AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವರ್ಗದಲ್ಲಿ ಮೇರು ನಟರ ಜತೆ ಸಂಚಾರಿ ವಿಜಯ್​ ಮಾತು; ಸಿನಿಮಾ ಪ್ರಚಾರಕ್ಕೆ ಹೀಗೊಂದು ಮಾರ್ಗ

ಸಂಚಾರಿ ವಿಜಯ್​ ‘ಪುಕ್ಸಟ್ಟೆ ಲೈಫು​’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಬಗ್ಗೆ ವಿಜಯ್​ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ಸಿನಿಮಾ ತೆರೆಗೆ ಬರುವುದಕ್ಕೂ ಮೊದಲೇ ಅವರು ಕಣ್ಣು ಮುಚ್ಚಿದರು.

ಸ್ವರ್ಗದಲ್ಲಿ ಮೇರು ನಟರ ಜತೆ ಸಂಚಾರಿ ವಿಜಯ್​ ಮಾತು; ಸಿನಿಮಾ ಪ್ರಚಾರಕ್ಕೆ ಹೀಗೊಂದು ಮಾರ್ಗ
ಯಮ ಲೋಕದಲ್ಲಿ ಮೇರು ನಟರ ಜತೆ ಸಂಚಾರಿ ವಿಜಯ್​ ಮಾತು; ಸಿನಿಮಾ ಪ್ರಚಾರಕ್ಕೆ ಹೀಗೊಂದು ಮಾರ್ಗ
TV9 Web
| Edited By: |

Updated on:Sep 20, 2021 | 1:52 PM

Share

ನಟ ಸಂಚಾರಿ ವಿಜಯ್​ ಮೃತಪಟ್ಟು ಮೂರು ತಿಂಗಳ ಮೇಲಾಗಿದೆ. ಆದಾಗ್ಯೂ ಅಭಿಮಾನಿಗಳಿಗೆ ಅವರು ಮೃತಪಟ್ಟಿದ್ದಾರೆ ಎನ್ನುವ ನೋವಿನಿಂದ ಹೊರ ಬರೋಕೆ ಸಾಧ್ಯವಾಗುತ್ತಿಲ್ಲ. ಈ ನಟನನ್ನು ನಾನಾ ರೀತಿಯಲ್ಲಿ ಅಭಿಮಾನಿಗಳು ನೆನಪಿಸಿಕೊಳ್ಳುತ್ತಿದ್ದಾರೆ. ಈಗ ಹೊಸ ಎನಿಮೇಟೆಡ್​ ವಿಡಿಯೋ ಒಂದನ್ನು ಹರಿಬಿಡಲಾಗಿದೆ. ಈ ವಿಡಿಯೋದಲ್ಲಿ ಸಂಚಾರಿ ವಿಜಯ್​ ಅವರು ಸ್ವರ್ಗದಲ್ಲಿಸ್ಯಾಂಡಲ್​ವುಡ್​ ಹಿರಿಯ ನಟರ ಜತೆ ಮಾತನಾಡಿದ್ದಾರೆ.

ಸಂಚಾರಿ ವಿಜಯ್​ ‘ಪುಕ್ಸಟ್ಟೆ ಲೈಫು​’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಬಗ್ಗೆ ವಿಜಯ್​ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ಸಿನಿಮಾ ತೆರೆಗೆ ಬರುವುದಕ್ಕೂ ಮೊದಲೇ ಅವರು ಕಣ್ಣು ಮುಚ್ಚಿದರು. ಈ ಸಿನಿಮಾಗೆ ಅರವಿಂದ್​ ಕುಪ್ಳೀಕರ್​ ನಿರ್ದೇಶನ ಇದ್ದರೆ, ವಸು ದೀಕ್ಷಿತ್​ ಹಾಗೂ ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದಾರೆ. ಈ ಸಿನಿಮಾ ಪ್ರಚಾರಕ್ಕೆ ಚಿತ್ರತಂಡ ಭಿನ್ನ ಪ್ರಯೋಗ ಮಾಡಿದೆ.

ರಾಜ್​ಕುಮಾರ್​, ಅಂಬರೀಷ್​, ವಿಷ್ಣುವರ್ಧನ್​, ಶಂಕರ್​ನಾಗ್​ ಸೇರಿ ಸಾಕಷ್ಟು ಹಿರಿಯ ನಟರು ಮೃತಪಟ್ಟಿದ್ದಾರೆ. ಇವರ ಜತೆ ವಿಜಯ್​ ಸಂಭಾಷಣೆ ನಡೆಸಿದ ರೀತಿಯಲ್ಲಿ ಎನಿಮೇಟೆಡ್​ ವಿಡಿಯೋ ಮಾಡಲಾಗಿದೆ. ಸ್ವರ್ಗದಲ್ಲೇ ಸಂಚಾರಿ ವಿಜಯ್​ ‘ಪುಕ್ಸಟ್ಟೆ ಲೈಫು’ ಬಗ್ಗೆ ಹೇಳಿಕೊಳ್ಳುತ್ತಾರೆ. ಅಂಬರೀಷ್​, ರಾಜ್​ಕುಮಾರ್​ ಮೊದಲಾದವರು ಸಿನಿಮಾ ನೋಡಿ ಎಂದು ಕೋರಿದ್ದಾರೆ. ಇದನ್ನು ನೋಡಿ ಸಾಕಷ್ಟು ಮಂದಿ ಖುಷಿಪಟ್ಟಿದ್ದಾರೆ.

ಇತ್ತೀಚೆಗೆ ಸಂಚಾರಿ ವಿಜಯ್ ಬಣ್ಣ ಹಚ್ಚಿರುವ ‘ಪುಕ್ಸಟ್ಟೆ ಲೈಫು’ ಚಿತ್ರದ ಟ್ರೈಲರ್ ಬಿಡುಗಡೆಯಾಗಿತ್ತು. ಅವರ ಭಿನ್ನವಾದ ಪಾತ್ರ ಗಮನ ಸೆಳೆದಿದೆ. ವೃತ್ತಿ ಜೀವನದಲ್ಲಿ ಪ್ರತಿ ಚಿತ್ರದಲ್ಲೂ ವೈಶಿಷ್ಟ್ಯಪೂರ್ಣ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ವಿಜಯ್, ಈ ಚಿತ್ರದ ಟ್ರೇಲರ್​ನಲ್ಲೂ ಭಿನ್ನ ಪಾತ್ರದ ಮೂಲಕ ನೋಡುಗರ ಮನಗೆದ್ದಿದ್ದಾರೆ. ಈ ಸಿನಿಮಾದಲ್ಲಿ ಬೀಗ ರಿಪೇರಿ ಮಾಡುವ ವ್ಯಕ್ತಿಯೊಬ್ಬನ ಪಾತ್ರವನ್ನು ವಿಜಯ್ ನಿರ್ವಹಿಸಿದ್ದಾರೆ.

ಸದ್ಯ, ಈ ಪ್ರಮೋಷನಲ್​ ವಿಡಿಯೋವನ್ನು ಬಿಗ್​ ಬಾಸ್​ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್​ ಸೇರಿ ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ವಿಜಯ್​ ಅವರನ್ನು ನೆನಪಿಸಿಕೊಂಡಿದ್ದಾರೆ. ಚಕ್ರವರ್ತಿ ಚಂದ್ರಚೂಡ್​ ಅವರು ‘ಗೆಳೆಯ ನೀನಿರಬೇಕಿತ್ತು’ ಎನ್ನುವ ಕ್ಯಾಪ್ಶನ್​ನೊಂದಿಗೆ ಈ ವಿಡಿಯೋ ಹಂಚಿಕೊಂಡಿದ್ದಾರೆ. ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗುತ್ತಿದೆ.

ಇದನ್ನೂ ಓದಿ: ‘ಸಂಚಾರಿ ವಿಜಯ್ ರೀತಿ ನನಗೂ ಅವಮಾನ ಆಗಿದೆ‘; ‘ಜೊತೆ ಜೊತೆಯಲಿ’ ಅನಿರುದ್ಧ ಹೇಳಿದ ಕಹಿ ಸತ್ಯ

ಸಂಚಾರಿ ವಿಜಯ್ ಜನ್ಮದಿನಕ್ಕೂ ಮೊದಲೇ ಅಭಿಮಾನಿಗಳಿಗೆ ಸಿಕ್ತು ವಿಶೇಷ ಗಿಫ್ಟ್​

Published On - 1:52 pm, Mon, 20 September 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ