AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಸ್ತ್ರಚಿಕಿತ್ಸೆ ನಡೆಸಿ 10 ಗಂಟೆ ಕಳೆದರೂ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಸಂಚಾರಿ ವಿಜಯ್; ಪರಿಸ್ಥಿತಿ ಮತ್ತಷ್ಟು ಗಂಭೀರ

Sanchari Vijay Accident: ಈ ವಿಚಾರ ಕೇಳಿದ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಇನ್ನು,ಅಪೋಲೊ ಆಸ್ಪತ್ರೆಗೆ ನಟ ನೀನಾಸಂ ಸತೀಶ್ ಭೇಟಿ  ನೀಡಿ ವೈದ್ಯರ ಜತೆ ಮಾತುಕತೆ ನಡೆಸಿದ್ದಾರೆ.

ಶಸ್ತ್ರಚಿಕಿತ್ಸೆ ನಡೆಸಿ 10 ಗಂಟೆ ಕಳೆದರೂ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಸಂಚಾರಿ ವಿಜಯ್; ಪರಿಸ್ಥಿತಿ ಮತ್ತಷ್ಟು ಗಂಭೀರ
ನಟ ಸಂಚಾರಿ ವಿಜಯ್
ರಾಜೇಶ್ ದುಗ್ಗುಮನೆ
| Edited By: |

Updated on:Jun 13, 2021 | 5:25 PM

Share

ನಟ ಸಂಚಾರಿ ವಿಜಯ್​ ಅಪಘಾತಕ್ಕೆ ಒಳಗಾಗಿದ್ದಾರೆ ಎನ್ನುವ ವಿಚಾರ ಕೇಳಿ ಅಭಿಮಾನಿಗಳು ಶಾಕ್​ಗೆ ಒಳಗಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಬಗ್ಗೆ ಆತಂಕ ಮೂಡಿದ್ದು, ಬೇಗ ಗುಣಮುಖರಾಗುವಂತೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.

ಶನಿವಾರ (ಜೂನ್​ 12) ರಾತ್ರಿ ಸಂಚಾರಿ ವಿಜಯ್​ ಗೆಳೆಯನ ಜತೆ ಬೈಕ್​ನಲ್ಲಿ ಹೋಗುವಾಗ ಅಪಘಾತ ಸಂಭವಿಸಿದೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಮೆದುಳಿನ ಬಲ ಭಾಗದಲ್ಲಿ ರಕ್ತಸ್ರಾವ ಉಂಟಾಗಿದ್ದು, ತೊಡೆಯಲ್ಲಿ ಗಾಯಗಳಾಗಿವೆ. ನಿನ್ನೆ ರಾತ್ರಿಯೇ ಅವರಿಗೆ ವೈದ್ಯರು ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಿದ್ದು, ಸದ್ಯ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.

‘ನಟ ಸಂಚಾರಿ ವಿಜಯ್​ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ಮಾಹಿತಿ ನೀಡಿದ್ದಾರೆ. ವಿಜಯ್​ಗೆ ತುಂಬಾನೆ ಹಾನಿಯಾಗಿದೆ’ ಎಂದು ನಟ ಸಂಚಾರಿ ವಿಜಯ್​ ಆಪ್ತರಾದ ನಿರ್ದೇಶಕ ಲಿಂಗದೇವರು ಮಾಹಿತಿ ನೀಡಿದ್ದಾರೆ. ಈ ವಿಚಾರ ಕೇಳಿದ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಇನ್ನು,ಅಪೋಲೊ ಆಸ್ಪತ್ರೆಗೆ ನಟ ನೀನಾಸಂ ಸತೀಶ್ ಭೇಟಿ  ನೀಡಿ ವೈದ್ಯರ ಜತೆ ಮಾತುಕತೆ ನಡೆಸಿದ್ದಾರೆ.

‘ಸಂಚಾರಿ ವಿಜಯ್ ಅವರಿಗೆ ಅಪಘಾತವಾಗಿರುವ ಸುದ್ದಿ ಕೇಳಿ ತುಂಬಾನೇ ಬೇಸರವಾಯಿತು. ಅವರು ಚೇತರಿಸಿಕೊಳ್ಳಲೆಂದು ನನ್ನ ಪ್ರಾರ್ಥನೆ’ ಎಂದು ಅನೇಕರು ಬರೆದುಕೊಂಡಿದ್ದಾರೆ. ಕಿಚ್ಚ ಸುದೀಪ್​ ಅಭಿಮಾನಿಗಳು ಸೇರಿ ಸಾಕಷ್ಟು ಫ್ಯಾನ್ಸ್​ ಗ್ರೂಪ್​​ಗಳು ಸಂಚಾರಿ ವಿಜಯ್​ ಬೇಗ ಚೇತರಿಸಿಕೊಳ್ಳಲಿ ಎಂದು ಕೋರುತ್ತಿದ್ದಾರೆ.

ರಂಗಭೂಮಿ ಹಿನ್ನೆಲೆಯಿಂದ ಬಂದ ಸಂಚಾರಿ ವಿಜಯ್​ ಓರ್ವ ಪ್ರತಿಭಾನ್ವಿತ ನಟ. 2014ರಲ್ಲಿ ಅವರ ನಟಿಸಿದ ಹರಿವು ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ‘ನಾನು ಅವನಲ್ಲ.. ಅವಳು’ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದ ಬಳಿಕ ಅವರಿಗೆ ಸ್ಯಾಂಡಲ್​ವುಡ್​ನಲ್ಲಿ ಅವಕಾಶಗಳು ಹೆಚ್ಚಾಗಿದ್ದವು. ಲಾಕ್​ಡೌನ್​ ಸಂದರ್ಭದಲ್ಲಿ ಅವರು ಅನೇಕರಿಗೆ ಸಹಾಯ ಮಾಡುತ್ತಿದ್ದರು. ಅಷ್ಟರಲ್ಲೇ ಈ ಅಪಘಾತ ಸಂಭವಿಸಿರುವುದು ನೋವಿನ ಸಂಗತಿ.

ಇದನ್ನೂ ಓದಿ:

Sanchari Vijay: ನಟ ಸಂಚಾರಿ ವಿಜಯ್​​ಗೆ ಬೈಕ್ ಅಪಘಾತ; ಪ್ರಜ್ಞಾಹೀನ ಸ್ಥಿತಿಯಲ್ಲಿ ಸ್ಯಾಂಡಲ್​ವುಡ್​ ಹೀರೋ 

Published On - 5:25 pm, Sun, 13 June 21

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ