Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanchari Vijay Obituary: ವಿಜಯ್​ ಕುಮಾರ್​ ‘ಸಂಚಾರಿ’ ವಿಜಯ್​ ಆಗಿದ್ದು ಹೇಗೆ? ಇಲ್ಲಿದೆ ಅವರ ಲೈಫ್​ ಜರ್ನಿ

1983ರ ಜುಲೈ 18ರಂದು ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ವಿಜಯ್​ ಜನಿಸಿದರು. ವಿಜಯ್​ ಕುಮಾರ್​ ಬಿ. ಎಂಬುದು ಅವರಿಗೆ ಇಟ್ಟ ಹೆಸರು. ಸಣ್ಣ ವಯಸ್ಸಿನಿಂದಲೇ ನಟನೆ ಬಗ್ಗೆ ಆಸಕ್ತಿ ಹೊಂದಿದ್ದ ಅವರು, ರಂಗಭೂಮಿಯಲ್ಲಿ ಪಳಗಿದರು.

Sanchari Vijay Obituary: ವಿಜಯ್​ ಕುಮಾರ್​ ‘ಸಂಚಾರಿ’ ವಿಜಯ್​ ಆಗಿದ್ದು ಹೇಗೆ? ಇಲ್ಲಿದೆ ಅವರ ಲೈಫ್​ ಜರ್ನಿ
ಸಂಚಾರಿ ವಿಜಯ್
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Jun 14, 2021 | 2:41 PM

ಅದ್ಭುತ ನಟನೆ ಮೂಲಕ ಎಲ್ಲರ ಗಮನ ಸೆಳೆದ ವಿಜಯ್ ಕೇವಲ 37ನೇ ವಯಸ್ಸಿಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಾಕಷ್ಟು ಸಮಾಜಮುಖಿ ಕೆಲಸ ಮಾಡಿದ ಅವರನ್ನು ದೇವರು ಇಷ್ಟು ಬೇಗ ಕರೆಸಿಕೊಳ್ಳುತ್ತಾನೆ ಎಂದು ಯಾರೂ ಕೂಡ ಊಹಿಸಿಕೊಂಡಿರಲಿಲ್ಲ. ‘ನಾನು ಅವನಲ್ಲ.. ಅವಳು’ ಸಿನಿಮಾದಲ್ಲಿನ ಅವರ ನಟನೆಗೆ ಮನ ಸೋಲದವರಿಲ್ಲ. ಪ್ರತಿ ಸಿನಿಮಾದಲ್ಲೂ ಭಿನ್ನ ಪಾತ್ರ ಆಯ್ಕೆ ಮಾಡಿಕೊಳ್ಳುತ್ತಿದ್ದ ವಿಜಯ್​ ಈಗ ನಮ್ಮೊಂದಿಗಿಲ್ಲ ಎಂಬುದನ್ನು ಅಭಿಮಾನಿಗಳಿಗೆ, ಆಪ್ತರಿಗೆ ಮತ್ತು ಕುಟುಂಬದವರಿಗೆ ಅರಗಿಸಿಕೊಳ್ಳೋಕೂ ಸಾಧ್ಯವಾಗುತ್ತಿಲ್ಲ.

ಚಿತ್ರರಂಗದಲ್ಲಿ ಅದೃಷ್ಟಪರೀಕ್ಷೆಗೆ ಸಾಕಷ್ಟು ಜನರು ಮುಂದಾಗುತ್ತಾರೆ. ಆದರೆ, ಎಲ್ಲರಿಗೂ ಯಶಸ್ಸು ಸಿಗೋದಿಲ್ಲ. ಆದರೆ, ಸಂಚಾರಿ ವಿಜಯ್​ಗೆ ನಟನಾ ಕಲೆ ಅದ್ಭುತವಾಗಿ ಒಲಿದಿತ್ತು. ಯಾವುದೇ ಪಾತ್ರ ಕೊಟ್ಟರೂ ಅದನ್ನು ಸುಲಲಿತವಾಗಿ ನಿಭಾಯಿಸುತ್ತಿದ್ದರು. ತಾವು ಸೆಲೆಬ್ರಿಟಿ ಎನ್ನುವ ಅಹಂ ಅವರಲ್ಲಿ ಎಂದಿಗೂ ಇರಲಿಲ್ಲ. ಕೊವಿಡ್​ ಸಂದರ್ಭದಲ್ಲಿಯೂ ಸಂಚಾರಿ ವಿಜಯ್​ ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದರು ಎಂಬುದನ್ನು ಇಲ್ಲಿ ನೆನೆಯಲೇಬೇಕು.

1983ರ ಜುಲೈ 18ರಂದು ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ವಿಜಯ್​ ಜನಿಸಿದರು. ವಿಜಯ್​ ಕುಮಾರ್​ ಬಿ. ಎಂಬುದು ಅವರಿಗೆ ಇಟ್ಟ ಹೆಸರು. ಸಣ್ಣ ವಯಸ್ಸಿನಿಂದಲೇ ನಟನೆ ಬಗ್ಗೆ ಆಸಕ್ತಿ ಹೊಂದಿದ್ದ ಅವರು, ರಂಗಭೂಮಿಯಲ್ಲಿ ಪಳಗಿದವರು. ‘ಸಂಚಾರಿ’ ಥಿಯೇಟರ್​ ಗ್ರೂಪ್​ನಿಂದ ಬಂದ ಕಾರಣ ಸ್ಯಾಂಡಲ್​ವುಡ್​ನಲ್ಲಿ ಸಂಚಾರಿ ವಿಜಯ್​ ಎಂದೇ ಅವರು ಖ್ಯಾತಿ ಪಡೆದುಕೊಂಡರು.

2011ರಲ್ಲಿ ತೆರೆಗೆ ಬಂದ ‘ರಂಗಪ್ಪ ಹೋಗ್ಬಿಟ್ಟಾ’ ಸಂಚಾರಿ ವಿಜಯ್​ ಅವರ ಮೊದಲ ಸಿನಿಮಾ. ರಮೇಶ್​ ಅರವಿಂದ್ ಅಭಿನಯಿಸಿದ ಈ ಚಿತ್ರದಲ್ಲಿ ನೀನಾಸಂ ಸತೀಶ್​, ಮೊದಲಾದವರು ನಟಿಸಿದ್ದರು. ಈ ಚಿತ್ರದಲ್ಲಿ ಸಂಚಾರಿ ವಿಜಯ್​ ಕೂಡ ಕಾಣಿಸಿಕೊಂಡಿದ್ದರು.

ಅದೇ ವರ್ಷ ತೆರೆಗೆ ಬಂದ ‘ರಾಮ ರಾಮ ರಘು ರಾಮ’ ಚಿತ್ರದಲ್ಲಿ ವಿಜಯ್​ ನಟಿಸಿದರು. 2013ರಲ್ಲಿ ಪ್ರೇಮ್​ ನಟನೆಯ ‘ದಾಸ್ವಾಳ’ ಚಿತ್ರದಲ್ಲಿ ಪಾತ್ರ ಒಂದನ್ನು ನಿರ್ವಹಿಸಿದ್ದರು. 2014ರಲ್ಲಿ ಬಂದ ‘ಹರಿವು’ ಚಿತ್ರದಲ್ಲಿ ಸಂಚಾರಿ ಮೊದಲ ಬಾರಿಗೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡರು. ಮಂಸೋರೆ ನಿರ್ದೇಶಿಸಿದ ಆ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು.

2015ರಲ್ಲಿ ತೆರೆಗೆ ಬಂದ ಅವರ ನಟನೆಯ ‘ನಾನು ಅವನಲ್ಲ ಅವಳು’ ಸಿನಿಮಾ ಸಂಚಾರಿ ವಿಜಯ್​ ಅವರ ವೃತ್ತಿ ಜೀವನವನ್ನೇ ಬದಲಾಯಿಸಿತು. ಈ ಚಿತ್ರದಲ್ಲಿ ಅವರ ಅದ್ಭುತ ನಟನೆಗೆ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿಗಳು ಸಿಕ್ಕವು. ಈ ಚಿತ್ರ ತೆರೆಕಂಡ ನಂತರ ಅವರಿಗೆ ಅವಕಾಶಗಳು ತೀವ್ರವಾಗಿ ಹೆಚ್ಚಿದವು. 2017 ಮತ್ತು 2018ರಲ್ಲಿ ಅವರ ನಟನೆಯ 8-9 ಚಿತ್ರಗಳು ತೆರೆಗೆ ಬಂದವು. ‘ಆ್ಯಕ್ಟ್​ 1978’ ಅವರ ಕೊನೆಯ ಚಿತ್ರ. ‘ಮೇಲೊಬ್ಬ ಮಾಯಾವಿ’ ಚಿತ್ರದಲ್ಲಿ ನಟಿಸುತ್ತಿದ್ದರು.

ಇಲ್ಲೊಂದು ವಿಚಿತ್ರ ಇದೆ. ‘ಮೇಲೊಬ್ಬ ಮಾಯಾವಿ’ ಸಿನಿಮಾದ ಹೆಸರಿನಂತೆಯೇ ಸಂಚಾರಿ ವಿಜಯ್​ ಕೂಡ ಮೇಲಿರುವ ಮಾಯಾವಿಯ ಆಟದ ಕೈಗೊಂಬೆಯಾಗಿ ಮೃತಪಟ್ಟಿದ್ದು ನಿಜಕ್ಕೂ ಬೇಸರದ ಸಂಗತಿ.

ಇದನ್ನೂ ಓದಿ:

ಸಂಚಾರಿ ವಿಜಯ್​ ಬದುಕುಳಿಯುವ ಸಾಧ್ಯತೆ ಕಡಿಮೆ, ಆತನ ಅಂಗಾಂಗ ದಾನ ಮಾಡುತ್ತೇವೆ: ಸಹೋದರ ಸಿದ್ದೇಶ್​ ಗದ್ಗದಿತ

Sanchari Vijay: ನಟ ಸಂಚಾರಿ ವಿಜಯ್​ಗೆ ಶ್ರದ್ಧಾಂಜಲಿ ಅರ್ಪಿಸಿದ ಸಿಎಂ ಯಡಿಯೂರಪ್ಪ ಮತ್ತು ಸುದೀಪ್​

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು