AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಗ ಸಂಚಿತ್ ಸಿನಿಮಾಗೆ ‘ಜಿಮ್ಮಿ’ ಟೈಟಲ್ ಕೊಟ್ಟಿದ್ದು ಯಾರು? ವಿಶೇಷ ವ್ಯಕ್ತಿ ಬಗ್ಗೆ ಸುದೀಪ್ ಮಾತು

‘ಜಿಮ್ಮಿ’ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಸಿನಿಮಾದ ಟೈಟಲ್ ಅನೇಕರಿಗೆ ಇಷ್ಟವಾಗಿದೆ. ಈ ಟೈಟಲ್ ನೀಡಿದ್ದು ಯಾರು ಎನ್ನುವ ಪ್ರಶ್ನೆಗೆ ಸುದೀಪ್ ಉತ್ತರ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 26, 2023 | 7:50 AM

Share

ಕಿಚ್ಚ ಸುದೀಪ್ (Sudeep) ಅಕ್ಕನ ಮಗ ಸಂಚಿತ್ ಸಂಜೀವ್ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅವರ ಮೊದಲ ಚಿತ್ರಕ್ಕೆ ‘ಜಿಮ್ಮಿ’ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರವನ್ನು ಸಂಚಿತ್ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಹೀರೋ ಇಂಟ್ರೋಡಕ್ಷನ್ ಟೀಸರ್ ರಿಲೀಸ್ ಮಾಡಲಾಗಿದೆ. ‘ಜಿಮ್ಮಿ’ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಸಿನಿಮಾದ ಟೈಟಲ್ ಅನೇಕರಿಗೆ ಇಷ್ಟವಾಗಿದೆ. ಈ ಟೈಟಲ್ ನೀಡಿದ್ದು ಯಾರು ಎನ್ನುವ ಪ್ರಶ್ನೆಗೆ ಸುದೀಪ್ ಉತ್ತರ ನೀಡಿದ್ದಾರೆ. ಆ ವ್ಯಕ್ತಿಯನ್ನು ಹಾಡಿ ಹೊಗಳಿದ್ದಾರೆ ಸುದೀಪ್.

‘ಜಿಮ್ಮಿ’ ಟೈಟಲ್ ನೀಡಿದ್ದು ಅನೂಪ್ ಬಂಡಾರಿ. ‘ರಂಗಿ ತರಂಗ’ ಸಿನಿಮಾ ಮೂಲಕ ಅನೂಪ್ ಖ್ಯಾತಿ ಹೆಚ್ಚಿಸಿಕೊಂಡರು. ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರವನ್ನು ಅನೂಪ್ ಬಂಡಾರಿ ನಿರ್ದೇಶನ ಮಾಡಿದ್ದರು. ಅನೂಪ್ ಬಗ್ಗೆ ಸುದೀಪ್​ಗೆ ವಿಶೇಷ ಗೌರವ ಹಾಗೂ ಪ್ರೀತಿ. ಈ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ಟೈಟಲ್ ನೀಡಿದ್ದಕ್ಕೆ ಥ್ಯಾಂಕ್ಸ್​ ಎಂದಿದ್ದಾರೆ ಸುದೀಪ್​.

‘ಜಿಮ್ಮಿ ಟೈಟಲ್ ಸಿಗೋಕೆ ಕಾರಣ ಅನೂಪ್ ಬಂಡಾರಿ. ನನಗೆ ಅನೂಪ್ ಮೇಲೆ ಅಪಾರ ಪ್ರೀತಿ, ಗೌರವ ಇದೆ. ಸಿನಿಮಾದ ಕಥೆ ರೆಡಿ ಆದಾಗ ನಾನು ಕಾಲ್ ಮಾಡಿದ್ದು ಅನೂಪ್​ಗೆ. ಸಾಮಾನ್ಯವಾಗಿ ರಾತ್ರಿ 2 ಅಥವಾ 3 ಗಂಟೆಗೆ ಅನೂಪ್​ಗೆ ಕಾಲ್ ಮಾಡ್ತೀನಿ. ಅವರೂ ಎದ್ದಿರುತ್ತಾರೆ. ಎಲ್ಲಿದೀರಾ, ಬನ್ನಿ ಟೈಟಲ್ ಬೇಕು ಎಂದೆ’ ಎಂಬುದಾಗಿ ಸುದೀಪ್ ಮಾತು ಆರಂಭಿಸಿದರು.

‘ಅನೂಪ್ ಬಂಡಾರಿ ಅವರ ಕೆಲಸ ನಂಗೆ ತುಂಬಾನೇ ಇಷ್ಟ. ಅವರ ಬಳಿ ಅನ್ನ ಕೇಳಿದ್ರೆ ಬಿರಿಯಾನಿ ಮಾಡಿ ಕೊಡ್ತಾರೆ. ಮರುದಿನ ಒಂದಷ್ಟು ಟೈಟಲ್​ನೊಂದಿಗೆ ಬಂದರು. ಆ ಟೈಟಲ್​ಗೆ ಫಾಂಟ್​ ಕೂಡ ಹಾಕಿದ್ದರು. ಎಲ್ಲರಿಗೂ ಒಟ್ಟಿಗೆ ಇಷ್ಟವಾದ ಟೈಟಲ್ ಜಿಮ್ಮಿ. ಥ್ಯಾಂಕ್​ ಯೂ ಅನೂಪ್​’ ಎಂದರು ಸುದೀಪ್.

ಇದನ್ನೂ ಓದಿ: Kichcha Sudeep: ‘K46’ ಟೀಸರ್​ ಬಗ್ಗೆ ದೊಡ್ಡ ಅಪ್​ಡೇಟ್ ನೀಡಿದ ನಟ ಕಿಚ್ಚ ಸುದೀಪ್  

ಸುದೀಪ್ ಹ್ಯಾಟ್ರಿಕ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಪೈಕಿ ಅನೂಪ್ ಜೊತೆಗೂಡಿ ಸುದೀಪ್ ಒಂದು ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ‘ಬಿಲ್ಲ ರಂಗ ಭಾಷ’ ಎಂಬ ಟೈಟಲ್ ಇಡಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಶೀಘ್ರವೇ ಘೋಷಣೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?