AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanchari Vijay: ಬದುಕಿನ ಸಂಚಾರ ಮುಗಿಸಿದ ಸಂಚಾರಿ ವಿಜಯ್​ಗೆ ಇಂದು 39 ನೇ ವರ್ಷದ ಹುಟ್ಟು ಹಬ್ಬ; ಸ್ನೇಹಿತನ ನೆನಪಿಗೆ ಕೆಲ ಕಾರ್ಯಕ್ರಮ

Happy Birthday Sanchari Vijay: ಸಿನಿಮಾ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆಯ ಕನಸು ಕಂಡಿದ್ದ ಸಂಚಾರಿ, ಜೂನ್ 15 ರಂದು ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ವಿಜಯ್ ನೆನಪಿಗಾಗಿ ಅವರ ಸ್ನೇಹಿತರು ಇಂದು ಕೆಲವು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

Sanchari Vijay: ಬದುಕಿನ ಸಂಚಾರ ಮುಗಿಸಿದ ಸಂಚಾರಿ ವಿಜಯ್​ಗೆ ಇಂದು 39 ನೇ ವರ್ಷದ ಹುಟ್ಟು ಹಬ್ಬ; ಸ್ನೇಹಿತನ ನೆನಪಿಗೆ ಕೆಲ ಕಾರ್ಯಕ್ರಮ
ಸಂಚಾರಿ ವಿಜಯ್​
Follow us
TV9 Web
| Updated By: sandhya thejappa

Updated on:Jul 17, 2021 | 8:49 AM

ಬೆಂಗಳೂರು: ಬೈಕ್ ಅಪಘಾತದಲ್ಲಿ ಮರಣ ಹೊಂದಿದ್ದ ಸಂಚಾರಿ ವಿಜಯ್ಗೆ ಇಂದು (ಜುಲೈ 17) 39 ನೇ ವರ್ಷದ ಹುಟ್ಟು ಹಬ್ಬ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟನಾದ ವಿಜಯ್ ತನ್ನದೇ ಆದ ನಟನೆ ಮೂಲಕ ಜನರ ಮನಸು ಗೆದ್ದಿದ್ದರು. ಸಿನಿಮಾ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆಯ ಕನಸು ಕಂಡಿದ್ದ ಸಂಚಾರಿ, ಜೂನ್ 15 ರಂದು ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ವಿಜಯ್ ನೆನಪಿಗಾಗಿ ಅವರ ಸ್ನೇಹಿತರು ಇಂದು ಕೆಲವು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಇಂದು ವಿಜಯ್ ನೆನಪಿಗಾಗಿ ಸ್ನೇಹಿತರ ಬಳಗ ಪ್ರಾಣಿ ಪಕ್ಷಿಗಳಿಗೆ ಗೂಡೊಂದನ್ನು ಸಿದ್ಧಮಾಡಿದ್ದು, ಮಧ್ಯಾಹ್ನ ಎಜಿಎಸ್ ಲೇಔಟ್​ನಲ್ಲಿ ಗೂಡು ಉದ್ಘಾಟನೆ ಮಾಡಲಿದೆ. ಅಲ್ಲದೇ ‘ಸಂಚಾರ ಮುಗಿಸಿದ ಪ್ರೀತಿಯ ಕಂದ.. ಚಂದನವನದ ನಟನ ಪ್ರಚಂಡ.. ನಿನ್ನೊಳಗೆ ಉರಿದಿತ್ತು ನೋವಿನ ಕೆಂಡ.. ದೇವರು ನಿನ್ನ ಪಡೆದಿದ್ದು ತಪ್ಪು ತಲೆದಂಡ..’ ಎನ್ನುವ ಸಾಲುಗಳಿಂದ ಸ್ನೇಹಿತರ ಬಳಗ, ಸಂಚಾರಿ ವಿಜಯ್ ನಿಜ ಬದುಕಿನ ಸಾರಾಂಶ ಹೇಳಿ ಅವರಿಗೆ ನಟನೆ ವಿಡಿಯೋ ಅರ್ಪಿಸಿದೆ.

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಈ ವರ್ಷ ತಮ್ಮ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುವ ಪ್ಲಾನ್ ಮಾಡಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಜೂನ್ 15 ರಂದು ಸಂಭವಿಸಿದ ಅಪಘಾತದಲ್ಲಿ ಸಂಚಾರಿ ವಿಜಯ್ ಸಾವನ್ನಪ್ಪಿದ್ದಾರೆ. ಇಂದು ಅವರ 39 ನೇ ವರ್ಷದ ಹುಟ್ಟು ಹಬ್ಬದ ಹಿನ್ನೆಲೆ ‘ಅನಂತವಾಗಿರು’ ಅನ್ನೋ ಪುಸ್ತಕವೊಂದನ್ನ ಸ್ನೇಹಿತರ ಬಳಗ ಹೊರತಂದಿದೆ.

ಅಭಿಮಾನಿಗಳಿಗೆ ಹೊಸ ಗಿಫ್ಟ್ ಲೂಸ್ ಮಾದ ಯೋಗೇಶ್ ನಾಯಕನಾಗಿ ನಟಿಸಿರುವ ‘ಲಂಕೆ’ ಚಿತ್ರದಲ್ಲಿ ಸಂಚಾರಿ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಂಚಾರಿ ವಿಜಯ್ ಹುಟ್ಟು ಹಬ್ಬದ ನೆನಪಿಗಾಗಿ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡಿದೆ.

ಇದನ್ನೂ ಓದಿ

ಸಂಚಾರಿ ವಿಜಯ್​ ದಾನ ಮಾಡಿದ ಅಂಗಗಳು ಯಾವುವು? ಉಳಿದ ಜೀವಗಳೆಷ್ಟು? ಇಲ್ಲಿದೆ ಪ್ರಮಾಣ ಪತ್ರ

ಸಂಚಾರಿ ವಿಜಯ್ ಜನ್ಮದಿನಕ್ಕೂ ಮೊದಲೇ ಅಭಿಮಾನಿಗಳಿಗೆ ಸಿಕ್ತು ವಿಶೇಷ ಗಿಫ್ಟ್​

(Sanchari Vijay’s 39th birthday today and his friends have hosted programs)

Published On - 8:46 am, Sat, 17 July 21

ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ