AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanchari Vijay: ಸಂಚಾರಿ ವಿಜಯ್ ಅಪಘಾತದ ಸುದ್ದಿ ತಿಳಿದ ತಕ್ಷಣ ಸಹಾಯ ಮಾಡಿದ ಸುದೀಪ್; ಕೂಡಲೇ ನಡೆಯಿತು ಸರ್ಜರಿ

Kichcha Sudeep | Sanchari Vijay Health Update: ಸಂಚಾರಿ ವಿಜಯ್​ ಅವರು ಬೇಗ ಗುಣಮುಖರಾಗಿ ಬರಲಿ ಎಂದು ಅಭಿಮಾನಿಗಳು, ಸ್ನೇಹಿತರು ಮತ್ತು ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ವಿಜಯ್​ ಚಿಕಿತ್ಸೆಗೆ ಸುದೀಪ್​ ನೆರವಾಗಿದ್ದಾರೆ.

Sanchari Vijay: ಸಂಚಾರಿ ವಿಜಯ್ ಅಪಘಾತದ ಸುದ್ದಿ ತಿಳಿದ ತಕ್ಷಣ ಸಹಾಯ ಮಾಡಿದ ಸುದೀಪ್; ಕೂಡಲೇ ನಡೆಯಿತು ಸರ್ಜರಿ
ಸುದೀಪ್​- ಸಂಚಾರಿ ವಿಜಯ್​
ಮದನ್​ ಕುಮಾರ್​
| Edited By: |

Updated on:Jun 14, 2021 | 9:46 AM

Share

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕಲಾವಿದ ಸಂಚಾರಿ ವಿಜಯ್​ ಅವರು ರಸ್ತೆ ಅಪಘಾತಕ್ಕೆ ಒಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ (ಜೂ.12) ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ಅವರಿಗೆ ಆಕ್ಸಿಡೆಂಟ್​ ಆಯಿತು. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವಿಷಯ ತಿಳಿಯುತ್ತಿದ್ದಂತೆಯೇ ಕಿಚ್ಚ ಸುದೀಪ್​ ಅವರು ಸಹಾಯಹಸ್ತ ಚಾಚಿದ್ದಾರೆ. ಅವರಿಂದಾಗಿ ವಿಜಯ್​ಗೆ ರಾತ್ರೋರಾತ್ರಿ ಶಸ್ತ್ರ ಚಿಕಿತ್ಸೆ ನಡೆಸಲು ಸಾಧ್ಯವಾಯಿತು ಎಂಬ ಮಾಹಿತಿ ಸಿಕ್ಕಿದೆ.

ಸಂಚಾರಿ ವಿಜಯ್​ ಅವರನ್ನು ಜೂ.12ರ ರಾತ್ರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪರಿಸ್ಥಿತಿ ತುಂಬ ಗಂಭೀರವಾಗಿತ್ತು. ಸುದೀಪ್​ ಅವರು ಕೂಡಲೇ ಅಪೋಲೋ ಆಸ್ಪತ್ರೆಯ ವೈದ್ಯರಿಗೆ ಕರೆಮಾಡಿ ಶಸ್ತ್ರ ಚಿಕಿತ್ಸೆ ಮಾಡುವಂತೆ ಮನವಿ ಮಾಡಿಕೊಂಡರು. ಆ ಕಾರಣ ತ್ವರಿತಗತಿಯಲ್ಲಿ ಚಿಕಿತ್ಸೆ ಸಿಗಲು ಸಾಧ್ಯವಾಯ್ತು ಎಂದು ಮೂಲಗಳಿಂದ ತಿಳಿದುಬಂದಿದೆ. ವಿಜಯ್​ ಅವರು ಬೇಗ ಗುಣಮುಖರಾಗಿ ಬರಲಿ ಎಂದು ಅಭಿಮಾನಿಗಳು, ಸ್ನೇಹಿತರು ಮತ್ತು ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಭಾನುವಾರ (ಜೂ.13) ರಾತ್ರಿ ವಿಜಯ್​ ಆರೋಗ್ಯದ ಬಗ್ಗೆ ಅಪೊಲೋ ಆಸ್ಪತ್ರೆಯಿಂದ ಅಧಿಕೃತವಾಗಿ ಹೆಲ್ತ್​ ಬುಲೆಟಿನ್​ ಬಿಡುಗಡೆ ಮಾಡಲಾಗಿದೆ. ಅವರ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ ಎಂಬುದು ಗೊತ್ತಾಗಿದೆ. ‘ಆಸ್ಪತ್ರೆಗೆ ಕರೆತಂದಾಗ ಮೆದುಳಿನ ಭಾಗದಲ್ಲಿ ಉಂಟಾದ ರಕ್ತಸ್ರಾವದಿಂದ ವಿಜಯ್​ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಕೂಡಲೇ ಶಸ್ತ್ರಚಿಕಿತ್ಸೆ ಮಾಡಿ ಮೆದುಳಿನಲ್ಲಿನ ರಕ್ತಸ್ರಾವ ತೆಗೆಯಲಾಗಿದೆ. ಅವರು​ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಎಲ್ಲಾ ಜೀವ ರಕ್ಷಕ ವಿಧಾನದ ಮೂಲಕ, ನ್ಯೂರೋ ಐಸಿಯುನಲ್ಲಿ ಇದ್ದಾರೆ. ನಾವು ಅತ್ಯುತ್ತಮ ಚಿಕಿತ್ಸೆ ನೀಡುತ್ತಿದ್ದೇವೆ’ ಎಂದು ಹೆಲ್ತ್​ ಬುಲೆಟಿನ್​ನಲ್ಲಿ ತಿಳಿಸಲಾಗಿದೆ.

ರಂಗಭೂಮಿ ಹಿನ್ನೆಲೆಯಿಂದ ಬಂದ ಸಂಚಾರಿ ವಿಜಯ್​ ಓರ್ವ ಪ್ರತಿಭಾನ್ವಿತ ನಟ. 2014ರಲ್ಲಿ ಅವರ ನಟಿಸಿದ ಹರಿವು ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ‘ನಾನು ಅವನಲ್ಲ.. ಅವಳು’ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದ ಬಳಿಕ ಅವರಿಗೆ ಸ್ಯಾಂಡಲ್​ವುಡ್​ನಲ್ಲಿ ಅವಕಾಶಗಳು ಹೆಚ್ಚಾಗಿದ್ದವು. ಲಾಕ್​ಡೌನ್​ ಸಂದರ್ಭದಲ್ಲಿ ಅವರು ಅನೇಕರಿಗೆ ಸಹಾಯ ಮಾಡುತ್ತಿದ್ದರು. ಅಷ್ಟರಲ್ಲೇ ಈ ಅಪಘಾತ ಸಂಭವಿಸಿರುವುದು ನೋವಿನ ಸಂಗತಿ.

ಇದನ್ನೂ ಓದಿ:

ಸಂಚಾರಿ ವಿಜಯ್​ ಕೋಮಾದಲ್ಲೇ ಇದ್ದಾರೆ, ಆರೋಗ್ಯ ಸ್ಥಿತಿ ಗಂಭೀರವಾಗಿದೆ: ವೈದ್ಯರ ಮಾಹಿತಿ

ಕೊರೊನಾ ವೈರಸ್​ನಿಂದಾಗಿ ಮೂವರು ಆತ್ಮೀಯರನ್ನು ಕಳೆದುಕೊಂಡ ನಟ ಸಂಚಾರಿ ವಿಜಯ್

Published On - 9:19 am, Mon, 14 June 21

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ