AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanchari Vijay: ಸಂಚಾರಿ ವಿಜಯ್ ಮೆದುಳಿನ ಕೆಲಸಗಳು ನಿಂತಿದೆ; ಅಪೋಲೋ ವೈದ್ಯರಿಂದ ಆತಂಕಕಾರಿ ಮಾಹಿತಿ

Sanchari Vijay Health Updates: ಶಸ್ತ್ರ ಚಿಕಿತ್ಸೆ ನಡೆದು ಹಲವು ಗಂಟೆಗಳು ಕಳೆದರೂ ಸಂಚಾರಿ ವಿಜಯ್​ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಹಾಗಾಗಿ ಪರಿಸ್ಥಿತಿ ಚಿಂತಾಜನಕ ಆಗಿದೆ.

Sanchari Vijay: ಸಂಚಾರಿ ವಿಜಯ್ ಮೆದುಳಿನ ಕೆಲಸಗಳು ನಿಂತಿದೆ; ಅಪೋಲೋ ವೈದ್ಯರಿಂದ ಆತಂಕಕಾರಿ ಮಾಹಿತಿ
ಸಂಚಾರಿ ವಿಜಯ್
Follow us
ಮದನ್​ ಕುಮಾರ್​
|

Updated on:Jun 14, 2021 | 11:40 AM

ರಸ್ತೆ ಅಪಘಾತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್​ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ. ಈ ಬಗ್ಗೆ ಅಪೋಲೋ ಆಸ್ಪತ್ರೆಯ ವೈದ್ಯರು ಸುದ್ದಿಗೋಷ್ಠಿ ನಡೆಸಿ ಅಧಿಕೃತ ಮಾಹಿತಿ ನೀಡಿದ್ದಾರೆ. ಅಪಘಾತ ನಡೆದಾಗ ಮೆದುಳಿಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅವರಿಗೆ ತಕ್ಷಣ ಶಸ್ತ್ರ ಚಿಕಿತ್ಸೆ ಮಾಡಿ, ಐಸಿಯುನಲ್ಲಿ ಇರಿಸಲಾಗಿದೆ. ಆದರೆ ಅವರು ಚಿಕಿತ್ಸೆಗೆ ಯಾವುದೇ ರೀತಿಯಲ್ಲೂ ಸ್ಪಂದಿಸುತ್ತಿಲ್ಲ. ಇದು ಎಲ್ಲರ ಆತಂಕ್ಕೆ ಕಾರಣ ಆಗಿದೆ.

‘ಮೆದುಳಿನ ಬಲಭಾಗದಲ್ಲಿ ಹೆಚ್ಚು ಹೊಡೆತ ಬಿದ್ದು ತೀವ್ರ ರಕ್ತಸ್ರಾವ ಆಗಿತ್ತು. ನಿನ್ನೆ ಬೆಳಗ್ಗೆ ನಾಲ್ಕು ಗಂಟೆ ಸುಮಾರಿಗೆ ಸರ್ಜರಿ ಮಾಡಿದೆವು. ಅದಾಗಿ 36 ಗಂಟೆ ಕಳೆದರೂ ಅವರ ಬ್ರೇನ್​ ಕಡೆಯಿಂದ ಪ್ರತಿಕ್ರಿಯೆ ಇಲ್ಲ. ಮೆದುಳಿನ ಕೆಲಸಗಳು ನಿಂತು ಹೋಗಿದೆ. ಇದನ್ನು ಬ್ರೇನ್​ ಫೇಲ್ಯೂರ್​ ಎನ್ನುತ್ತೇವೆ. ಇದು ಮುಂದುವರಿದರೆ ಚೇತರಿಕೆ ಸಾಧ್ಯತೆ ಕಡಿಮೆ ಆಗುತ್ತದೆ. ದೈಹಿಕ ಕೆಲಸಗಳು ಸರಿಯಾಗಿವೆ’ ಎಂದು ಅಪೋಲೋ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಶನಿವಾರ (ಜೂ.12) ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ಅವರಿಗೆ ಆಕ್ಸಿಡೆಂಟ್​ ಆಗಿತ್ತು. ಸ್ನೇಹಿತ ನವೀನ್​ ಅವರ ಬೈಕ್​ನಲ್ಲಿ ಹಿಂಬದಿ ಕುಳಿತು ವಿಜಯ್​ ಪ್ರಯಾಣ ಮಾಡುತ್ತಿದ್ದರು. ಅಪಘಾತದ ತೀವ್ರತೆಗೆ ಅವರು ತಲೆ ಮತ್ತು ತೊಡೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಆದ ಪರಿಣಾಮ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. 36 ಗಂಟೆಗಳು ಕಳೆದರೂ ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ.

Published On - 11:37 am, Mon, 14 June 21

ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು