AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪತ್ನಿಗೆ ಅನೈತಿಕ ಸಂಬಂಧ ಇದೆ, ಡ್ರಗ್ಸ್ ತೆಗೆದುಕೊಳ್ಳುತ್ತಾಳೆ’; ಕನ್ನಡ ನಟ, ನಿರ್ಮಾಪಕನ ದೂರು

ಡ್ರಗ್ ಪೆಡ್ಲರ್ ಜೊತೆ ದೈಹಿಕ ಸಂಪರ್ಕ ನಡೆಸುವಾಗಲೇ ಪತ್ನಿ ಸಿಕ್ಕಿ ಬಿದ್ದಿದ್ದಾಳೆ ಎಂಬುದು ನಿರ್ಮಾಪಕನ ಆರೋಪ. ಈ ಸಂಬಂಧ ದೂರು ದಾಖಲಾಗಿದೆ.

‘ಪತ್ನಿಗೆ ಅನೈತಿಕ ಸಂಬಂಧ ಇದೆ, ಡ್ರಗ್ಸ್ ತೆಗೆದುಕೊಳ್ಳುತ್ತಾಳೆ’; ಕನ್ನಡ ನಟ, ನಿರ್ಮಾಪಕನ ದೂರು
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on: Jun 26, 2023 | 9:28 AM

ಚಿತ್ರರಂಗದಲ್ಲಿ ತೊಡಗಿಕೊಂಡಿದ್ದವರು ಸಣ್ಣ ಕಿರಿಕ್ ಮಾಡಿಕೊಂಡರೂ ಅದು ದೊಡ್ಡ ಸುದ್ದಿ ಆಗುತ್ತದೆ. ಈಗ ಚಿತ್ರರಂಗದಲ್ಲಿ ನಟನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಟಿ. ಚಂದ್ರಶೇಖರ್ (T. Chandrashekhar) ಕೌಟುಂಬಿಕ ಕಲಹ ಬೀದಿಗೆ ಬಂದಿದೆ. ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪತ್ನಿ ಮಾದಕದ್ರವ್ಯ ವ್ಯಸನಿ ಆಗಿದ್ದು, ಡ್ರಗ್ಸ್​ ಪಡೆಯಲು ಪೆಡ್ಲರ್ ಜೊತೆಯೇ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಚಂದ್ರಶೇಖರ್ ದೂರಿದ್ದಾರೆ. ಸದ್ಯ ಈ ಸಂಬಂಧ ಬೆಂಗಳೂರಿನ (Bengaluru) ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಚಾರ ಗೊತ್ತಾಗಿದ್ದು ಹೇಗೆ?

ಚಂದ್ರಶೇಖರ್ ಹೊರಗೆ ತೆರಳಿದ್ದರು. ಈ ವೇಳೆ ಡ್ರಗ್ ಪೆಡ್ಲರ್ ಇವರ ಮನೆಗೆ ಬಂದಿದ್ದನಂತೆ. ಡ್ರಗ್ ಪೆಡ್ಲರ್ ಜೊತೆ ದೈಹಿಕ ಸಂಪರ್ಕ ನಡೆಸುವಾಗಲೇ ಪತ್ನಿ ಸಿಕ್ಕಿ ಬಿದ್ದಿದ್ದಾಳೆ ಎಂಬುದು ಚಂದ್ರಶೇಖರ್ ಆರೋಪ. ಇದನ್ನು ಚಂದ್ರಶೇಖರ್ ಪ್ರಶ್ನಿಸಿದ್ದರು. ಈ ವೇಳೆ ಪತ್ನಿ ಹಾಗೂ ಡ್ರಗ್ ಪೆಡ್ಲರ್ ಎನ್ನಲಾದ ಲಕ್ಷ್ಮೀಶ್ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ. ಈ ಕಾರಣಕ್ಕೆ ಪತ್ನಿ ಹಾಗು ಆಕೆಯ ಪ್ರಿಯತಮ ಎಂದು ಆರೋಪಿಸಿರುವ ಲಕ್ಷ್ಮೀಶ್ ಪ್ರಭು ಮೇಲೆ ಚಂದ್ರಶೇಖರ್ ಕೇಸ್ ಹಾಕಿದ್ದಾರೆ.

ಡ್ರಗ್ ಬಿಡಿಸಲು ಚಂದ್ರಶೇಖರ್ ಪ್ರಯತ್ನ

‘ಪತ್ನಿ ಡ್ರಗ್ ಬಿಡಿಸಲು ಸಾಕಷ್ಟು ದಿನಗಳಿಂದ ಪ್ರಯತ್ನಿಸಿದೆ. ಆದರೆ, ಸಾಧ್ಯವಾಗಿಲ್ಲ ಆಕೆ ಡ್ರಗ್ ಪೆಡ್ಲರ್ ಜೊತೆಯೇ ಸಂಬಂಧ ಇರಿಸಿಕೊಂಡಿದ್ದಾಳೆ’ ಎಂದು ಚಂದ್ರಶೇಖರ್ ಆರೋಪಿಸಿದ್ದಾರೆ.

ಪ್ರತಿ ದೂರು ನೀಡಿದ ಪತ್ನಿ

ಇತ್ತ ಮಹಿಳೆ ಪತಿಯ ಮೇಲೆ ಪತ್ನಿ ಪ್ರತಿ ದೂರು ನೀಡಿದ್ದಾರೆ. ‘ಮನೆಯಲ್ಲಿ ಡ್ರಗ್ ಇಟ್ಟು ಅರೆಸ್ಟ್ ಮಾಡಿಸ್ತೀನಿ ಎಂದು ಚಂದ್ರಶೇಖರ್ ಬೆದರಿಕೆ ಹಾಕಿದ್ದಾರೆ. ಅಷ್ಟಲ್ಲದೆ ನನ್ನ ಸ್ನೇಹಿತ ಲಕ್ಷ್ಮೀಶ್ ಪ್ರಭುಗೆ ಥಳಿಸಲಾಗಿದೆ. ಚಾಕುವಿನಿಂದ ಹಲ್ಲೆ ಮಾಡಲಾಗಿದೆ’ ಎಂದು ಚಂದ್ರಶೇಖರ್ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲಾಗಿರುವ ನಿರ್ಮಾಪಕನ ಐಶಾರಾಮಿ ಬದುಕು ಹೀಗಿತ್ತು

ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಚಂದ್ರಶೇಖರ್

ಚಂದ್ರಶೇಖರ್ ಅವರು ನಟನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ. ‘ಹೀಗೊಂದು ದಿನ’ ಹಾಗೂ ‘ಅಪ್ಪುಗೆ’ ಹೆಸರಿನ ಚಿತ್ರಗಳನ್ನು ಅವರು ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಮಳೆ ಅಬ್ಬರ, ಈ ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ
ಮಳೆ ಅಬ್ಬರ, ಈ ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ