AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ವಿಜಯ್​ ಕೋಮಾದಲ್ಲೇ ಇದ್ದಾರೆ, ಆರೋಗ್ಯ ಸ್ಥಿತಿ ಗಂಭೀರವಾಗಿದೆ: ವೈದ್ಯರ ಮಾಹಿತಿ

Sanchari Vijay Health Update: ಸದ್ಯ ನಟ ಸಂಚಾರಿ ವಿಜಯ್​ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಎಲ್ಲಾ ಜೀವ ರಕ್ಷಕ ವಿಧಾನದ ಮೂಲಕ, ನ್ಯೂರೋ ಐಸಿಯುನಲ್ಲಿ ಇದ್ದಾರೆ. ನಾವು ಅತ್ಯುತ್ತಮ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಅಪೋಲೊ ಆಸ್ಪತ್ರೆಯಿಂದ ಬಿಡುಗಡೆ ಮಾಡಿರುವ ಹೆಲ್ತ್​ ಬುಲೆಟಿನ್​ನಲ್ಲಿ ತಿಳಿಸಲಾಗಿದೆ.

ಸಂಚಾರಿ ವಿಜಯ್​ ಕೋಮಾದಲ್ಲೇ ಇದ್ದಾರೆ, ಆರೋಗ್ಯ ಸ್ಥಿತಿ ಗಂಭೀರವಾಗಿದೆ: ವೈದ್ಯರ ಮಾಹಿತಿ
ನಟ ಸಂಚಾರಿ ವಿಜಯ್
Follow us
TV9 Web
| Updated By: Digi Tech Desk

Updated on:Jun 13, 2021 | 11:24 PM

ಬೆಂಗಳೂರು: ಬೈಕ್ ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್​ವುಡ್​ನ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ನಟ ಸಂಚಾರಿ ವಿಜಯ್​ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಐಸಿಯುನಲ್ಲಿ ಸಂಚಾರಿ ವಿಜಯ್​ಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ಬಿಡುಗಡೆಗೊಳಿಸಿರುವ ಹೆಲ್ತ್ ಬುಲೆಟಿನ್​ನಲ್ಲಿ ಮಾಹಿತಿ ನೀಡಿದ್ದಾರೆ.

ಸಂಚಾರಿ ವಿಜಯ್​ ಆರೋಗ್ಯ ಸ್ಥಿತಿ, ಮೆದುಳಿನ ಭಾಗದಲ್ಲಿ ಉಂಟಾದ ರಕ್ತಸ್ರಾವದಿಂದ ಗಂಭೀರವಾಗಿತ್ತು. ಕೂಡಲೇ ಶಸ್ತ್ರಚಿಕಿತ್ಸೆ ಮಾಡಿ ಮೆದುಳಿನಲ್ಲಿನ ರಕ್ತಸ್ರಾವ ತೆಗೆಯಲಾಗಿದೆ. ಸದ್ಯ ನಟ ಸಂಚಾರಿ ವಿಜಯ್​ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಎಲ್ಲಾ ಜೀವ ರಕ್ಷಕ ವಿಧಾನದ ಮೂಲಕ, ನ್ಯೂರೋ ಐಸಿಯುನಲ್ಲಿ ಇದ್ದಾರೆ. ನಾವು ಅತ್ಯುತ್ತಮ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಅಪೋಲೊ ಆಸ್ಪತ್ರೆಯಿಂದ ಬಿಡುಗಡೆ ಮಾಡಿರುವ ಹೆಲ್ತ್​ ಬುಲೆಟಿನ್​ನಲ್ಲಿ ತಿಳಿಸಲಾಗಿದೆ.

ಸ್ಯಾಂಡಲ್​ವುಡ್​ನಲ್ಲಿ ಭಿನ್ನ ನಟನೆ ಮೂಲಕ ಗುರುತಿಸಿಕೊಂಡ ನಟ ಸಂಚಾರಿ ವಿಜಯ್​ ಅವರು ಅಪಘಾತಕ್ಕೆ ತುತ್ತಾಗಿದ್ದರು. ಬೈಕ್​ನಲ್ಲಿ ಸಂಚಾರ ಮಾಡುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಅವರಿಗೆ ಗಂಭೀರ ಗಾಯಗಳಾಗಿತ್ತು. ಅವರನ್ನು ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿತ್ತು.

ಶನಿವಾರ (ಜೂನ್​ 12) ರಾತ್ರಿ ಬೈಕ್​ ಅಪಘಾತ ಸಂಭವಿಸಿತ್ತು. ಅವರನ್ನು ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಮೆದುಳಿನ ಬಲ ಭಾಗದಲ್ಲಿ ರಕ್ತಸ್ರಾವ ಉಂಟಾಗಿದ್ದು, ತೊಡೆಯಲ್ಲಿ ಗಾಯಗಳಾಗಿದೆ ಎಂದು ಮಾಹಿತಿ ಲಭ್ಯವಾಗಿತ್ತು. ನಿನ್ನೆ ರಾತ್ರಿಯೇ ಅವರಿಗೆ ವೈದ್ಯರು ಮೆದುಳಿನ ಶಸ್ತ್ರಚಿಕಿತ್ಸೆ  ನಡೆಸಿದ್ದಾರೆ. ಸದ್ಯ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿತ್ತು.

ರಂಗಭೂಮಿ ಹಿನ್ನೆಲೆಯಿಂದ ಬಂದ ಸಂಚಾರಿ ವಿಜಯ್​ ಓರ್ವ ಪ್ರತಿಭಾನ್ವಿತ ನಟ. 2014ರಲ್ಲಿ ಅವರ ನಟಿಸಿದ ಹರಿವು ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ‘ನಾನು ಅವನಲ್ಲ.. ಅವಳು’ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದ ಬಳಿಕ ಅವರಿಗೆ ಸ್ಯಾಂಡಲ್​ವುಡ್​ನಲ್ಲಿ ಅವಕಾಶಗಳು ಹೆಚ್ಚಾಗಿದ್ದವು. ಲಾಕ್​ಡೌನ್​ ಸಂದರ್ಭದಲ್ಲಿ ಅವರು ಅನೇಕರಿಗೆ ಸಹಾಯ ಮಾಡುತ್ತಿದ್ದರು. ಅಷ್ಟರಲ್ಲೇ ಈ ಅಪಘಾತ ಸಂಭವಿಸಿರುವುದು ನೋವಿನ ಸಂಗತಿ.

ಇದನ್ನೂ ಓದಿ: ಸಂಚಾರಿ ವಿಜಯ್​ ಮಾಡಿದ ಆ ಒಂದು ತಪ್ಪು ನಿರ್ಧಾರ ಇಷ್ಟೆಲ್ಲ ಸಮಸ್ಯೆಗೆ ಕಾರಣವಾಯ್ತು

ಶಸ್ತ್ರಚಿಕಿತ್ಸೆ ನಡೆಸಿ 10 ಗಂಟೆ ಕಳೆದರೂ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಸಂಚಾರಿ ವಿಜಯ್; ಪರಿಸ್ಥಿತಿ ಮತ್ತಷ್ಟು ಗಂಭೀರ

Published On - 11:02 pm, Sun, 13 June 21

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ