AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒನ್ ಅಂಡ್ ಓನ್ಲಿ ಸುಖ’: ‘S\O ಮುತ್ತಣ್ಣ’ ಸಿನಿಮಾದ ಹೊಸ ಹಾಡು

Son Of Muthanna: ಪ್ರಣಂ ದೇವರಾಜ್ ನಾಯಕನಾಗಿ, ರಂಗಾಯಣ ರಘು ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಸನ್ ಆಫ್ ಮುತ್ತಣ್ಣ’ ಸಿನಿಮಾ ಟೀಸರ್​ನಿಂದಲೇ ಈಗಾಗಲೇ ಗಮನ ಸೆಳೆದಿದೆ. ಅಪ್ಪ-ಮಗನ ಬಾಂಧವ್ಯದ ಕತೆ ಹೊಂದಿರುವ ಈ ಸಿನಿಮಾಕ್ಕೆ ಇದೀಗ ಯೋಗರಾಜ್ ಭಟ್ಟರು ಹಾಡು ಬರೆದಿದ್ದು, ಸಂಚಿತ್ ಹೆಗ್ಡೆ ಹಾಡು ಹಾಡಿದ್ದಾರೆ.

‘ಒನ್ ಅಂಡ್ ಓನ್ಲಿ ಸುಖ’: ‘S\O ಮುತ್ತಣ್ಣ’ ಸಿನಿಮಾದ ಹೊಸ ಹಾಡು
Muthanna
ಮಂಜುನಾಥ ಸಿ.
|

Updated on: May 10, 2025 | 11:20 PM

Share

ದೇವರಾಜ್ ಪುತ್ರ, ಪ್ರಜ್ವಲ್ ದೇವರಾಜ್ (Prajwal Devaraj) ಸಹೋದರ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ ‘S/O ಮುತ್ತಣ್ಣ’ ಸಿನಿಮಾ ಸೆಟ್ಟೇರಿದಾಗಿನಿಂದಲೂ ಒಂದಲ್ಲ ಒಂದು ವಿಷಯಕ್ಕೆ ಗಮನ ಸೆಳೆಯುತ್ತಿದೆ. ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಕನ್ನಡ ಚಿತ್ರರಂಗದ ಮುತ್ತಣ್ಣ ಶಿವರಾಜ್ ಕುಮಾರ್ ಅವರು ಟೀಸರ್ ಬಿಡುಗಡೆ ಮಾಡಿದ್ದರು. ಇದೀಗ ಭಟ್ಟರು ಸಾಹಿತ್ಯ ಒದಗಿಸಿರುವ ಹಾಡೊಂದನ್ನು ಸಂಚಿತ್ ಹೆಗ್ಡೆ ಇದೇ ಸಿನಿಮಾಕ್ಕೆ ಹಾಡಿದ್ದಾರೆ.

ಪುರಾತನ ಫಿಲಂಸ್ ನಿರ್ಮಾಣ ಮಾಡಿ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು ಬರೆದಿರುವ “ಒನ್ ಅಂಡ್ ಓನ್ಲಿ ಸುಖ” ಎಂಬ ಹಾಡನ್ನು ಗಾಯಕ ಸಂಚಿತ್ ಹೆಗ್ಡೆ ತಮ್ಮ ಮಧುರ ಧ್ವನಿಯಲ್ಲಿ ಹಾಡಿದ್ದಾರೆ. ಸಚಿನ್ ಬಸ್ರೂರ್ ಈ ಸಿನಿಮಾಕ್ಕೆ ಸಂಗೀತ ನೀಡಿದ್ದು, ಹಾಡುಗಳಿಗೆ ಅವರದ್ದೇ ರಾಗದ ಮಟ್ಟು. ಸಂಚಿತ್ ಹೆಗ್ಡೆ ರೆಕಾರ್ಡ್ ಮಾಡಿರುವ ಹೊಸ ಹಾಡು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.

‘S/O ಮುತ್ತಣ್ಣ’ ಸಿನಿಮಾ ತಂದೆ-ಮಗನ ಬಾಂಧವ್ಯದ ಕತೆ ಹೊಂದಿರುವ ಸಿನಿಮಾ ಆಗಿದೆ. ಸಿನಿಮಾನಲ್ಲಿ ರಂಗಾಯಣ ರಘು ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕಾರ್ಯ ನಡೆಯುತ್ತಿದೆ. ಹಾಡುಗಳ ರೆಕಾರ್ಡ್, ಡಬ್ಬಿಂಗ್ ಇನ್ನಿತರೆ ಕಾರ್ಯಗಳು ಅಂತಿಮ ಹಂತದಲ್ಲಿವೆ.

ಇದನ್ನೂ ಓದಿ:ಸೋನು ನಿಗಂ ವಿವಾದದ ಬಗ್ಗೆ ನಟ ಧನಂಜಯ್ ಮಾತು

ಜಾಕ್ ಮಂಜು ಅವರ ಮುಂದಾಳತ್ವದಲ್ಲಿ ಶಾಲಿನಿ‌ ಆರ್ಟ್ಸ್ ಸಂಸ್ಥೆ ಈ ಸಿನಿಮಾ ಅನ್ನು ಡಿಸ್ಟ್ರಿಬ್ಯೂಟ್ ಮಾಡಲಿದೆ. ಪುರಾತನ ಫಿಲಂಸ್ ನಿರ್ಮಾಣ ಮಾಡಿರುವ ಸಿನಿಮಾಗೆ ಎಸ್ ಅರ್ ಕೆ ಫಿಲಂಸ್ ಸಾಥ್ ನೀಡಿದೆ‌. ನಾಯಕ ಪ್ರಣಂ ದೇವರಾಜ್ ಅವರಿಗೆ ನಾಯಕಿಯಾಗಿ ‘ದಿಯಾ’ ಖ್ಯಾತಿಯ ಖುಷಿ ರವಿ ನಟಿಸಿದ್ದಾರೆ. ಸುಚೇಂದ್ರ ಪ್ರಸಾದ್‌, ಗಿರೀಶ್‌ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್‌ ಪ್ರಭು, ಸುಧಾ ಬೆಳವಾಡಿ, ಅರುಣ್‌ ಚಕ್ರವರ್ತಿ, ಸಂದೀಪ ಮಂಜುನಾಥ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಚಿನ್ ಬಸ್ರೂರು ಸಂಗೀತವಿರುವ ‘s/o ಮುತ್ತಣ್ಣ’ ಸಿನಿಮಾದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರಮೋದ್ ಮರವಂತೆ ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಅವರ ಸಂಕಲನ ಬಹು ನಿರೀಕ್ಷಿತ ಈ ಚಿತ್ರಕ್ಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್