AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಅಳಿಯನ ಚಿತ್ರಕ್ಕೆ ‘ಮ್ಯಾಂಗೋ ಪಚ್ಚ’ ಟೈಟಲ್; ರೆಟ್ರೋ ಲುಕ್​ನಲ್ಲಿ ಸಂಚಿತ್ ಎಂಟ್ರಿ

Sanchith Sanjeev Birthday: ‘ಕಿಚ್ಚ ಸುದೀಪ್ ಅವರ ಅಳಿಯ ಸಂಚಿತ್ ಸಂಜೀವ್ ಅವರು 'ಮ್ಯಾಂಗೋ ಪಚ್ಚ' ಎಂಬ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾರೆ. ಈ ರೆಟ್ರೋ ಶೈಲಿಯ ಚಿತ್ರವು 90ರ ದಶಕದ ಹಿನ್ನೆಲೆಯನ್ನು ಹೊಂದಿದ್ದು, ಮೈಸೂರಿನಲ್ಲಿ ಚಿತ್ರೀಕರಣಗೊಳ್ಳಲಿದೆ. ಮಾಲಾಶ್ರೀ, ಮಯೂರ್ ಪಟೇಲ್, ಕಾಜಲ್ ಕುಂದರ್ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಫೆಬ್ರವರಿ 10 ರಿಂದ ಚಿತ್ರೀಕರಣ ಆರಂಭವಾಗಲಿದೆ.

ಸುದೀಪ್ ಅಳಿಯನ ಚಿತ್ರಕ್ಕೆ ‘ಮ್ಯಾಂಗೋ ಪಚ್ಚ’ ಟೈಟಲ್; ರೆಟ್ರೋ ಲುಕ್​ನಲ್ಲಿ ಸಂಚಿತ್ ಎಂಟ್ರಿ
ಸಂಚಿತ್ ಸಂಜೀವ್
ರಾಜೇಶ್ ದುಗ್ಗುಮನೆ
|

Updated on: Feb 05, 2025 | 1:58 PM

Share

ಕಿಚ್ಚ ಸುದೀಪ್ ಅವರ ಅಳಿಯ ಸಂಚಿತ್ ಸಂಜೀವ್ ಅವರು ಚಿತ್ರರಂಗಕ್ಕೆ ಎಂಟ್ರಿ ಕೊಡೋಕೆ ವೇದಿಕೆ ಸಿದ್ಧವಾಗಿದೆ. ಅವರ ಮೊದಲ ಸಿನಿಮಾದ ಕೆಲಸ ಅಧಿಕೃತವಾಗಿ ಆರಂಭ ಆಗುತ್ತಿದೆ. ಈ ಚಿತ್ರಕ್ಕೆ ‘ಮ್ಯಾಂಗೋ ಪಚ್ಚ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಸಂಚಿತ್ ಜನ್ಮದಿನದ ಪ್ರಯುಕ್ತ ಇಂದು  (ಫೆಬ್ರವರಿ 5) ಟೈಟಲ್ ಅನೌನ್ಸ್ ಆಗಿದೆ. ರೆಟ್ರೋ ಶೈಲಿಯಲ್ಲಿ ಸಿನಿಮಾ ಮೂಡಿಬರುತ್ತಿದೆ.

ಕನ್ನಡದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಿರುವ ‘ಕೆಆರ್​ಜಿ ಸ್ಟುಡಿಯೋಸ್’ ಹಾಗೂ ‘ಸುಪ್ರಿಯಾ ಪಿಕ್ಚರ್ಸ್ ಸ್ಟುಡಿಯೋ’ ಒಟ್ಟಾಗಿ ಸಂಚಿತ್ ಅವರ ಮೊದಲ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಸಿನಿಮಾದ ಕಥೆ ಮೈಸೂರಿನಲ್ಲಿ ಸಾಗಲಿದ್ದು, 90ರ ದಶಕದಲ್ಲಿ ಕಥೆ ಮೂಡಿ ಬಂದಿದೆ ಎಂದು ಹೇಳಲಾಗಿದೆ. ಈ ಸಿನಿಮಾದ ಟೈಟಲ್ ಟೀಸರ್ ಗಮನ ಸೆಳೆದಿದೆ.

‘ಕ್ರೇಜಿ ಸ್ಟಾರ್’ ಹೆಸರಿನ ಬಾರ್​ಗೆ ಇಬ್ಬರ ಆಗಮನ ಆಗುತ್ತದೆ. ಇದರಲ್ಲಿ ಒಬ್ಬರು ವಿದೇಶಿ ಮಹಿಳೆ. ಮತ್ತೋರ್ವ ಲೋಕಲ್ ಗೈಡ್. ‘ಪ್ರಳಯಾಂತಕ’ ಹೆಸರಿನ ಟೇಬಲ್ ಮೇಲೆ ವಿದೇಶಿ ಮಹಿಳೆ ಕೂರಲು ಹೋಗುತ್ತಾರೆ. ಆದರೆ, ಅಲ್ಲಿ ಕೂರಬೇಡಿ ಎಂದು ಎಲ್ಲರೂ ಕೋರುತ್ತಾರೆ. ಆ ಪ್ರಳಯಾಂತಕ ಟೇಬಲ್ ರಿಸರ್ವ್ ಆಗಿರೋದು ಪಚ್ಚನಿಗೆ! ಆಗ ಕಥಾ ನಾಯಕನ ಎಂಟ್ರಿ ಆಗುತ್ತದೆ.

ಸಂಚಿತ್ ಸಂಜೀವ್ ಅವರು ರೆಟ್ರೋ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಕಥಾ ನಾಯಕನಿಗೆ ಮ್ಯಾಂಗೋ ಪಚ್ಚ ಎಂದು ಕರೆಯೋದೇಕೆ ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಇದಕ್ಕೆ ಸಿನಿಮಾದಲ್ಲಿ ಉತ್ತರ ಸಿಗಬೇಕಿದೆ. ಈ ಚಿತ್ರದ ಪ್ರೋಮೋನ ಕಿಚ್ಚ ಸುದೀಪ್ ಅವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಸುದೀಪ್ ಅಕ್ಕನ ಮಗ ಸಂಚಿತ್ ನಟನೆಯ ಹೊಸ ಚಿತ್ರ ಅನೌನ್ಸ್​; ಕಿಚ್ಚ, ಕೆಆರ್​ಜಿ ನಿರ್ಮಾಣ

ಈ ಚಿತ್ರದಲ್ಲಿ ಮಾಲಾಶ್ರೀ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಯೂರ್ ಪಟೇಲ್, ಕಾಜಲ್ ಕುಂದರ್ ಮೊದಲಾದವರು ನಟಿಸುತ್ತಿದ್ದಾರೆ. ಈ ಚಿತ್ರವನ್ನು ವಿವೇಕ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ತಮಿಳು, ತೆಲುಗು ಮತ್ತು ಹಿಂದಿ ಸಿನಿಮಾಗಳ ತೆರೆಹಿಂದೆ ಕೆಲಸ ಮಾಡಿದ ಅನುಭವ ಅವರಿಗೆ ಇದೆ.  ಕಾರ್ತಿಕ್, ಯೋಗಿ ಜಿ ರಾಜ್, ಪ್ರಿಯಾ ಸುದೀಪ್ ಬಂಡವಾಳ ಹೂಡುತ್ತಿದ್ದಾರೆ. ಫೆಬ್ರವರಿ 10ರಿಂದ ಸಿನಿಮಾದ ಶೂಟ್ ಆರಂಭ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!