Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ವಿಜಯ್​ಗೆ ಮತ್ತೊಂದು ಮುಖ ಇತ್ತು, ಅದನ್ನು ನಾನು ಕಂಡಿದ್ದೇನೆ; ನೀನಾಸಂ ಸತೀಶ್​

ಜೂನ್​ 20 ಸತೀಶ್​ ಜನ್ಮದಿನ. ಪ್ರತಿ ವರ್ಷ ಅವರು ಅಭಿಮಾನಿಗಳ ಜತೆ ಸೇರಿ ಕೇಕ್​ ಕತ್ತರಿಸುತ್ತಿದ್ದರು. ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದರು. ಆದರೆ, ಸಂಚಾರಿ ವಿಜಯ್​ ಮೃತಪಟ್ಟ ನೋವನ್ನು ಸತೀಶ್​ಗೆ ಮರೆಯೋಕೆ ಸಾಧ್ಯವಾಗುತ್ತಿಲ್ಲ.

ಸಂಚಾರಿ ವಿಜಯ್​ಗೆ ಮತ್ತೊಂದು ಮುಖ ಇತ್ತು, ಅದನ್ನು ನಾನು ಕಂಡಿದ್ದೇನೆ; ನೀನಾಸಂ ಸತೀಶ್​
ಸತೀಶ್​
Follow us
ರಾಜೇಶ್ ದುಗ್ಗುಮನೆ
|

Updated on: Jun 20, 2021 | 6:51 PM

ಇಂದು ನೀನಾಸಂ ಸತೀಶ್​ ಜನ್ಮದಿನ. ಆದರೆ, ಈ ವಿಶೇಷ ದಿನವನ್ನು ಅವರು ಆಚರಿಸಿಕೊಂಡಿಲ್ಲ. ಸತೀಶ್​ ಗೆಳೆಯ ಸಂಚಾರಿ ವಿಜಯ್​ ನಿಧನ ಹಿನ್ನೆಲೆಯಲ್ಲಿ ಅವರು ಬರ್ತ್​ಡೇ ಆಚರಣೆ ಮಾಡಿಕೊಂಡಿಲ್ಲ. ಈಗ ಅವರು ವಿಜಯ್​ ಜತೆಗಿನ ಒಡನಾಟದ ಬಗ್ಗೆ ಹೇಳಿಕೊಂಡಿದ್ದಾರೆ.

‘ಆರಂಭದಲ್ಲಿ ನನ್ನ ಮತ್ತು ವಿಜಿ ನಡುವೆ ಅಷ್ಟು ಆತ್ಮೀಯತೆ ಇರಲಿಲ್ಲ. ನಾವು ಅನೇಕ ಸಂದರ್ಭದಲ್ಲಿ ಒಟ್ಟಿಗೆ ಇದ್ದೆವು. ಅವರ ನಟನೆಯ ನಾತಿಚರಾಮಿ ತುಂಬಾ ಇಷ್ಟ ಆಗಿತ್ತು. ಅವನಿಗೂ ನನಗೂ ಲೈಫ್ ಇನ್ಸಿಡೆಂಟ್​ಗೂ ಸಾಮ್ಯತೆ ಇತ್ತು. ವಿಜಿ ತುಂಬಾ ನೋವು, ಸೋಲುಗಳನ್ನು ಅನುಭವಿಸಿದ್ದ. ನನಗೆ ಸೋಲುಗಳನ್ನು ಅನುಭವಿಸಿದ ಕಥೆ ಹೇಳಿದ್ದ. ಇತ್ತೀಚೆಗೆ ಎಲ್ಲವೂ ಸರಿ ಹೋಗಿ ಜೀವನದಲ್ಲಿ ಗೆಲುವಿನ ದಿನಗಳನ್ನ ಕಂಡಿದ್ದ. ಈಗ ಸರಿ ಹೋಗ್ತಿದ್ದ ಕಾಲದಲ್ಲಿ ಅವನೇ ಇಲ್ಲವಾದ’ ಎಂದು ಸತೀಶ್ ಬೇಸರ ಹೊರ ಹಾಕಿದ್ದಾರೆ.

‘ವಿಜಿ ಜೊತೆಗಿನ ಒಡನಾಟ ಒಂದು ಕಮರ್ಷಿಯಲ್ ಸಿನಿಮಾ ರೀತಿ ಆಗೋಯ್ತು. ಆಸ್ಪತ್ರೆಯಲ್ಲಿ ವಿಜಿ ಮಲಗಿದ್ದಾನೆ. ಇಲ್ಲಿ ಮನೆಯಲ್ಲಿ ಆರ್ಡರ್ ಮಾಡಿರೋ ಹೊಸ ಬೆಡ್ ಬಂದಿತ್ತು. ನಮ್ ಆಫೀಸಲ್ಲಿರೋ ರೂಂಗೆ ಬಂದ್ರೆ ಮೂರು ದಿನ ಉಳಿಯುತ್ತಿದ್ದ. ವಿಜಯ್​ಗೆ ಮತ್ತೊಂದು ಮುಖ ಇದೆ. ಅವನು ತುಂಬಾನೇ ನೋವು ಪಟ್ಟಿದ್ದಾನೆ. ಅದನ್ನು ನಾನು ನೋಡಿದ್ದೇನೆ’ ಎಂದು ಸತೀಶ್​ ವಿವರಿಸಿದ್ದಾರೆ.

ಜೂನ್​ 20 ಸತೀಶ್​ ಜನ್ಮದಿನ. ಪ್ರತಿ ವರ್ಷ ಅವರು ಅಭಿಮಾನಿಗಳ ಜತೆ ಸೇರಿ ಕೇಕ್​ ಕತ್ತರಿಸುತ್ತಿದ್ದರು. ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದರು. ಆದರೆ, ಸಂಚಾರಿ ವಿಜಯ್​ ಮೃತಪಟ್ಟ ನೋವನ್ನು ಸತೀಶ್​ಗೆ ಮರೆಯೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು.

ಇತ್ತೀಚೆಗೆ ಸಂಚಾರಿ ವಿಜಯ್​ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವೈದ್ಯರ ಸತತ ಪ್ರಯತ್ನಗಳ ನಡುವೆಯೂ ವಿಧಿಯಾಟವೇ ಮೇಲುಗೈ ಸಾಧಿಸಿತು. ಸಂಚಾರಿ ವಿಜಯ್​ ಮೃತಪಟ್ಟ ಬಗ್ಗೆ ಜೂನ್​ 15ರಂದು ವೈದ್ಯರು ಘೋಷಣೆ ಮಾಡಿದರು. ನಂತರ ಅವರ ಕಳೇಬರವನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಗೆ ಕೊಂಡೊಯ್ಯಲಾಯಿತು. ಮೂರು ಸುತ್ತು ಗುಂಡು ಹಾರಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ವಿಧಿವಿಧಾನಗಳೊಂದಿಗೆ ಗೆಳೆಯನ ತೋಟದಲ್ಲಿ ವಿಜಯ್​ ಅಂತ್ಯಸಂಸ್ಕಾರ ನೆರವೇರಿತು.

ಇದನ್ನೂ ಓದಿ: ಗೆಳೆಯ ಸಂಚಾರಿ ವಿಜಯ್​ ಅಗಲಿಕೆ ನೋವಲ್ಲೇ ಮಹತ್ವದ ನಿರ್ಧಾರ ತೆಗೆದುಕೊಂಡ ನೀನಾಸಂ ಸತೀಶ್​

ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ