂಡಲ್​ವುಡ್​ನಲ್ಲಿ ಭಿನ್ನ ನಟನೆ ಮೂಲಕ ಗುರುತಿಸಿಕೊಂಡ ನಟ ಸಂಚಾರಿ ವಿಜಯ್​ ಅವರು ಅಪಘಾತಕ್ಕೆ ತುತ್ತಾಗಿದ್ದರು. ಬೈಕ್​ನಲ್ಲಿ ಸಂಚಾರ ಮಾಡುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಅವರಿಗೆ ಗಂಭೀರ ಗಾಯಗಳಾಗಿತ್ತು. ಅವರನ್ನು ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿತ್ತು.

ಶನಿವಾರ (ಜೂನ್​ 12) ರಾತ್ರಿ ಬೈಕ್​ ಅಪಘಾತ ಸಂಭವಿಸಿತ್ತು. ಅವರನ್ನು ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಮೆದುಳಿನ ಬಲ ಭಾಗದಲ್ಲಿ ರಕ್ತಸ್ರಾವ ಉಂಟಾಗಿದ್ದು, ತೊಡೆಯಲ್ಲಿ ಗಾಯಗಳಾಗಿದೆ ಎಂದು ಮಾಹಿತಿ ಲಭ್ಯವಾಗಿತ್ತು. ನಿನ್ನೆ ರಾತ್ರಿಯೇ ಅವರಿಗೆ ವೈದ್ಯರು ಮೆದುಳಿನ ಶಸ್ತ್ರಚಿಕಿತ್ಸೆ  ನಡೆಸಿದ್ದಾರೆ. ಸದ್ಯ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿತ್ತು.

ರಂಗಭೂಮಿ ಹಿನ್ನೆಲೆಯಿಂದ ಬಂದ ಸಂಚಾರಿ ವಿಜಯ್​ ಓರ್ವ ಪ್ರತಿಭಾನ್ವಿತ ನಟ. 2014ರಲ್ಲಿ ಅವರ ನಟಿಸಿದ ಹರಿವು ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ‘ನಾನು ಅವನಲ್ಲ.. ಅವಳು’ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದ ಬಳಿಕ ಅವರಿಗೆ ಸ್ಯಾಂಡಲ್​ವುಡ್​ನಲ್ಲಿ ಅವಕಾಶಗಳು ಹೆಚ್ಚಾಗಿದ್ದವು. ಲಾಕ್​ಡೌನ್​ ಸಂದರ್ಭದಲ್ಲಿ ಅವರು ಅನೇಕರಿಗೆ ಸಹಾಯ ಮಾಡುತ್ತಿದ್ದರು. ಅಷ್ಟರಲ್ಲೇ ಈ ಅಪಘಾತ ಸಂಭವಿಸಿರುವುದು ನೋವಿನ ಸಂಗತಿ.

ಇದನ್ನೂ ಓದಿ: ಸಂಚಾರಿ ವಿಜಯ್​ ಮಾಡಿದ ಆ ಒಂದು ತಪ್ಪು ನಿರ್ಧಾರ ಇಷ್ಟೆಲ್ಲ ಸಮಸ್ಯೆಗೆ ಕಾರಣವಾಯ್ತು

ಶಸ್ತ್ರಚಿಕಿತ್ಸೆ ನಡೆಸಿ 10 ಗಂಟೆ ಕಳೆದರೂ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಸಂಚಾರಿ ವಿಜಯ್; ಪರಿಸ್ಥಿತಿ ಮತ್ತಷ್ಟು ಗಂಭೀರ

Published On - 11:02 pm, Sun, 13 June 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು