AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ವಿಜಯ್​ ಮಾಡಿದ ಆ ಒಂದು ತಪ್ಪು ನಿರ್ಧಾರ ಸಾವಿಗೆ ಕಾರಣವಾಯ್ತು

Sanchari Vijay: ಬೈಕ್ ಸ್ಕಿಡ್​ ಆಗಿ ಬಿದ್ದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ನವೀನ್​ ಎಂಬುವವರು ಬೈಕ್​ ಓಡಿಸುತ್ತಿದ್ದರು. ವಿಜಯ್​ ಹಿಂದೆ ಕೂತಿದ್ದರು. ಆಗ ಅಪಘಾತ ಸಂಭವಿಸಿದೆ.

ಸಂಚಾರಿ ವಿಜಯ್​ ಮಾಡಿದ ಆ ಒಂದು ತಪ್ಪು ನಿರ್ಧಾರ ಸಾವಿಗೆ ಕಾರಣವಾಯ್ತು
ಸಂಚಾರಿ ವಿಜಯ್
ರಾಜೇಶ್ ದುಗ್ಗುಮನೆ
| Edited By: |

Updated on:Aug 10, 2021 | 11:20 AM

Share

ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಜನಸಾಮಾನ್ಯರಿಗೆ ಸಹಾಯ ಮಾಡಿದ್ದಾರೆ. ಅದೇ ರೀತಿ ನಟ ಸಂಚಾರಿ ವಿಜಯ್​ ಕೂಡ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದರು. ಅವರು, ಅಪಘಾತಕ್ಕೆ ಒಳಗಾಗುವುದಕ್ಕೂ ಮೊದಲು ಫುಡ್​ ಕಿಟ್​ ನೀಡುವುದಕ್ಕೆ ತೆರಳಿದ್ದರಂತೆ. ಅಲ್ಲಿಂದ ಬರುವಾಗಲೇ ಈ ಅಪಘಾತ ಸಂಭವಿಸಿದೆ ಅನ್ನೋದು ಬೇಸರದ ಸಂಗತಿ.

ಈ ಬಗ್ಗೆ ಮಾತನಾಡಿರುವ ವಿಜಯ್ ಸಹೋದರ ಸಿದ್ಧೇಶ್ ಕುಮಾರ್, ವಿಜಯ್​ ನಮ್ಮ ಕುಟುಂಬದ ಆಧಾರಸ್ತಂಭ. ಆತ ಸುಮ್ಮನೆ ಕೂರುವ ವ್ಯಕ್ತಿ ಅಲ್ಲವೇ ಅಲ್ಲ. ಲಾಕ್ ಡೌನ್ ಸಮಯದಲ್ಲಿ ಸಾಕಷ್ಟು ಸಮಾಜಮುಖಿ ಕೆಲಸ ಮಾಡುತ್ತಿದ್ದ. ಶನಿವಾರವೂ (ಜೂನ್​ 12) ಅಂತಹುದೇ ಕೆಲಸ ಮುಗಿಸಿ ಬರುವಾಗ ಅವಘಡವಾಗಿದೆ. ವೈದ್ಯರು 48 ಗಂಟೆ ಅಬ್ಸರ್ವರ್ವೇಷನ್​​​ಲಿ ಇರಿಸಿದ್ದಾರೆ. ನಾಳೆಗೆ 48 ಗಂಟೆ ಕಂಪ್ಲೀಟ್ ಆಗಲಿದೆ. ದಯವಿಟ್ಟು ನನ್ನ ಸಹೋದರನಿಗಾಗಿ ಪ್ರಾರ್ಥಿಸಿ’ ಎಂದು ಕೋರಿದ್ದಾರೆ.

ಇನ್ನು, ಬೈಕ್ ಸ್ಕಿಡ್​ ಆಗಿ ಬಿದ್ದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ನವೀನ್​ ಎಂಬುವವರು ಬೈಕ್​ ಓಡಿಸುತ್ತಿದ್ದರು. ವಿಜಯ್​ ಹಿಂದೆ ಕೂತಿದ್ದರು. ಇಬ್ಬರೂ ಹೆಲ್ಮೆಟ್ ಧರಿಸಿರಲಿಲ್ಲ. ಸ್ಕಿಡ್ ಆದ ಪರಿಣಾಮ ಬೈಕ್ ರಸ್ತೆಯ ಎಡಬದಿಯಲ್ಲಿದ್ದ ಪೋಲ್​ಗೆ ಡಿಕ್ಕಿಯಾಗಿದೆ. ಈ ವೇಳೆ ವಿಜಯ್ ಬೈಕ್ ನಿಂದ ಹಾರಿ ಬಿದ್ದಿದ್ದಾರೆ. ಸ್ಥಳೀಯರ ಸಹಾಯದಿಂದ ಸಮೀಪದಲ್ಲಿದ್ದ ಅಪಾರ್ಟ್ಮೆಂಟ್​​ನಲ್ಲಿ ಬೈಕ್ ಇರಿಸಿ, ಇಬ್ಬರೂ ಗಾಯಾಳುಗಳನ್ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ​ ಅವರು ಹೆಲ್ಮೆಟ್​ ಧರಿಸಿದ್ದರೆ ಅವರ ತಲೆಗೆ ಇಷ್ಟೊಂದು ಪೆಟ್ಟು ಬೀಳುತ್ತಿರಲಿಲ್ಲ ಎನ್ನುವ ಮಾತು ಕೇಳಿ ಬಂದಿದೆ.

2011ರಲ್ಲಿ ತೆರೆಗೆ ಬಂದ ‘ರಂಗಪ್ಪ ಹೋಗ್ಬಿಟ್ನಾ’ ಸಿನಿಮಾ ಮೂಲಕ ಸಂಚಾರಿ ವಿಜಯ್ ಚಿತ್ರರಂಗಕ್ಕೆ ಕಾಲಿಟ್ಟರು. 2015ರಲ್ಲಿ ತೆರೆಗೆ ಬಂದ ‘ನಾನು ಅವನಲ್ಲ.. ಅವಳು’ ಸಿನಿಮಾ ಅವರ ಖ್ಯಾತಿಯನ್ನು ದುಪ್ಪಟ್ಟು ಮಾಡಿತ್ತು. ಈ ಸಿನಿಮಾದಲ್ಲಿ ಅವರ ನಟನೆಗೆ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿಗಳು ಸಿಕ್ಕಿವೆ. ಇದಾದ ನಂತರದಲ್ಲಿ ಅವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿದರು. ಸದ್ಯ, ಎರಡು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಸಂಚಾರಿ ವಿಜಯ್ ಅಪಘಾತಗೊಂಡಿರುವ ವಿಚಾರ ಕೇಳಿ ಅಭಿಮಾನಿಗಳು ಹಾಗೂ ಸ್ಯಾಂಡಲ್ವುಡ್ ಮಂದಿಯಲ್ಲಿ ಆತಂಕ ಮನೆ ಮಾಡಿದೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: Sanchari Vijay: ನಟ ಸಂಚಾರಿ ವಿಜಯ್​​ಗೆ ಬೈಕ್ ಅಪಘಾತ; ಪ್ರಜ್ಞಾಹೀನ ಸ್ಥಿತಿಯಲ್ಲಿ ಸ್ಯಾಂಡಲ್​ವುಡ್​ ಹೀರೋ

Published On - 6:31 pm, Sun, 13 June 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು