AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ವಿಜಯ್ ಹೆಸರಿನಲ್ಲಿ ದೇವರು ಮೆಚ್ಚುವ ಕೆಲಸ ಮಾಡಿದ ಬಿಗ್​ ಬಾಸ್​ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್​

Sanchari Vijay Death: ಮೇಲೊಬ್ಬ ಮಾಯಾವಿ ಸಿನಿಮಾದಲ್ಲಿ ಸಂಚಾರಿ ವಿಜಯ್​ ಮತ್ತು ಚಕ್ರವರ್ತಿ ಚಂದ್ರಚೂಡ್​ ಜೊತೆಯಾಗಿ ಕೆಲಸ ಮಾಡಿದ್ದರು. ಆದರೆ ಆ ಸಿನಿಮಾ ತೆರೆ ಕಾಣುವುದಕ್ಕೂ ಮುನ್ನವೇ ವಿಜಯ್​ ಇಹಲೋಹ ತ್ಯಜಿಸುವಂತಾಗಿದ್ದು ನೋವಿನ ಸಂಗತಿ.

ಸಂಚಾರಿ ವಿಜಯ್ ಹೆಸರಿನಲ್ಲಿ ದೇವರು ಮೆಚ್ಚುವ ಕೆಲಸ ಮಾಡಿದ ಬಿಗ್​ ಬಾಸ್​ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್​
ಚಕ್ರವರ್ತಿ ಚಂದ್ರಚೂಡ್​, ಸಂಚಾರಿ ವಿಜಯ್​
ಮದನ್​ ಕುಮಾರ್​
|

Updated on:Jun 17, 2021 | 12:46 PM

Share

ಭೀಕರ ರಸ್ತೆ ಅಪಘಾತದಲ್ಲಿ ನಟ ಸಂಚಾರಿ ವಿಜಯ್​ ಅವರನ್ನು ಕಳೆದುಕೊಂಡಿರುವುದು ಇಡೀ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಅಭಿಮಾನಿಗಳಿಗಿಂತಲೂ ಹೆಚ್ಚಾಗಿ ಅವರ ಸ್ನೇಹಿತರು ಮತ್ತು ಕುಟುಂಬದವರಿಗೆ ಇದರಿಂದ ಆಗಿರುವ ನೋವು ಹೇಳತೀರದು. ನಟ, ಪತ್ರಕರ್ತ, ಬಿಗ್​ ಬಾಸ್​ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್​ ಅವರು ಕೂಡ ಸಂಚಾರಿ ವಿಜಯ್​ ಜೊತೆ ಆಪ್ತ ಒಡನಾಟ ಇಟ್ಟುಕೊಂಡಿದ್ದರು. ವಿಜಯ್​ ನಿಧನದಿಂದ ಅವರಿಗೂ ಸಂಕಟ ಆಗಿದೆ. ಈ ನಡುವೆ ಎಲ್ಲರೂ ಮೆಚ್ಚುವಂತಹ ಒಂದು ಕಾರ್ಯವನ್ನು ಚಕ್ರವರ್ತಿ ಚಂದ್ರಚೂಡ್​ ಮಾಡಿದ್ದಾರೆ.

ಸಂಚಾರಿ ವಿಜಯ್​ ಅವರ ಹೆಸರಿನಲ್ಲಿ ಚಕ್ರವರ್ತಿ ಚಂದ್ರಚೂಡ್​ ಅವರು ಒಂದು ಗಿಣಿಯನ್ನು ದತ್ತು ಪಡೆದುಕೊಂಡಿದ್ದಾರೆ. ಸದ್ಯ ಲಾಕ್​ಡೌನ್​ ಇರುವುದರಿಂದ ಎಲ್ಲ ಮೃಗಾಲಯಗಳ ಬಾಗಿಲು ಮುಚ್ಚಿವೆ. ಇದರಿಂದಾಗಿ ಅಲ್ಲಿನ ಪ್ರಾಣಿ ಪಕ್ಷಿಗಳ ಆಹಾರ ಮತ್ತು ದಿನನಿತ್ಯದ ನಿರ್ವಹಣೆ ಕಷ್ಟ ಆಗುತ್ತಿದೆ. ಹಾಗಾಗಿ ಪ್ರಾಣಿ ಪಕ್ಷಿಗಳನ್ನು ದತ್ತು ಪಡೆದುಕೊಳ್ಳುವಂತೆ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅವರು ಕರೆ ನೀಡಿದ್ದರು. ಅದಕ್ಕೆ ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಮತ್ತು ಜನಸಾಮಾನ್ಯರು ಕೂಡ ಸ್ಪಂದಿಸಿದ್ದಾರೆ.

ಅಗಲಿದ ತಮ್ಮ ಗೆಳಯ ಸಂಚಾರಿ ವಿಜಯ್​ ಅವರ ನೆನಪಿನಲ್ಲಿ ಚಕ್ರವರ್ತಿ ಚಂದ್ರಚೂಡ್​ ಅವರು ಇಂದಿರಾ ಪ್ರಿಯದರ್ಶಿನಿ ಪ್ರಾಣಿ ಸಂಗ್ರಹಾಲಯದಲ್ಲಿ ಇರುವ ಗಿಣಿಯೊಂದನ್ನು ದತ್ತು ಪಡೆದುಕೊಂಡಿದ್ದಾರೆ. ಸಂಚಾರಿ ವಿಜಯ್​ ಹೆಸರಿನಲ್ಲಿ ಒಂದು ವರ್ಷದ ಅವಧಿಗೆ ಆ ಗಿಣಿಯ ಸಂಪೂರ್ಣ ಹೊಣೆಯನ್ನು ಅವರು ಹೊತ್ತುಕೊಂಡಿದ್ದಾರೆ. ಅದರ ಪ್ರಮಾಣಪತ್ರವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಸ್ವಾಮಿ ಸಂಚಾರಿ ವಿಜಯ್​, ನಿಮಗೆ ಗಿಣಿ ಇಷ್ಟ. ಅದಕ್ಕೇ ದತ್ತು ತೆಗೆದುಕೊಂಡಿದ್ದೇನೆ ನೋಡಿ ನಿಮ್ಮ ಹೆಸರಲ್ಲಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ಮೇಲೊಬ್ಬ ಮಾಯಾವಿ’ ಸಿನಿಮಾದಲ್ಲಿ ಸಂಚಾರಿ ವಿಜಯ್​ ಮತ್ತು ಚಕ್ರವರ್ತಿ ಚಂದ್ರಚೂಡ್​ ಜೊತೆಯಾಗಿ ಕೆಲಸ ಮಾಡಿದ್ದರು. ಆದರೆ ಆ ಸಿನಿಮಾ ತೆರೆ ಕಾಣುವುದಕ್ಕೂ ಮುನ್ನವೇ ವಿಜಯ್​ ಇಹಲೋಹ ತ್ಯಜಿಸುವಂತಾಗಿದ್ದು ನೋವಿನ ಸಂಗತಿ. ಮೇಲೊಬ್ಬ ಮಾಯಾವಿ ಮಾತ್ರವಲ್ಲದೆ ಲಂಕೆ, ಅವಸ್ಥಾಂತರ, ಪಿರಂಗಿಪುರ, ಪುಕ್ಸಟ್ಟೆ ಲೈಫು, ತಲೆದಂಡ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದರು. ಅಷ್ಟರಲ್ಲಾಗಲೇ ವಿಧಿ ತನ್ನ ಕ್ರೌರ್ಯ ಪ್ರದರ್ಶಿಸಿದೆ.

ಜೂ. 12 ರಾತ್ರಿ ವಿಜಯ್​ಗೆ ರಸ್ತೆ ಅಪಘಾತ ಆಯಿತು. ಜೂ.15ರಂದು ಅವರು ನಿಧನರಾದರು ಎಂದು ಅಪೋಲೋ ಆಸ್ಪತ್ರೆ ವೈದ್ಯರು ತಿಳಿಸಿದರು. ಅದೇ ದಿನ ಸಂಜೆ ಅವರ ಹುಟ್ಟೂರಾದ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಿತು.

ಇದನ್ನೂ ಓದಿ:

Sanchari Vijay: ಸಂಚಾರಿ ವಿಜಯ್ ನಟನೆಯ ‘ನಾನು ಅವನಲ್ಲ ಅವಳು’ ಸಿನಿಮಾ ಉಚಿತವಾಗಿ ನೋಡಬಹುದು; ಇಲ್ಲಿದೆ ಲಿಂಕ್​

Sanchari Vijay: ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಟೀಸರ್​ ನೋಡಿದರೆ ಕಲ್ಲು ಹೃದಯವೂ ಕರಗಲೇಬೇಕು

Published On - 12:41 pm, Thu, 17 June 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ