AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಧನರಾಗುವುದಕ್ಕೂ ಎರಡು ದಿನ ಮೊದಲು ಮನದ ನೋವು ಹಂಚಿಕೊಂಡಿದ್ದ ಸಂಚಾರಿ ವಿಜಯ್​

ಸಂಚಾರಿ ವಿಜಯ್​ ಇತ್ತೀಚೆಗೆ ಕಲರ್ಸ್​ ಕನ್ನಡ ವಾಹಿನಿ ಪೇಜ್​ನಲ್ಲಿ ಲೈವ್​ ಬಂದಿದ್ದರು. ಈ ವೇಳೆ ಅವರು ‘ನಾನು ಅವನಲ್ಲ ಅವಳು’ ಸಿನಿಮಾ ಬಗ್ಗೆ ಮಾತನಾಡಿದ್ದರು.

ನಿಧನರಾಗುವುದಕ್ಕೂ ಎರಡು ದಿನ ಮೊದಲು ಮನದ ನೋವು ಹಂಚಿಕೊಂಡಿದ್ದ ಸಂಚಾರಿ ವಿಜಯ್​
ಸಂಚಾರಿ ವಿಜಯ್
ರಾಜೇಶ್ ದುಗ್ಗುಮನೆ
|

Updated on: Jun 14, 2021 | 9:15 PM

Share

ನಟ ಸಂಚಾರಿ ವಿಜಯ್​ ಮೃತಪಟ್ಟಿದ್ದಾರೆ. ಸಣ್ಣ ವಯಸ್ಸಿಗೆ ಅವರು ಅಸುನೀಗಿರುವ ವಿಚಾರ ಸ್ಯಾಂಡಲ್​ವುಡ್​ ಮಂದಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ನೋವುಂಟು ಮಾಡಿದೆ. ಸಂಚಾರಿ ವಿಜಯ್​ ಇತ್ತೀಚೆಗೆ ಲೈವ್​ ಬಂದು ತಮ್ಮ ಮನದಾಳದ ನೋವನ್ನು ಹಂಚಿಕೊಂಡಿದ್ದರು. ಈಗ ಅವರು ನಮ್ಮನ್ನು ಬಿಟ್ಟು ಹೋಗಿದ್ದಾರೆ ಎಂಬುದು ನಿಜಕ್ಕೂ ಬೇಸರದ ಸಂಗತಿ.

ಸಂಚಾರಿ ವಿಜಯ್​ ಇತ್ತೀಚೆಗೆ ವಾಹಿನಿ ಒಂದರ  ಪೇಜ್​ನಲ್ಲಿ ಲೈವ್​ ಬಂದಿದ್ದರು. ಈ ವೇಳೆ ಅವರು ‘ನಾನು ಅವನಲ್ಲ ಅವಳು’ ಸಿನಿಮಾ ಬಗ್ಗೆ ಮಾತನಾಡಿದ್ದರು. ಈ ಚಿತ್ರದ ಬಗ್ಗೆ ಅವರಿಗೆ ನೋವೊಂದು ಹಾಗೆಯೇ ಉಳಿದುಕೊಂಡಿದೆಯಂತೆ. ಇದನ್ನು ಅವರು ಮನಬಿಚ್ಚಿ ಹೇಳಿಕೊಂಡಿದ್ದರು.

‘ನಾನು ಅವನಲ್ಲ ಅವಳು’ ಸಿನಿಮಾದಲ್ಲಿ ಸಂಚಾರಿ ವಿಜಯ್​ ಅದ್ಭುತವಾಗಿ ನಟಿಸಿದ್ದರು. ಆದರೆ, ಈ ಸಿನಿಮಾ ಹೆಚ್ಚು ಜನರಿಗೆ ತಲುಪಿಲ್ಲ ಎನ್ನುವ ಕೊರಗು ಅವರಲ್ಲಿದೆಯಂತೆ. ಫೇಸ್​ಬುಕ್ ​ಲೈವ್​ನಲ್ಲಿ ಅಭಿಮಾನಿಯೋರ್ವ ಆ ಸಿನಿಮಾ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದರು. ಈ ವೇಳೆ ಸಂಚಾರಿ ವಿಜಯ್​, ‘ಈ ಸಿನಿಮಾ ಬಗ್ಗೆ ಅನೇಕರು ಮಾತನಾಡಿದ್ದಾರೆ. ಆ ಬಗ್ಗೆ ನಿಜ್ಜಕ್ಕೂ ಖುಷಿ ಇದೆ. ಆದರೆ, ಈ ಸಿನಿಮಾ ಹೆಚ್ಚು ಜನರಿಗೆ ರೀಚ್​​ ಆಗಿಲ್ಲ ಎನ್ನುವ ಬೇಸರ ಇದೆ. ಮುಂದಿನ ದಿನಗಳಲ್ಲಿ ಈ ಸಿನಿಮಾ ಹೆಚ್ಚು ಜನರಿಗೆ ರೀಚ್​ ಆಗೋಕೆ ಏನು ಮಾಡಬೇಕು ಎನ್ನುವ ಬಗ್ಗೆ ನಾವು ಯೋಚಿಸುತ್ತಿದ್ದೆವೆ ’ ಎಂದು  ಹೇಳಿದ್ದರು.

2015ರಲ್ಲಿ ತೆರೆಗೆ ಬಂದ ‘ನಾನು ಅವನಲ್ಲ ಅವಳು’ ಸಿನಿಮಾ ಸಂಚಾರಿ ವಿಜಯ್​ ಅವರ ವೃತ್ತಿ ಜೀವನವನ್ನೇ ಬದಲಾಯಿಸಿತು. ಈ ಚಿತ್ರದಲ್ಲಿ ಅವರ ಅದ್ಭುತ ನಟನೆಗೆ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿಗಳು ಸಿಕ್ಕವು. ಈ ಚಿತ್ರ ತೆರೆಕಂಡ ನಂತರ ಅವರಿಗೆ ಅವಕಾಶಗಳು ತೀವ್ರವಾಗಿ ಹೆಚ್ಚಿದವು. 2017 ಮತ್ತು 2018ರಲ್ಲಿ ಅವರ ನಟನೆಯ 8-9 ಚಿತ್ರಗಳು ತೆರೆಗೆ ಬಂದವು. ‘ಆ್ಯಕ್ಟ್​ 1978’ ಅವರ ಕೊನೆಯ ಚಿತ್ರ.

 ಇದನ್ನೂ ಓದಿ:

Sanchari Vijay: ಸಂಚಾರಿ ವಿಜಯ್​ ಎಂಬ ಪ್ರತಿಭಾವಂತ ಕಲಾವಿದನಿಗೆ, ಅದಕ್ಕೂ ಮಿಗಿಲಾದ ಮಾನವೀಯ ವ್ಯಕ್ತಿಗೆ ಭಾವಪೂರ್ಣ ವಿದಾಯ

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ