AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanchari Vijay: ಸಂಚಾರಿ ವಿಜಯ್ ಮೆದುಳಿನ ಕೆಲಸಗಳು ನಿಂತಿದೆ; ಅಪೋಲೋ ವೈದ್ಯರಿಂದ ಆತಂಕಕಾರಿ ಮಾಹಿತಿ

Sanchari Vijay Health Updates: ಶಸ್ತ್ರ ಚಿಕಿತ್ಸೆ ನಡೆದು ಹಲವು ಗಂಟೆಗಳು ಕಳೆದರೂ ಸಂಚಾರಿ ವಿಜಯ್​ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಹಾಗಾಗಿ ಪರಿಸ್ಥಿತಿ ಚಿಂತಾಜನಕ ಆಗಿದೆ.

Sanchari Vijay: ಸಂಚಾರಿ ವಿಜಯ್ ಮೆದುಳಿನ ಕೆಲಸಗಳು ನಿಂತಿದೆ; ಅಪೋಲೋ ವೈದ್ಯರಿಂದ ಆತಂಕಕಾರಿ ಮಾಹಿತಿ
ಸಂಚಾರಿ ವಿಜಯ್
ಮದನ್​ ಕುಮಾರ್​
|

Updated on:Jun 14, 2021 | 11:40 AM

Share

ರಸ್ತೆ ಅಪಘಾತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್​ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ. ಈ ಬಗ್ಗೆ ಅಪೋಲೋ ಆಸ್ಪತ್ರೆಯ ವೈದ್ಯರು ಸುದ್ದಿಗೋಷ್ಠಿ ನಡೆಸಿ ಅಧಿಕೃತ ಮಾಹಿತಿ ನೀಡಿದ್ದಾರೆ. ಅಪಘಾತ ನಡೆದಾಗ ಮೆದುಳಿಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅವರಿಗೆ ತಕ್ಷಣ ಶಸ್ತ್ರ ಚಿಕಿತ್ಸೆ ಮಾಡಿ, ಐಸಿಯುನಲ್ಲಿ ಇರಿಸಲಾಗಿದೆ. ಆದರೆ ಅವರು ಚಿಕಿತ್ಸೆಗೆ ಯಾವುದೇ ರೀತಿಯಲ್ಲೂ ಸ್ಪಂದಿಸುತ್ತಿಲ್ಲ. ಇದು ಎಲ್ಲರ ಆತಂಕ್ಕೆ ಕಾರಣ ಆಗಿದೆ.

‘ಮೆದುಳಿನ ಬಲಭಾಗದಲ್ಲಿ ಹೆಚ್ಚು ಹೊಡೆತ ಬಿದ್ದು ತೀವ್ರ ರಕ್ತಸ್ರಾವ ಆಗಿತ್ತು. ನಿನ್ನೆ ಬೆಳಗ್ಗೆ ನಾಲ್ಕು ಗಂಟೆ ಸುಮಾರಿಗೆ ಸರ್ಜರಿ ಮಾಡಿದೆವು. ಅದಾಗಿ 36 ಗಂಟೆ ಕಳೆದರೂ ಅವರ ಬ್ರೇನ್​ ಕಡೆಯಿಂದ ಪ್ರತಿಕ್ರಿಯೆ ಇಲ್ಲ. ಮೆದುಳಿನ ಕೆಲಸಗಳು ನಿಂತು ಹೋಗಿದೆ. ಇದನ್ನು ಬ್ರೇನ್​ ಫೇಲ್ಯೂರ್​ ಎನ್ನುತ್ತೇವೆ. ಇದು ಮುಂದುವರಿದರೆ ಚೇತರಿಕೆ ಸಾಧ್ಯತೆ ಕಡಿಮೆ ಆಗುತ್ತದೆ. ದೈಹಿಕ ಕೆಲಸಗಳು ಸರಿಯಾಗಿವೆ’ ಎಂದು ಅಪೋಲೋ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಶನಿವಾರ (ಜೂ.12) ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ಅವರಿಗೆ ಆಕ್ಸಿಡೆಂಟ್​ ಆಗಿತ್ತು. ಸ್ನೇಹಿತ ನವೀನ್​ ಅವರ ಬೈಕ್​ನಲ್ಲಿ ಹಿಂಬದಿ ಕುಳಿತು ವಿಜಯ್​ ಪ್ರಯಾಣ ಮಾಡುತ್ತಿದ್ದರು. ಅಪಘಾತದ ತೀವ್ರತೆಗೆ ಅವರು ತಲೆ ಮತ್ತು ತೊಡೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಆದ ಪರಿಣಾಮ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. 36 ಗಂಟೆಗಳು ಕಳೆದರೂ ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ.

Published On - 11:37 am, Mon, 14 June 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್