AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಧನರಾಗುವುದಕ್ಕೂ ಎರಡು ದಿನ ಮೊದಲು ಮನದ ನೋವು ಹಂಚಿಕೊಂಡಿದ್ದ ಸಂಚಾರಿ ವಿಜಯ್​

ಸಂಚಾರಿ ವಿಜಯ್​ ಇತ್ತೀಚೆಗೆ ಕಲರ್ಸ್​ ಕನ್ನಡ ವಾಹಿನಿ ಪೇಜ್​ನಲ್ಲಿ ಲೈವ್​ ಬಂದಿದ್ದರು. ಈ ವೇಳೆ ಅವರು ‘ನಾನು ಅವನಲ್ಲ ಅವಳು’ ಸಿನಿಮಾ ಬಗ್ಗೆ ಮಾತನಾಡಿದ್ದರು.

ನಿಧನರಾಗುವುದಕ್ಕೂ ಎರಡು ದಿನ ಮೊದಲು ಮನದ ನೋವು ಹಂಚಿಕೊಂಡಿದ್ದ ಸಂಚಾರಿ ವಿಜಯ್​
ಸಂಚಾರಿ ವಿಜಯ್
ರಾಜೇಶ್ ದುಗ್ಗುಮನೆ
|

Updated on: Jun 14, 2021 | 9:15 PM

Share

ನಟ ಸಂಚಾರಿ ವಿಜಯ್​ ಮೃತಪಟ್ಟಿದ್ದಾರೆ. ಸಣ್ಣ ವಯಸ್ಸಿಗೆ ಅವರು ಅಸುನೀಗಿರುವ ವಿಚಾರ ಸ್ಯಾಂಡಲ್​ವುಡ್​ ಮಂದಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ನೋವುಂಟು ಮಾಡಿದೆ. ಸಂಚಾರಿ ವಿಜಯ್​ ಇತ್ತೀಚೆಗೆ ಲೈವ್​ ಬಂದು ತಮ್ಮ ಮನದಾಳದ ನೋವನ್ನು ಹಂಚಿಕೊಂಡಿದ್ದರು. ಈಗ ಅವರು ನಮ್ಮನ್ನು ಬಿಟ್ಟು ಹೋಗಿದ್ದಾರೆ ಎಂಬುದು ನಿಜಕ್ಕೂ ಬೇಸರದ ಸಂಗತಿ.

ಸಂಚಾರಿ ವಿಜಯ್​ ಇತ್ತೀಚೆಗೆ ವಾಹಿನಿ ಒಂದರ  ಪೇಜ್​ನಲ್ಲಿ ಲೈವ್​ ಬಂದಿದ್ದರು. ಈ ವೇಳೆ ಅವರು ‘ನಾನು ಅವನಲ್ಲ ಅವಳು’ ಸಿನಿಮಾ ಬಗ್ಗೆ ಮಾತನಾಡಿದ್ದರು. ಈ ಚಿತ್ರದ ಬಗ್ಗೆ ಅವರಿಗೆ ನೋವೊಂದು ಹಾಗೆಯೇ ಉಳಿದುಕೊಂಡಿದೆಯಂತೆ. ಇದನ್ನು ಅವರು ಮನಬಿಚ್ಚಿ ಹೇಳಿಕೊಂಡಿದ್ದರು.

‘ನಾನು ಅವನಲ್ಲ ಅವಳು’ ಸಿನಿಮಾದಲ್ಲಿ ಸಂಚಾರಿ ವಿಜಯ್​ ಅದ್ಭುತವಾಗಿ ನಟಿಸಿದ್ದರು. ಆದರೆ, ಈ ಸಿನಿಮಾ ಹೆಚ್ಚು ಜನರಿಗೆ ತಲುಪಿಲ್ಲ ಎನ್ನುವ ಕೊರಗು ಅವರಲ್ಲಿದೆಯಂತೆ. ಫೇಸ್​ಬುಕ್ ​ಲೈವ್​ನಲ್ಲಿ ಅಭಿಮಾನಿಯೋರ್ವ ಆ ಸಿನಿಮಾ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದರು. ಈ ವೇಳೆ ಸಂಚಾರಿ ವಿಜಯ್​, ‘ಈ ಸಿನಿಮಾ ಬಗ್ಗೆ ಅನೇಕರು ಮಾತನಾಡಿದ್ದಾರೆ. ಆ ಬಗ್ಗೆ ನಿಜ್ಜಕ್ಕೂ ಖುಷಿ ಇದೆ. ಆದರೆ, ಈ ಸಿನಿಮಾ ಹೆಚ್ಚು ಜನರಿಗೆ ರೀಚ್​​ ಆಗಿಲ್ಲ ಎನ್ನುವ ಬೇಸರ ಇದೆ. ಮುಂದಿನ ದಿನಗಳಲ್ಲಿ ಈ ಸಿನಿಮಾ ಹೆಚ್ಚು ಜನರಿಗೆ ರೀಚ್​ ಆಗೋಕೆ ಏನು ಮಾಡಬೇಕು ಎನ್ನುವ ಬಗ್ಗೆ ನಾವು ಯೋಚಿಸುತ್ತಿದ್ದೆವೆ ’ ಎಂದು  ಹೇಳಿದ್ದರು.

2015ರಲ್ಲಿ ತೆರೆಗೆ ಬಂದ ‘ನಾನು ಅವನಲ್ಲ ಅವಳು’ ಸಿನಿಮಾ ಸಂಚಾರಿ ವಿಜಯ್​ ಅವರ ವೃತ್ತಿ ಜೀವನವನ್ನೇ ಬದಲಾಯಿಸಿತು. ಈ ಚಿತ್ರದಲ್ಲಿ ಅವರ ಅದ್ಭುತ ನಟನೆಗೆ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿಗಳು ಸಿಕ್ಕವು. ಈ ಚಿತ್ರ ತೆರೆಕಂಡ ನಂತರ ಅವರಿಗೆ ಅವಕಾಶಗಳು ತೀವ್ರವಾಗಿ ಹೆಚ್ಚಿದವು. 2017 ಮತ್ತು 2018ರಲ್ಲಿ ಅವರ ನಟನೆಯ 8-9 ಚಿತ್ರಗಳು ತೆರೆಗೆ ಬಂದವು. ‘ಆ್ಯಕ್ಟ್​ 1978’ ಅವರ ಕೊನೆಯ ಚಿತ್ರ.

 ಇದನ್ನೂ ಓದಿ:

Sanchari Vijay: ಸಂಚಾರಿ ವಿಜಯ್​ ಎಂಬ ಪ್ರತಿಭಾವಂತ ಕಲಾವಿದನಿಗೆ, ಅದಕ್ಕೂ ಮಿಗಿಲಾದ ಮಾನವೀಯ ವ್ಯಕ್ತಿಗೆ ಭಾವಪೂರ್ಣ ವಿದಾಯ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!