AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanchari Vijay: ಸಂಚಾರಿ ವಿಜಯ್ ಅಪಘಾತದ ಸುದ್ದಿ ತಿಳಿದ ತಕ್ಷಣ ಸಹಾಯ ಮಾಡಿದ ಸುದೀಪ್; ಕೂಡಲೇ ನಡೆಯಿತು ಸರ್ಜರಿ

Kichcha Sudeep | Sanchari Vijay Health Update: ಸಂಚಾರಿ ವಿಜಯ್​ ಅವರು ಬೇಗ ಗುಣಮುಖರಾಗಿ ಬರಲಿ ಎಂದು ಅಭಿಮಾನಿಗಳು, ಸ್ನೇಹಿತರು ಮತ್ತು ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ವಿಜಯ್​ ಚಿಕಿತ್ಸೆಗೆ ಸುದೀಪ್​ ನೆರವಾಗಿದ್ದಾರೆ.

Sanchari Vijay: ಸಂಚಾರಿ ವಿಜಯ್ ಅಪಘಾತದ ಸುದ್ದಿ ತಿಳಿದ ತಕ್ಷಣ ಸಹಾಯ ಮಾಡಿದ ಸುದೀಪ್; ಕೂಡಲೇ ನಡೆಯಿತು ಸರ್ಜರಿ
ಸುದೀಪ್​- ಸಂಚಾರಿ ವಿಜಯ್​
ಮದನ್​ ಕುಮಾರ್​
| Edited By: |

Updated on:Jun 14, 2021 | 9:46 AM

Share

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕಲಾವಿದ ಸಂಚಾರಿ ವಿಜಯ್​ ಅವರು ರಸ್ತೆ ಅಪಘಾತಕ್ಕೆ ಒಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ (ಜೂ.12) ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ಅವರಿಗೆ ಆಕ್ಸಿಡೆಂಟ್​ ಆಯಿತು. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವಿಷಯ ತಿಳಿಯುತ್ತಿದ್ದಂತೆಯೇ ಕಿಚ್ಚ ಸುದೀಪ್​ ಅವರು ಸಹಾಯಹಸ್ತ ಚಾಚಿದ್ದಾರೆ. ಅವರಿಂದಾಗಿ ವಿಜಯ್​ಗೆ ರಾತ್ರೋರಾತ್ರಿ ಶಸ್ತ್ರ ಚಿಕಿತ್ಸೆ ನಡೆಸಲು ಸಾಧ್ಯವಾಯಿತು ಎಂಬ ಮಾಹಿತಿ ಸಿಕ್ಕಿದೆ.

ಸಂಚಾರಿ ವಿಜಯ್​ ಅವರನ್ನು ಜೂ.12ರ ರಾತ್ರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪರಿಸ್ಥಿತಿ ತುಂಬ ಗಂಭೀರವಾಗಿತ್ತು. ಸುದೀಪ್​ ಅವರು ಕೂಡಲೇ ಅಪೋಲೋ ಆಸ್ಪತ್ರೆಯ ವೈದ್ಯರಿಗೆ ಕರೆಮಾಡಿ ಶಸ್ತ್ರ ಚಿಕಿತ್ಸೆ ಮಾಡುವಂತೆ ಮನವಿ ಮಾಡಿಕೊಂಡರು. ಆ ಕಾರಣ ತ್ವರಿತಗತಿಯಲ್ಲಿ ಚಿಕಿತ್ಸೆ ಸಿಗಲು ಸಾಧ್ಯವಾಯ್ತು ಎಂದು ಮೂಲಗಳಿಂದ ತಿಳಿದುಬಂದಿದೆ. ವಿಜಯ್​ ಅವರು ಬೇಗ ಗುಣಮುಖರಾಗಿ ಬರಲಿ ಎಂದು ಅಭಿಮಾನಿಗಳು, ಸ್ನೇಹಿತರು ಮತ್ತು ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಭಾನುವಾರ (ಜೂ.13) ರಾತ್ರಿ ವಿಜಯ್​ ಆರೋಗ್ಯದ ಬಗ್ಗೆ ಅಪೊಲೋ ಆಸ್ಪತ್ರೆಯಿಂದ ಅಧಿಕೃತವಾಗಿ ಹೆಲ್ತ್​ ಬುಲೆಟಿನ್​ ಬಿಡುಗಡೆ ಮಾಡಲಾಗಿದೆ. ಅವರ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ ಎಂಬುದು ಗೊತ್ತಾಗಿದೆ. ‘ಆಸ್ಪತ್ರೆಗೆ ಕರೆತಂದಾಗ ಮೆದುಳಿನ ಭಾಗದಲ್ಲಿ ಉಂಟಾದ ರಕ್ತಸ್ರಾವದಿಂದ ವಿಜಯ್​ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಕೂಡಲೇ ಶಸ್ತ್ರಚಿಕಿತ್ಸೆ ಮಾಡಿ ಮೆದುಳಿನಲ್ಲಿನ ರಕ್ತಸ್ರಾವ ತೆಗೆಯಲಾಗಿದೆ. ಅವರು​ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಎಲ್ಲಾ ಜೀವ ರಕ್ಷಕ ವಿಧಾನದ ಮೂಲಕ, ನ್ಯೂರೋ ಐಸಿಯುನಲ್ಲಿ ಇದ್ದಾರೆ. ನಾವು ಅತ್ಯುತ್ತಮ ಚಿಕಿತ್ಸೆ ನೀಡುತ್ತಿದ್ದೇವೆ’ ಎಂದು ಹೆಲ್ತ್​ ಬುಲೆಟಿನ್​ನಲ್ಲಿ ತಿಳಿಸಲಾಗಿದೆ.

ರಂಗಭೂಮಿ ಹಿನ್ನೆಲೆಯಿಂದ ಬಂದ ಸಂಚಾರಿ ವಿಜಯ್​ ಓರ್ವ ಪ್ರತಿಭಾನ್ವಿತ ನಟ. 2014ರಲ್ಲಿ ಅವರ ನಟಿಸಿದ ಹರಿವು ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ‘ನಾನು ಅವನಲ್ಲ.. ಅವಳು’ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದ ಬಳಿಕ ಅವರಿಗೆ ಸ್ಯಾಂಡಲ್​ವುಡ್​ನಲ್ಲಿ ಅವಕಾಶಗಳು ಹೆಚ್ಚಾಗಿದ್ದವು. ಲಾಕ್​ಡೌನ್​ ಸಂದರ್ಭದಲ್ಲಿ ಅವರು ಅನೇಕರಿಗೆ ಸಹಾಯ ಮಾಡುತ್ತಿದ್ದರು. ಅಷ್ಟರಲ್ಲೇ ಈ ಅಪಘಾತ ಸಂಭವಿಸಿರುವುದು ನೋವಿನ ಸಂಗತಿ.

ಇದನ್ನೂ ಓದಿ:

ಸಂಚಾರಿ ವಿಜಯ್​ ಕೋಮಾದಲ್ಲೇ ಇದ್ದಾರೆ, ಆರೋಗ್ಯ ಸ್ಥಿತಿ ಗಂಭೀರವಾಗಿದೆ: ವೈದ್ಯರ ಮಾಹಿತಿ

ಕೊರೊನಾ ವೈರಸ್​ನಿಂದಾಗಿ ಮೂವರು ಆತ್ಮೀಯರನ್ನು ಕಳೆದುಕೊಂಡ ನಟ ಸಂಚಾರಿ ವಿಜಯ್

Published On - 9:19 am, Mon, 14 June 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ