AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಗ ಸಂಚಿತ್ ಸಿನಿಮಾಗೆ ‘ಜಿಮ್ಮಿ’ ಟೈಟಲ್ ಕೊಟ್ಟಿದ್ದು ಯಾರು? ವಿಶೇಷ ವ್ಯಕ್ತಿ ಬಗ್ಗೆ ಸುದೀಪ್ ಮಾತು

‘ಜಿಮ್ಮಿ’ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಸಿನಿಮಾದ ಟೈಟಲ್ ಅನೇಕರಿಗೆ ಇಷ್ಟವಾಗಿದೆ. ಈ ಟೈಟಲ್ ನೀಡಿದ್ದು ಯಾರು ಎನ್ನುವ ಪ್ರಶ್ನೆಗೆ ಸುದೀಪ್ ಉತ್ತರ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 26, 2023 | 7:50 AM

Share

ಕಿಚ್ಚ ಸುದೀಪ್ (Sudeep) ಅಕ್ಕನ ಮಗ ಸಂಚಿತ್ ಸಂಜೀವ್ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅವರ ಮೊದಲ ಚಿತ್ರಕ್ಕೆ ‘ಜಿಮ್ಮಿ’ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರವನ್ನು ಸಂಚಿತ್ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಹೀರೋ ಇಂಟ್ರೋಡಕ್ಷನ್ ಟೀಸರ್ ರಿಲೀಸ್ ಮಾಡಲಾಗಿದೆ. ‘ಜಿಮ್ಮಿ’ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಸಿನಿಮಾದ ಟೈಟಲ್ ಅನೇಕರಿಗೆ ಇಷ್ಟವಾಗಿದೆ. ಈ ಟೈಟಲ್ ನೀಡಿದ್ದು ಯಾರು ಎನ್ನುವ ಪ್ರಶ್ನೆಗೆ ಸುದೀಪ್ ಉತ್ತರ ನೀಡಿದ್ದಾರೆ. ಆ ವ್ಯಕ್ತಿಯನ್ನು ಹಾಡಿ ಹೊಗಳಿದ್ದಾರೆ ಸುದೀಪ್.

‘ಜಿಮ್ಮಿ’ ಟೈಟಲ್ ನೀಡಿದ್ದು ಅನೂಪ್ ಬಂಡಾರಿ. ‘ರಂಗಿ ತರಂಗ’ ಸಿನಿಮಾ ಮೂಲಕ ಅನೂಪ್ ಖ್ಯಾತಿ ಹೆಚ್ಚಿಸಿಕೊಂಡರು. ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರವನ್ನು ಅನೂಪ್ ಬಂಡಾರಿ ನಿರ್ದೇಶನ ಮಾಡಿದ್ದರು. ಅನೂಪ್ ಬಗ್ಗೆ ಸುದೀಪ್​ಗೆ ವಿಶೇಷ ಗೌರವ ಹಾಗೂ ಪ್ರೀತಿ. ಈ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ಟೈಟಲ್ ನೀಡಿದ್ದಕ್ಕೆ ಥ್ಯಾಂಕ್ಸ್​ ಎಂದಿದ್ದಾರೆ ಸುದೀಪ್​.

‘ಜಿಮ್ಮಿ ಟೈಟಲ್ ಸಿಗೋಕೆ ಕಾರಣ ಅನೂಪ್ ಬಂಡಾರಿ. ನನಗೆ ಅನೂಪ್ ಮೇಲೆ ಅಪಾರ ಪ್ರೀತಿ, ಗೌರವ ಇದೆ. ಸಿನಿಮಾದ ಕಥೆ ರೆಡಿ ಆದಾಗ ನಾನು ಕಾಲ್ ಮಾಡಿದ್ದು ಅನೂಪ್​ಗೆ. ಸಾಮಾನ್ಯವಾಗಿ ರಾತ್ರಿ 2 ಅಥವಾ 3 ಗಂಟೆಗೆ ಅನೂಪ್​ಗೆ ಕಾಲ್ ಮಾಡ್ತೀನಿ. ಅವರೂ ಎದ್ದಿರುತ್ತಾರೆ. ಎಲ್ಲಿದೀರಾ, ಬನ್ನಿ ಟೈಟಲ್ ಬೇಕು ಎಂದೆ’ ಎಂಬುದಾಗಿ ಸುದೀಪ್ ಮಾತು ಆರಂಭಿಸಿದರು.

‘ಅನೂಪ್ ಬಂಡಾರಿ ಅವರ ಕೆಲಸ ನಂಗೆ ತುಂಬಾನೇ ಇಷ್ಟ. ಅವರ ಬಳಿ ಅನ್ನ ಕೇಳಿದ್ರೆ ಬಿರಿಯಾನಿ ಮಾಡಿ ಕೊಡ್ತಾರೆ. ಮರುದಿನ ಒಂದಷ್ಟು ಟೈಟಲ್​ನೊಂದಿಗೆ ಬಂದರು. ಆ ಟೈಟಲ್​ಗೆ ಫಾಂಟ್​ ಕೂಡ ಹಾಕಿದ್ದರು. ಎಲ್ಲರಿಗೂ ಒಟ್ಟಿಗೆ ಇಷ್ಟವಾದ ಟೈಟಲ್ ಜಿಮ್ಮಿ. ಥ್ಯಾಂಕ್​ ಯೂ ಅನೂಪ್​’ ಎಂದರು ಸುದೀಪ್.

ಇದನ್ನೂ ಓದಿ: Kichcha Sudeep: ‘K46’ ಟೀಸರ್​ ಬಗ್ಗೆ ದೊಡ್ಡ ಅಪ್​ಡೇಟ್ ನೀಡಿದ ನಟ ಕಿಚ್ಚ ಸುದೀಪ್  

ಸುದೀಪ್ ಹ್ಯಾಟ್ರಿಕ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಪೈಕಿ ಅನೂಪ್ ಜೊತೆಗೂಡಿ ಸುದೀಪ್ ಒಂದು ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ‘ಬಿಲ್ಲ ರಂಗ ಭಾಷ’ ಎಂಬ ಟೈಟಲ್ ಇಡಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಶೀಘ್ರವೇ ಘೋಷಣೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್