AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒನ್ ಅಂಡ್ ಓನ್ಲಿ ಸುಖ’: ‘S\O ಮುತ್ತಣ್ಣ’ ಸಿನಿಮಾದ ಹೊಸ ಹಾಡು

Son Of Muthanna: ಪ್ರಣಂ ದೇವರಾಜ್ ನಾಯಕನಾಗಿ, ರಂಗಾಯಣ ರಘು ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಸನ್ ಆಫ್ ಮುತ್ತಣ್ಣ’ ಸಿನಿಮಾ ಟೀಸರ್​ನಿಂದಲೇ ಈಗಾಗಲೇ ಗಮನ ಸೆಳೆದಿದೆ. ಅಪ್ಪ-ಮಗನ ಬಾಂಧವ್ಯದ ಕತೆ ಹೊಂದಿರುವ ಈ ಸಿನಿಮಾಕ್ಕೆ ಇದೀಗ ಯೋಗರಾಜ್ ಭಟ್ಟರು ಹಾಡು ಬರೆದಿದ್ದು, ಸಂಚಿತ್ ಹೆಗ್ಡೆ ಹಾಡು ಹಾಡಿದ್ದಾರೆ.

‘ಒನ್ ಅಂಡ್ ಓನ್ಲಿ ಸುಖ’: ‘S\O ಮುತ್ತಣ್ಣ’ ಸಿನಿಮಾದ ಹೊಸ ಹಾಡು
Muthanna
Follow us
ಮಂಜುನಾಥ ಸಿ.
|

Updated on: May 10, 2025 | 11:20 PM

ದೇವರಾಜ್ ಪುತ್ರ, ಪ್ರಜ್ವಲ್ ದೇವರಾಜ್ (Prajwal Devaraj) ಸಹೋದರ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ ‘S/O ಮುತ್ತಣ್ಣ’ ಸಿನಿಮಾ ಸೆಟ್ಟೇರಿದಾಗಿನಿಂದಲೂ ಒಂದಲ್ಲ ಒಂದು ವಿಷಯಕ್ಕೆ ಗಮನ ಸೆಳೆಯುತ್ತಿದೆ. ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಕನ್ನಡ ಚಿತ್ರರಂಗದ ಮುತ್ತಣ್ಣ ಶಿವರಾಜ್ ಕುಮಾರ್ ಅವರು ಟೀಸರ್ ಬಿಡುಗಡೆ ಮಾಡಿದ್ದರು. ಇದೀಗ ಭಟ್ಟರು ಸಾಹಿತ್ಯ ಒದಗಿಸಿರುವ ಹಾಡೊಂದನ್ನು ಸಂಚಿತ್ ಹೆಗ್ಡೆ ಇದೇ ಸಿನಿಮಾಕ್ಕೆ ಹಾಡಿದ್ದಾರೆ.

ಪುರಾತನ ಫಿಲಂಸ್ ನಿರ್ಮಾಣ ಮಾಡಿ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು ಬರೆದಿರುವ “ಒನ್ ಅಂಡ್ ಓನ್ಲಿ ಸುಖ” ಎಂಬ ಹಾಡನ್ನು ಗಾಯಕ ಸಂಚಿತ್ ಹೆಗ್ಡೆ ತಮ್ಮ ಮಧುರ ಧ್ವನಿಯಲ್ಲಿ ಹಾಡಿದ್ದಾರೆ. ಸಚಿನ್ ಬಸ್ರೂರ್ ಈ ಸಿನಿಮಾಕ್ಕೆ ಸಂಗೀತ ನೀಡಿದ್ದು, ಹಾಡುಗಳಿಗೆ ಅವರದ್ದೇ ರಾಗದ ಮಟ್ಟು. ಸಂಚಿತ್ ಹೆಗ್ಡೆ ರೆಕಾರ್ಡ್ ಮಾಡಿರುವ ಹೊಸ ಹಾಡು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.

‘S/O ಮುತ್ತಣ್ಣ’ ಸಿನಿಮಾ ತಂದೆ-ಮಗನ ಬಾಂಧವ್ಯದ ಕತೆ ಹೊಂದಿರುವ ಸಿನಿಮಾ ಆಗಿದೆ. ಸಿನಿಮಾನಲ್ಲಿ ರಂಗಾಯಣ ರಘು ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕಾರ್ಯ ನಡೆಯುತ್ತಿದೆ. ಹಾಡುಗಳ ರೆಕಾರ್ಡ್, ಡಬ್ಬಿಂಗ್ ಇನ್ನಿತರೆ ಕಾರ್ಯಗಳು ಅಂತಿಮ ಹಂತದಲ್ಲಿವೆ.

ಇದನ್ನೂ ಓದಿ:ಸೋನು ನಿಗಂ ವಿವಾದದ ಬಗ್ಗೆ ನಟ ಧನಂಜಯ್ ಮಾತು

ಜಾಕ್ ಮಂಜು ಅವರ ಮುಂದಾಳತ್ವದಲ್ಲಿ ಶಾಲಿನಿ‌ ಆರ್ಟ್ಸ್ ಸಂಸ್ಥೆ ಈ ಸಿನಿಮಾ ಅನ್ನು ಡಿಸ್ಟ್ರಿಬ್ಯೂಟ್ ಮಾಡಲಿದೆ. ಪುರಾತನ ಫಿಲಂಸ್ ನಿರ್ಮಾಣ ಮಾಡಿರುವ ಸಿನಿಮಾಗೆ ಎಸ್ ಅರ್ ಕೆ ಫಿಲಂಸ್ ಸಾಥ್ ನೀಡಿದೆ‌. ನಾಯಕ ಪ್ರಣಂ ದೇವರಾಜ್ ಅವರಿಗೆ ನಾಯಕಿಯಾಗಿ ‘ದಿಯಾ’ ಖ್ಯಾತಿಯ ಖುಷಿ ರವಿ ನಟಿಸಿದ್ದಾರೆ. ಸುಚೇಂದ್ರ ಪ್ರಸಾದ್‌, ಗಿರೀಶ್‌ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್‌ ಪ್ರಭು, ಸುಧಾ ಬೆಳವಾಡಿ, ಅರುಣ್‌ ಚಕ್ರವರ್ತಿ, ಸಂದೀಪ ಮಂಜುನಾಥ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಚಿನ್ ಬಸ್ರೂರು ಸಂಗೀತವಿರುವ ‘s/o ಮುತ್ತಣ್ಣ’ ಸಿನಿಮಾದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರಮೋದ್ ಮರವಂತೆ ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಅವರ ಸಂಕಲನ ಬಹು ನಿರೀಕ್ಷಿತ ಈ ಚಿತ್ರಕ್ಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ