AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanchari Vijay: ನಟ ಸಂಚಾರಿ ವಿಜಯ್​ಗೆ ಶ್ರದ್ಧಾಂಜಲಿ ಅರ್ಪಿಸಿದ ಸಿಎಂ ಯಡಿಯೂರಪ್ಪ ಮತ್ತು ಸುದೀಪ್​

Sanchari Vijay Accident: ವೈದ್ಯರು ಮತ್ತು ಕುಟುಂಬದವರ ಕಡೆಯಿಂದ ಸಂಚಾರಿ ವಿಜಯ್ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವ ಮುನ್ನವೇ ಅನೇಕರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ನಟ ಕಿಚ್ಚ ಸುದೀಪ್ ಸೇರಿ ಅನೇಕರು ಕಂಬನಿ ಮಿಡಿದಿದ್ದಾರೆ.

Sanchari Vijay: ನಟ ಸಂಚಾರಿ ವಿಜಯ್​ಗೆ ಶ್ರದ್ಧಾಂಜಲಿ ಅರ್ಪಿಸಿದ ಸಿಎಂ ಯಡಿಯೂರಪ್ಪ ಮತ್ತು ಸುದೀಪ್​
ಸಂಚಾರಿ ವಿಜಯ್​ -ಸುದೀಪ್​​
ಮದನ್​ ಕುಮಾರ್​
|

Updated on:Jun 14, 2021 | 1:56 PM

Share

ನಟ ಸಂಚಾರಿ ವಿಜಯ್​ ಅವರಿಗೆ ಕಿಚ್ಚ ಸುದೀಪ್, ಸಿಎಂ ಯಡಿಯೂರಪ್ಪ ಸೇರಿ ಅನೇಕರು​ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ನೋವನ್ನು ಹಂಚಿಕೊಂಡಿರುವ ಸುದೀಪ್​, ಕಂಬನಿ ಮಿಡಿದಿದ್ದಾರೆ. ‘ಸಂಚಾರಿ ವಿಜಯ್​ ಇಲ್ಲ ಎಂಬುದನ್ನು ಒಪ್ಪಿಕೊಳ್ಳಲು ತೀವ್ರ ನೋವಾಗುತ್ತದೆ. ಈ ಲಾಕ್​ಡೌನ್​ನಿಂತ ಕೆಲವೇ ದಿನಗಳ ಮುನ್ನ ಅವರನ್ನು ಭೇಟಿ ಮಾಡಿದ್ದೆ. ಅವರ ಮುಂದಿನ ಸಿನಿಮಾ ಬಗ್ಗೆ ನಾನು ಹೆಚ್ಚು ಎಗ್ಸೈಟ್​ ಆಗಿದ್ದೆ. ಅವರು ಇಲ್ಲದಿರುವುದು ತೀವ್ರ ನೋವಿನ ಸಂಗತಿ. ಕುಟುಂಬದವರು ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು’ ಎಂದು ಸುದೀಪ್ ಟ್ವೀಟ್​ ಮಾಡಿದ್ದಾರೆ.

ಶನಿವಾರ (ಜೂ.12) ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ಸಂಚಾರಿ ವಿಜಯ್​ ಅವರಿಗೆ ಆಕ್ಸಿಡೆಂಟ್​ ಆಯಿತು. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವಿಷಯ ತಿಳಿಯುತ್ತಿದ್ದಂತೆಯೇ ಕಿಚ್ಚ ಸುದೀಪ್​ ಅವರು ಸಹಾಯಹಸ್ತ ಚಾಚಿದ್ದರು. ಅವರಿಂದಾಗಿ ವಿಜಯ್​ಗೆ ರಾತ್ರೋರಾತ್ರಿ ಶಸ್ತ್ರ ಚಿಕಿತ್ಸೆ ನಡೆಸಲು ಸಾಧ್ಯವಾಯಿತು. ಅಷ್ಟಾದರೂ ಕೂಡ ಅವರು ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ವೈದ್ಯರು ಹೇಳಿದ್ದರು.

ಇದನ್ನೂ ಓದಿ:

ಸಂಚಾರಿ ವಿಜಯ್​ ಬದುಕುಳಿಯುವ ಸಾಧ್ಯತೆ ಕಡಿಮೆ, ಆತನ ಅಂಗಾಂಗ ದಾನ ಮಾಡುತ್ತೇವೆ: ಸಹೋದರ ಸಿದ್ದೇಶ್​ ಗದ್ಗದಿತ

ಸಂಚಾರಿ ವಿಜಯ್​ ಮಾಡಿದ ಆ ಒಂದು ತಪ್ಪು ನಿರ್ಧಾರ ಇಷ್ಟೆಲ್ಲ ಸಮಸ್ಯೆಗೆ ಕಾರಣವಾಯ್ತು

Published On - 1:20 pm, Mon, 14 June 21

Follow Us
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ